AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ.

Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ
ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Jan 24, 2023 | 3:56 PM

Share

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ. ಏರ್ ಇಂಡಿಯಾ ತನ್ನ ಆಂತರಿಕ ಸಮಿತಿಗೆ ವಿಷಯವನ್ನು ಉಲ್ಲೇಖಿಸಲು ವಿಳಂಬ ಮಾಡಿದೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 6 ರಂದು ಏರ್​ ಇಂಡಿಯಾದಲ್ಲಿ ಪ್ರಯಾಣಿಕರೊಬ್ಬರು ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಭಾರತೀಯ ವಾಯುಯಾನ ವಾಚ್‌ಡಾಗ್ ಆಗಿರುವ ಡಿಜಿಸಿಎ ಏರ್ ಇಂಡಿಯಾ ಮೂತ್ರ ವಿಸರ್ಜನೆಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈಗ ಇಂತಹ ಘಟನೆಗಳು ಜರುಗಂತೆ ನೋಡಿಕೊಳ್ಳಲು ಅದು ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಿದೆ. ವಿಮಾನದಲ್ಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾದರೆ ವಿಮಾನಯಾನ ಸಿಬ್ಬಂದಿಗೆ ಕ್ರಮ ಕೈಗೊಳ್ಳುವುದಾಗಿ ಡಿಜಿಸಿಎ ಮಾರ್ಗಸೂಚಿಗಳು ಎಚ್ಚರಿಸಿವೆ.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಸ್ವಲ್ಪ ದಿನಗಳ ಹಿಂದೆ ಇಂತಹ ಅಹಿತಕರ ಘಟನೆಗಳ ಕಡೆಗೆ ವಿಮಾನಯಾನ ಸಂಸ್ಥೆಗಳು ಕ್ರಮ ಕೈಗೊಳ್ಳದಿರುವುದು/ಅನುಚಿತ ಕ್ರಮ/ಲೋಪವು ಸಮಾಜದ ವಿವಿಧ ವಿಭಾಗಗಳಲ್ಲಿ ವಿಮಾನ ಪ್ರಯಾಣದ ಚಿತ್ರಣವನ್ನು ಕಳಂಕಗೊಳಿಸಿದೆ ಎಂದು ಅದು ಹೇಳಿದೆ.

ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಡಿಜಿಸಿಎ, ಇತ್ತೀಚೆಗೆ, ವಿಮಾನದ ಸಮಯದಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು ಅಶಿಸ್ತಿನ ವರ್ತನೆ ಮತ್ತು ಅನುಚಿತ ವರ್ತನೆಯ ಕೆಲವು ಘಟನೆಗಳನ್ನು ಡಿಜಿಸಿಎ ಗಮನಿಸಿದೆ, ಇದರಲ್ಲಿ ಪೋಸ್ಟ್ ಹೋಲ್ಡರ್‌ಗಳು, ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?