AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದರ ಬೆನ್ನಿಗೆ ಮತ್ತೊಂದು ಭಯಹುಟ್ಟಿಸುವ ಘಟನೆ; ಹೆದರಿ ಠಾಣೆಯಲ್ಲೇ ಶಾಂತಿಪೂಜೆ ಮಾಡಿಸಿದ ಪೊಲೀಸರು

ಇತ್ತೀಚೆಗೆ ಈ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾನ್​ಸ್ಟೆಬಲ್​ವೊಬ್ಬರಿಗೆ ಹಾವು ಕಚ್ಚಿತ್ತು. ಕಳೆದ ಈ ಠಾಣೆಯ ವ್ಯಾಪ್ತಿಯಲ್ಲೇ ಇಬ್ಬರು ಹುಡುಗಿಯರನ್ನು ಅಪಹರಣ ಮಾಡಲಾಗಿತ್ತು

ಒಂದರ ಬೆನ್ನಿಗೆ ಮತ್ತೊಂದು ಭಯಹುಟ್ಟಿಸುವ ಘಟನೆ; ಹೆದರಿ ಠಾಣೆಯಲ್ಲೇ ಶಾಂತಿಪೂಜೆ ಮಾಡಿಸಿದ ಪೊಲೀಸರು
ಪೊಲೀಸ್​ ಠಾಣೆಯಲ್ಲಿ ನಡೆದ ಶಾಂತಿ ಪೂಜೆ
TV9 Web
| Edited By: |

Updated on:Mar 09, 2022 | 11:36 AM

Share

ಆಂಧ್ರಪ್ರದೇಶದ ಕರ್ನೂಲ್​ ಜಿಲ್ಲೆಯ ಅಲ್ಲಗಡ್ಡಾ ಪಟ್ಟಣದಲ್ಲಿರುವ ಪೊಲೀಸರು ಠಾಣೆಯಲ್ಲಿಯೇ ಭಾನುವಾರ ಶಾಂತಿಪೂಜೆ ಮಾಡಿಸಿದ್ದಾರೆ. ಈ ಪೂಜೆಯ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಠಾಣೆಯಲ್ಲಿ, ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚೆಗೆ ಅಪಶಕುನದ, ಭಯಹುಟ್ಟಿಸುವ ಕೆಲವು ಘಟನೆಗಳು ನಡೆಯುತ್ತಿದೆ. ಅವುಗಳನ್ನು ತಡೆಗಟ್ಟುವ ಸಲುವಾಗಿ ಈ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ.  ಪುರೋಹಿತರನ್ನು ಠಾಣೆಗೆ ಕರೆಸಿ ಪೂಜೆ ಮಾಡಿಸಲಾಗಿದೆ. ಪುರೋಹಿತರು ಮಂತ್ರ ಹೇಳುತ್ತಿರುವ, ಪೊಲೀಸರು ಕೈಮುಗಿದು ನಿಂತಿರುವ, ಕೊನೆಯಲ್ಲಿ ತೀರ್ಥ-ಪ್ರಸಾದ ತೆಗೆದುಕೊಂಡ ದೃಶ್ಯಗಳನ್ನು ವಿಡಿಯೋದಲ್ಲಿ ನೋಡಬಹುದು.

ಇತ್ತೀಚೆಗೆ ಈ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾನ್​ಸ್ಟೆಬಲ್​ವೊಬ್ಬರಿಗೆ ಹಾವು ಕಚ್ಚಿತ್ತು. ಕಳೆದ ಈ ಠಾಣೆಯ ವ್ಯಾಪ್ತಿಯಲ್ಲೇ ಇಬ್ಬರು ಹುಡುಗಿಯರನ್ನು ಅಪಹರಣ ಮಾಡಲಾಗಿತ್ತು. ರಸ್ತೆ ಅಪಘಾತವೂ ನಡೆದಿತ್ತು. ಪಡಕಂಡ್ಲ ಬಳಿ ವ್ಯಕ್ತಿಯೊಬ್ಬ ಹಲವು ಜನರ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದ್ದ. ಈ ಪ್ರದೇಶಗಳಲ್ಲಿ ರಾಜಕೀಯ ದ್ವೇಷದ ಪ್ರಕರಣಗಳೂ ಹೆಚ್ಚುತ್ತಿವೆ.  ಹೀಗೆ ಕಳೆದ ಕೆಲವುದಿನಗಳಿಂದಲೂ ಒಂದಲ್ಲ ಒಂದು ಕೇಸ್​ಗಳು ನಡೆಯುತ್ತಲೇ ಇವೆ. ಅದೆಲ್ಲ ಪರಿಹಾರವಾಗಲಿ ಎಂಬ ಕಾರಣಕ್ಕೆ ಪೊಲೀಸರು ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಭಾಗದಲ್ಲಿ ಏನೋ ಅಗೋಚರ ಕೆಟ್ಟ ಶಕ್ತಿಯೊಂದು ಪ್ರಭಾವ ಬೀರಿದೆ ಎಂಬ ಮಾತುಗಳೂ ಹೆಚ್ಚಾಗಿದ್ದವು. ಹಾಗಾಗಿ ಸ್ಥಳೀಯ ಪುರೋಹಿತರನ್ನು ಠಾಣೆಗೆ ಕರೆಸಿ ಪೂಜೆ ನೆರವೇರಿಸಲಾಗಿದೆ. ಠಾಣೆಯ ಎಲ್ಲ ಸಿಬ್ಬಂದಿಯೂ ಇದರಲ್ಲಿ ಪಾಲ್ಗೊಂಡಿದ್ದರು. ಪೊಲೀಸ್​ ಸ್ಟೇಶನ್​ನಲ್ಲಿ ನಡೆದ ಪೂಜೆಯ ಬಗ್ಗೆ ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಈ ಬಗ್ಗೆ ಹಿರಿಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆಯನ್ನೂ ನೀಡುತ್ತಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

Puja in Andhra Pradesh

ಆಂಧ್ರಪ್ರದೇಶ ಠಾಣೆಯಲ್ಲಿ ಪೂಜೆ

ಇದನ್ನೂ ಓದಿ: ಮಂಡ್ಯ: ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ! ವೇದಿಕೆಯಲ್ಲಿ ಬಾಲಕನಿಗೆ ಮುತ್ತಿಟ್ಟ ಮಹಿಳಾ ನೃತ್ಯಗಾರರು

Published On - 11:32 am, Wed, 9 March 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ