AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ.

Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ
ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Jan 24, 2023 | 3:56 PM

Share

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ. ಏರ್ ಇಂಡಿಯಾ ತನ್ನ ಆಂತರಿಕ ಸಮಿತಿಗೆ ವಿಷಯವನ್ನು ಉಲ್ಲೇಖಿಸಲು ವಿಳಂಬ ಮಾಡಿದೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 6 ರಂದು ಏರ್​ ಇಂಡಿಯಾದಲ್ಲಿ ಪ್ರಯಾಣಿಕರೊಬ್ಬರು ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಭಾರತೀಯ ವಾಯುಯಾನ ವಾಚ್‌ಡಾಗ್ ಆಗಿರುವ ಡಿಜಿಸಿಎ ಏರ್ ಇಂಡಿಯಾ ಮೂತ್ರ ವಿಸರ್ಜನೆಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈಗ ಇಂತಹ ಘಟನೆಗಳು ಜರುಗಂತೆ ನೋಡಿಕೊಳ್ಳಲು ಅದು ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಿದೆ. ವಿಮಾನದಲ್ಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾದರೆ ವಿಮಾನಯಾನ ಸಿಬ್ಬಂದಿಗೆ ಕ್ರಮ ಕೈಗೊಳ್ಳುವುದಾಗಿ ಡಿಜಿಸಿಎ ಮಾರ್ಗಸೂಚಿಗಳು ಎಚ್ಚರಿಸಿವೆ.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಸ್ವಲ್ಪ ದಿನಗಳ ಹಿಂದೆ ಇಂತಹ ಅಹಿತಕರ ಘಟನೆಗಳ ಕಡೆಗೆ ವಿಮಾನಯಾನ ಸಂಸ್ಥೆಗಳು ಕ್ರಮ ಕೈಗೊಳ್ಳದಿರುವುದು/ಅನುಚಿತ ಕ್ರಮ/ಲೋಪವು ಸಮಾಜದ ವಿವಿಧ ವಿಭಾಗಗಳಲ್ಲಿ ವಿಮಾನ ಪ್ರಯಾಣದ ಚಿತ್ರಣವನ್ನು ಕಳಂಕಗೊಳಿಸಿದೆ ಎಂದು ಅದು ಹೇಳಿದೆ.

ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಡಿಜಿಸಿಎ, ಇತ್ತೀಚೆಗೆ, ವಿಮಾನದ ಸಮಯದಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು ಅಶಿಸ್ತಿನ ವರ್ತನೆ ಮತ್ತು ಅನುಚಿತ ವರ್ತನೆಯ ಕೆಲವು ಘಟನೆಗಳನ್ನು ಡಿಜಿಸಿಎ ಗಮನಿಸಿದೆ, ಇದರಲ್ಲಿ ಪೋಸ್ಟ್ ಹೋಲ್ಡರ್‌ಗಳು, ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ