AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಬಳಕೆಯ ಸಾಕ್ಷ್ಯ ಸಿಕ್ಕರೆ ತನಿಖೆ ನಡೆಸುತ್ತೇವೆ: ಪೆಗಾಸಸ್ ರೂಪಿಸಿದ ಎನ್​ಎಸ್​ಒ ಭರವಸೆ

ಪೆಗಾಸಸ್ ಬೇಹುಗಾರಿಕಾ ತಂತ್ರಾಂಶ ರೂಪಿಸಿದ ಮಾತೃಸಂಸ್ಥೆ ಎನ್​ಎಸ್​ಒ ತಾನು ರೂಪಿಸಿದ ತಂತ್ರಜ್ಞಾನದ ಅಕ್ರಮ ಬಳಕೆಯ ಸಾಕ್ಷ್ಯ ಸಿಕ್ಕರೆ ತನಿಖೆ ನಡೆಸುವುದಾಗಿ ಭರವಸೆ ನೀಡಿದೆ.

ಅಕ್ರಮ ಬಳಕೆಯ ಸಾಕ್ಷ್ಯ ಸಿಕ್ಕರೆ ತನಿಖೆ ನಡೆಸುತ್ತೇವೆ: ಪೆಗಾಸಸ್ ರೂಪಿಸಿದ ಎನ್​ಎಸ್​ಒ ಭರವಸೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 21, 2021 | 11:36 PM

ದೆಹಲಿ: ಇದೀಗ ಬಹುಚರ್ಚೆಯಲ್ಲಿರುವ ಪೆಗಾಸಸ್ ಬೇಹುಗಾರಿಕಾ ತಂತ್ರಾಂಶ ರೂಪಿಸಿದ ಮಾತೃಸಂಸ್ಥೆ ಎನ್​ಎಸ್​ಒ ತಾನು ರೂಪಿಸಿದ ತಂತ್ರಜ್ಞಾನದ ಅಕ್ರಮ ಬಳಕೆಯ ಸಾಕ್ಷ್ಯ ಸಿಕ್ಕರೆ ತನಿಖೆ ನಡೆಸುವುದಾಗಿ ಭರವಸೆ ನೀಡಿದೆ. ರಾಜಕಾರಿಣಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧದ ಬೇಹುಗಾರಿಕೆಗೆ ಭಾರತದಲ್ಲಿ ಪೆಗಾಸಸ್ ಬಳಕೆಯಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು.

ಮಾಧ್ಯಮ ಸಂಸ್ಥೆಗಳು ಈ ಸಂಬಂಧ ಕೇಳಿದ್ದ ಪ್ರಶ್ನೆಗಳಿಗೆ ಪೆಗಾಸಸ್ ಈವರೆಗೂ ಪ್ರತಿಕ್ರಿಯಿಸಿರಲಿಲ್ಲ. ವಿಶ್ವದ ವಿವಿಧ ದೇಶಗಳ 17 ಸಂಸ್ಥೆಗಳು ಕಳೆದ ಭಾನುವಾರದಿಂದೀಚೆಗೆ ಪೆಗಾಸಸ್ ಬಳಕೆ ಕುರಿತು ಮಾಹಿತಿಗಳನ್ನು ಬಹಿರಂಗಪಡಿಸಿದ್ದವು. ‘ನಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಈ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಪೆಗಾಸಸ್​ ಈ ಹಿಂದೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು.

‘ನಂಬಲರ್ಹ ದಾಖಲೆ ಒದಗಿಸಿದ ಎನ್​ಎಸ್​ಒ ಸಂಪೂರ್ಣ ತನಿಖೆ ನಡೆಸಲಿದೆ. ಅಗತ್ಯವಿರುವೆಡೆ ಬೇಹುಗಾರಿಕೆ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಎನ್​ಎಸ್​ಒ ವಕ್ತಾರರು ಹೇಳಿದ್ದಾರೆ. ಮಾಧ್ಯಮಗಳಲ್ಲಿ ಬಹಿರಂಗಗೊಂಡಿದ್ದ ನಿಗಾವಣೆಯಲ್ಲಿದ್ದಾರೆ ಎನ್ನಲಾದವರ ಪಟ್ಟಿಯನ್ನು ಕಳೆದ ಭಾನುವಾರದಿಂದಲೂ ಎನ್​ಎಸ್​ಒ ನಿರಾಕರಿಸುತ್ತಲೇ ಇತ್ತು.

ಅಮ್ನೆಸ್ಟಿ ಇಂಟರ್​ನ್ಯಾಷನಲ್ ಮತ್ತು ಪ್ಯಾರಿಸ್ ಮೂಲದ ಲಾಭದ ಉದ್ದೇಶವಿಲ್ಲದ ಸಂಸ್ಥೆಯೊಂದು ನೀಡಿದ ಮಾಹಿತಿ ಆಧರಿಸಿ ಆದರೆ ಹಲವು ಮಾಧ್ಯಮ ಸಂಸ್ಥೆಗಳು ಸ್ವತಂತ್ರ ತನಿಖೆ ನಡೆಸಿದ್ದವು. ಈ ವೇಳೆ ಪೆಗಾಸಸ್ ತಂತ್ರಾಂಶ ಬಳಕೆಯಾದ ಸಾಕ್ಷ್ಯಗಳು ಲಭ್ಯವಾಗಿದ್ದವು.

ಭಯೋತ್ಪಾದನೆ ಮತ್ತು ಅಪರಾಧ ಕೃತ್ಯಗಳ ತಡೆಗೆಂದು ಸಾರ್ವಭೌಮ ಸರ್ಕಾರಗಳಿಗೆ ಮಾತ್ರ ತನ್ನ ತಂತ್ರಾಂಶವನ್ನು ಒದಗಿಸಲಾಗುವುದು ಎಂದು ಎನ್​ಎಸ್​ಒ ಹೇಳಿಕೊಂಡಿತ್ತು. ಪೆಗಾಸಸ್​ ಮೂಲಕ ಬೇಹುಗಾರಿಕೆಗೆ ಒಳಪಟ್ಟವರ ಪಟ್ಟಿಯಲ್ಲಿರುವ ಹೆಸರುಗಳನ್ನು ಎನ್​ಎಸ್​ಒ ಬುಧವಾರವೂ ನಿರಾಕರಿಸಿತ್ತು. ಕಂಪನಿಯ ವಿರುದ್ಧ ಇನ್ನು ಮುಂದೆ ತಪ್ಪು ಪ್ರಚಾರ ನಡೆಸುವುದನ್ನು ಸಹಿಸಲು ಅಗುವುದಿಲ್ಲ ಎಂದು ಕಂಪನಿ ಹೇಳಿದೆ.

ಪೆಗಾಸಸ್ ತಂತ್ರಾಂಶ ಜಗತ್ತಿನ ಹಲವು ದೇಶಗಳಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ ನಂತರ ಎಚ್ಚೆತ್ತುಕೊಂಡಿರುವ ಇಸ್ರೇಲ್ ಸರ್ಕಾರವು ವಿವಿಧ ಇಲಾಖೆಗಳ ಸಚಿವರ ತಂಡವನ್ನು ರಚಿಸಿ ತನಿಖೆ ನಡೆಸಲು ಮುಂದಾಗಿದೆ. ಫ್ರಾನ್ಸ್​, ಮೆಕ್ಸಿಕೊ, ಭಾರತ, ಮೊರೆಕ್ಕೊ ಮತ್ತು ಇರಾಕ್ ದೇಶಗಳಲ್ಲಿ ಪೆಗಾಸಸ್ ಬಳಕೆಯಾಗಿರುವ ವರದಿಗಳು ಬಹಿರಂಗಗೊಂಡ ನಂತರ ಇಸ್ರೇಲ್​ಗೆ ರಾಜತಾಂತ್ರಿಕ ವಲಯಗಳಲ್ಲಿ ಸಾಕಷ್ಟು ಹಿನ್ನಡೆಯಾಗಿದೆ. ಬೇಹುಗಾರಿಕೆಗೆ ಒಳಪಟ್ಟವರ ಪಟ್ಟಿಯಲ್ಲಿ 10 ಪ್ರಧಾನಿಗಳು, ಮೂವರು ಅಧ್ಯಕ್ಷರು ಮತ್ತು ಓರ್ವ ರಾಜ ಸೇರಿದ್ದಾರೆ.

ಭಾರತದಲ್ಲಿ ಸುಪ್ರೀಂಕೋರ್ಟ್​​ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದ ಮಹಿಳೆ ಮತ್ತು 40 ಪತ್ರಕರ್ತರು, ರಾಜಕೀಯ ನಾಯಕರಾದ ರಾಹುಲ್ ಗಾಂಧಿ, ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರಿ ಹಲವರ ಮೇಲೆ ಪೆಗಾಸಸ್ ಮೂಲಕ ನಿಗಾ ಇರಿಸಲಾಗಿತ್ತು ಎಂದು ದಿ ವೈರ್ ಜಾಲತಾಣ ವರದಿ ಮಾಡಿತ್ತು.

(Pegasus maker nso says it will probe any credible proof of misuse)

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಲ್ಲೆ: ಪೆಗಾಸಸ್ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್​ ನಿಗಾ ತನಿಖೆಗೆ ಎಡಿಟರ್ಸ್​ ಗಿಲ್ಡ್​ ಆಗ್ರಹ

ಇದನ್ನೂ ಓದಿ: Explainer: ಏನಿದು ಪೆಗಾಸಸ್ ಗೂಢಚರ್ಯೆ ತಂತ್ರಾಂಶ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ?

Published On - 11:35 pm, Wed, 21 July 21

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ