AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಆಯ್ಕೆ

ಅರುಣಾಚಲ ಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ ಐದು ಸ್ಥಾನಗಳನ್ನು, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳನ್ನು, ಎರಡು ಸ್ಥಾನಗಳನ್ನು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ,  ಕಾಂಗ್ರೆಸ್ ಒಂದು ಮತ್ತು ಮೂರು ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ.

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಆಯ್ಕೆ
ಪೇಮಾ ಖಂಡು
ರಶ್ಮಿ ಕಲ್ಲಕಟ್ಟ
|

Updated on:Jun 12, 2024 | 7:07 PM

Share

ದೆಹಲಿ ಜೂನ್ 12: ರಾಜ್ಯದಲ್ಲಿ ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾದ ನಂತರ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ. ಖಂಡು ಅವರು ರಾಜ್ಯಪಾಲ ಕೆಟಿ ಪರ್ನಾಯಕ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಖಂಡು ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಬಿಜೆಪಿಯ ಹಿರಿಯ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಲಾಗಿದೆ.

ಅರುಣಾಚಲ ಪ್ರದೇಶದಲ್ಲಿ ಪೆಮಾ ಖಂಡು ನೇತೃತ್ವದ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ ಐದು ಸ್ಥಾನಗಳನ್ನು, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳನ್ನು, ಎರಡು ಸ್ಥಾನಗಳನ್ನು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ,  ಕಾಂಗ್ರೆಸ್ ಒಂದು ಮತ್ತು ಮೂರು ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ. NPP ಬಿಜೆಪಿ ಸರ್ಕಾರಕ್ಕೆ ಬೆಂಬಲವನ್ನು ನೀಡಿದೆ. ಆದರೆ ಹೊಸ ಕ್ಯಾಬಿನೆಟ್‌ನಲ್ಲಿ ಪಕ್ಷಕ್ಕೆ ಪ್ರಾತಿನಿಧ್ಯ ಸಿಗುವ ಸಾಧ್ಯತೆಯಿಲ್ಲ.

ಪೇಮಾ ಖಂಡು ಪರಿಚಯ

ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಪ್ರಮುಖ ರಾಜಕೀಯ ಕುಟುಂಬದಲ್ಲಿ ಜನಿಸಿದ ಪೇಮಾ ಖಂಡು ಅವರು ತಮ್ಮ ಆರಂಭಿಕ ಶಿಕ್ಷಣವನ್ನು ತವಾಂಗ್‌ನಲ್ಲಿ ಪೂರ್ಣಗೊಳಿಸಿದರು. ನಂತರ ನವದೆಹಲಿಯ ಪ್ರತಿಷ್ಠಿತ ಹಿಂದೂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು. 2011 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಅವರ ತಂದೆ ದೋರ್ಜಿ ಖಂಡು ಅವರ ಮರಣದ ನಂತರ ಪೆಮಾ ಖಂಡು ಅವರ ರಾಜಕೀಯ ಜೀವನವು ಪ್ರಾರಂಭವಾಯಿತು. ಅವರು 2011 ರಲ್ಲಿ ಅರುಣಾಚಲ ಪ್ರದೇಶ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದರು. ಅದು ಈ ಹಿಂದೆ ಅವರ ತಂದೆ ಹೊಂದಿದ್ದ ಸ್ಥಾನವಾಗಿತ್ತು.

2016 ರಲ್ಲಿ, ನಬಮ್ ತುಕಿ ಅವರ ಉತ್ತರಾಧಿಕಾರಿಯಾಗಿ ಪೆಮಾ ಖಂಡು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸೆಪ್ಟೆಂಬರ್‌ನಲ್ಲಿ, ಅವರು ಪ್ರಾದೇಶಿಕ ಪಕ್ಷವಾದ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲಕ್ಕೆ (ಪಿಪಿಎ) ಪಕ್ಷಾಂತರ ಮಾಡಲು ಕಾಂಗ್ರೆಸ್ ಶಾಸಕರ ಗುಂಪನ್ನು ಮುನ್ನಡೆಸಿದರು. ಆ ಮೂಲಕ ಪಿಪಿಎ ನೇತೃತ್ವದಲ್ಲಿ ಮುಖ್ಯಮಂತ್ರಿಯಾದರು. ಡಿಸೆಂಬರ್ ವೇಳೆಗೆ, ಪೇಮಾ ಖಂಡು ಮತ್ತು ಅವರ ಗುಂಪು ಬಿಜೆಪಿಗೆ ಪುನಃ ಸೇರ್ಪಡೆಗೊಂಡಿದ್ದು, ಬಿಜೆಪಿ ನಾಯಕತ್ವದಲ್ಲಿ ಮುಖ್ಯಮಂತ್ರಿಯಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದರು.

2024 ರ ವಿಧಾನಸಭಾ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು ಭಾರಿ ವಿಜಯವನ್ನು ದಾಖಲಿಸಿದ ನಂತರ, ಖಂಡು ಇದನ್ನು “ಐತಿಹಾಸಿಕ ದಿನ” ಎಂದು ಬಣ್ಣಿಸಿದ್ದಾರೆ. ಫಲಿತಾಂಶಗಳು ರಾಜ್ಯ ಸರ್ಕಾರಕ್ಕೆ “ಪರವಾದ ಅಧಿಕಾರ” ತೋರಿಸಿದೆ ಎಂದು ಅವರು ಹೇಳಿದ್ದಾರೆ. “ಇದು ಅರುಣಾಚಲ ಪ್ರದೇಶಕ್ಕೆ, ವಿಶೇಷವಾಗಿ ಬಿಜೆಪಿಗೆ ಐತಿಹಾಸಿಕ ದಿನವಾಗಿದೆ. ಈ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೊಸ ದಾಖಲೆಯನ್ನು ಮಾಡಿದೆ. ಬಿಜೆಪಿಯಲ್ಲಿ ಅಧಿಕಾರದ ಪರವಿದೆ. 2019 ರಲ್ಲಿ ನಾವು 41 ಸ್ಥಾನಗಳನ್ನು ಗೆದ್ದಿದ್ದೇವೆ ಮತ್ತು 2024 ರಲ್ಲಿ ನಾವು 46 ಸ್ಥಾನಗಳನ್ನು ಗೆದ್ದಿದ್ದೇವೆ ಎಂದಿದ್ದಾರೆ ಅವರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Wed, 12 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ