AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pegasus Spyware: ಪೆಗಾಸಸ್​ ಬೆನ್ನುಹತ್ತಿರುವ ಶಂಕೆಯಿದ್ದರೆ ಜ 7ರ ಒಳಗೆ ಸಂಪರ್ಕಿಸಿ: ಸುಪ್ರೀಂಕೋರ್ಟ್​ ರೂಪಿಸಿರುವ ಆಯೋಗ ಸೂಚನೆ

ತಮ್ಮ ಮೊಬೈಲ್​ಗೆ ಪೆಗಾಸಸ್ ಸ್ಪೈವೇರ್​ ಬಂದಿದೆ ಎಂದು ಅನುಮಾನಿಸಲು ಸಮರ್ಪಕ ಕಾರಣಗಳು ಇರುವ ಭಾರತದ ಯಾವುದೇ ನಾಗರಿಕ ಸಮಿತಿಯ ಎದುರು ತನ್ನ ಅಹವಾಲು ಸಲ್ಲಿಸಬಹುದು ಎಂದು ಸಮಿತಿಯು ಸೂಚಿಸಿದೆ.

Pegasus Spyware: ಪೆಗಾಸಸ್​ ಬೆನ್ನುಹತ್ತಿರುವ ಶಂಕೆಯಿದ್ದರೆ ಜ 7ರ ಒಳಗೆ ಸಂಪರ್ಕಿಸಿ: ಸುಪ್ರೀಂಕೋರ್ಟ್​ ರೂಪಿಸಿರುವ ಆಯೋಗ ಸೂಚನೆ
TV9 Web
| Edited By: |

Updated on: Jan 03, 2022 | 6:00 AM

Share

ದೆಹಲಿ: ಪೆಗಾಸಸ್ ಸ್ಪೈವೇರ್ ಮೂಲಕ ತಮ್ಮ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂಬ ಅನುಮಾನ ಇರುವವರು ತಮ್ಮನ್ನು ಜನವರಿ 7ರ ಮಧ್ಯಾಹ್ನದ ಒಳಗೆ ಸಂಪರ್ಕಿಸಬೇಕು ಎಂದು ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ಸೂಚಿಸಿದೆ. ತಮ್ಮ ಮೊಬೈಲ್​ಗೆ ಪೆಗಾಸಸ್ ಸ್ಪೈವೇರ್​ ಬಂದಿದೆ ಎಂದು ಅನುಮಾನಿಸಲು ಸಮರ್ಪಕ ಕಾರಣಗಳು ಇರುವ ಭಾರತದ ಯಾವುದೇ ನಾಗರಿಕ ಸಮಿತಿಯ ಎದುರು ತನ್ನ ಅಹವಾಲು ಸಲ್ಲಿಸಬಹುದು ಎಂದು ಸಮಿತಿಯು ಸೂಚಿಸಿದೆ. ನಿಮ್ಮ ಮೊಬೈಲ್​ ಪರಿಶೀಲಿಸಲು ತಾಂತ್ರಿಕ ಸಮಿತಿಗೆ ಅವಕಾಶ ಕೊಡುತ್ತೀರಾ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಮೂವರು ಸದಸ್ಯರ ಸಮಿತಿಯು ಕೆಲ ಪ್ರಮುಖ ದಿನ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತಿನಲ್ಲಿ ಸ್ಪಷ್ಟಪಡಿಸಿದೆ. ಜನರು ನೀಡುವ ಕಾರಣಗಳು ಪರಿಶೀಲನೆಗೆ ಅರ್ಹ ಎನಿಸಿದರೆ ಸಮಿತಿಯು ಫೋನ್​ಗಳನ್ನು ತಪಾಸಣೆಗೆ ನೀಡುವಂತೆ ವಿನಂತಿಸಬಹುದು

ಸಮಿತಿಯು ಅರ್ಜಿದಾರರು ಮತ್ತು ಅವರ ವಕೀಲರಿಗೆ ಪೆಗಾಸಸ್ ಸ್ಪೈವೇರ್​ನಿಂದ ಕಣ್ಗಾವಲು ಇರಿಸಲಾಗಿದೆ ಎಂಬ ಅನುಮಾನವಿದ್ದರೆ ಅವರ ಸಾಧನಗಳನ್ನು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಸಮಿತಿಗೆ ಒಪ್ಪಿಸಬೇಕು ಎಂದು ಸಮಿತಿಯು ಈ ಹಿಂದೆ, ನವೆಂಬರ್ 30ರಂದು ತಿಳಿಸಿತ್ತು.

ಸಮಿತಿಯಲ್ಲಿ ಗಾಂಧಿನಗರ ನ್ಯಾಷನಲ್ ಫೊರೆನ್ಸಿಕ್ ಸೈನ್ಸಸ್ ಯೂನಿವರ್ಸಿಟಿಯ ಡೀನ್ ಡಾ.ನವೀನ್ ಕುಮಾರ್ ಚೌಧರಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಡಾ.ಪಿ.ಪ್ರಭಾಕರನ್, ಐಐಟಿ ಬಾಂಬೆಯ ಪ್ರಾಧ್ಯಾಪಕ ಡಾ.ಅಶ್ವಿನ್ ಅನಿಲ್ ಗುಮಾಸ್ತೆ ಈ ಸಮಿತಿಯಲ್ಲಿದ್ದಾರೆ. ಈ ಸಮಿತಿಯ ಕಾರ್ಯಚಟುವಟಿಕೆಗಳನ್ನು ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಆರ್​.ವಿ.ರವೀಂದ್ರನ್ ಪರಿಶೀಲಿಸುತ್ತಿದ್ದಾರೆ.

ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ಅಧಿಕಾರಿಗಳು ಹಾಗೂ ಕೆಲ ಕೇಂದ್ರ ಸಚಿವರ ಮೇಲೆ ಕಣ್ಗಾವಲು ಇರಿಸಲಲು ಪೆಗಾಸಸ್ ಬಳಕೆಯಾಗುತ್ತಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಕೆಲ ಪತ್ರಕರ್ತರು ಮತ್ತು ಸಾಮಾಜಿಕ ಹೋರಾಟಗಾರರು ಈ ಸಂಬಂಧ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್​ ಮೆಟ್ಟಿಲು ಏರಿದ್ದರು. ಅಕ್ಟೋಬರ್ 27ರಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು ಮೂವರು ಸದಸ್ಯರಿರುವ ತಾಂತ್ರಿಕ ಸಮಿತಿ ಸಮತಿ ರಚಿಸಿತ್ತು. ಈ ಸಮಿತಿಯ ಕಾರ್ಯನಿರ್ವಹಣೆಯ ಉಸ್ತುವಾರಿ ಗಮನಿಸುವಂತೆ ನ್ಯಾಯಮೂರ್ತಿ ರವೀಂದ್ರನ್ ಅವರಿಗೆ ಸೂಚಿಸಿತ್ತು.

ಇದನ್ನೂ ಓದಿ: Pegasus Spyware: ದೇಶಕ್ಕಿಂತ ಪ್ರಧಾನಿ ಮೋದಿ ದೊಡ್ಡವರೇನಲ್ಲ’; ಪೆಗಾಸಸ್ ಕುರಿತ ಸುಪ್ರೀಂ ತೀರ್ಪಿನ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ ಇದನ್ನೂ ಓದಿ: ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​