AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್: ವಿದ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಕೇವಲ ಬ್ಲೇಜರ್​ನಲ್ಲಿ ಮನೆಗೆ ಕಳುಹಿಸಿದ ಪ್ರಾಂಶುಪಾಲರು

ಶಾಲೆಯ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಬ್ಲೇಜರ್​ನಲ್ಲಿ ಮನೆಗೆ ಕಳುಹಿಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಶಾಲೆಯ ಪ್ರಾಂಶುಪಾಲರು ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೇಸರಗೊಂಡು ಈ ಕ್ರಮ ಕೈಗೊಂಡಿದ್ದರು.ಕೆಲವು ಚಟುವಟಿಕೆಗಳ ಬಗ್ಗೆ ಪ್ರಾಂಶುಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು, ಆಚರಣೆ ಬಳಿಕ ವಿದ್ಯಾರ್ಥಿನಿಯರನ್ನು ಕರೆದು ಅವರಿಗೆ ಶರ್ಟ್​ ಬಿಚ್ಚಿ ಕೇವಲ ಬ್ಲೇಜರ್ ಧರಿಸುವಂತೆ ಹೇಳಲಾಯಿತು.

ಜಾರ್ಖಂಡ್: ವಿದ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಕೇವಲ ಬ್ಲೇಜರ್​ನಲ್ಲಿ ಮನೆಗೆ ಕಳುಹಿಸಿದ ಪ್ರಾಂಶುಪಾಲರು
ಶಾಲೆImage Credit source: India Today
ನಯನಾ ರಾಜೀವ್
|

Updated on:Jan 12, 2025 | 8:56 AM

Share

ಜಾರ್ಖಂಡ್​ ಶಾಲೆಯ ಪ್ರಾಂಶುಪಾಲರ ಕ್ರಮದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಕೇವಲ ಬ್ಲೇಜರ್​ ಧರಿಸಿ ಮನೆಗೆ ಹೋಗುವಂತೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಶಾಲೆಯ ಪ್ರಾಂಶುಪಾಲರು ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೇಸರಗೊಂಡು ಈ ಕ್ರಮ ಕೈಗೊಂಡಿದ್ದರು.

10ನೇ ತರಗತಿ ವಿದ್ಯಾರ್ಥಿನಿಯರಿಗೆ ಯೂನಿಫಾರ್ಮ್​ನ ಶರ್ಟ್​ ತೆಗೆಯುವಂತೆ ಹೇಳಿ ಕೇವಲ ಬ್ಲೇಜರ್​ ಧರಿಸಿ ಮನೆಗೆ ಹೋಗುವಂತಹ ದಂಡನೆ ನೀಡಿದ್ದಾರೆ. ವಿದ್ಯಾರ್ಥಿಗಳು ಪೆನ್​ ಡೇ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೆಲವು ಚಟುವಟಿಕೆಗಳ ಬಗ್ಗೆ ಪ್ರಾಂಶುಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು, ಆಚರಣೆ ಬಳಿಕ ವಿದ್ಯಾರ್ಥಿನಿಯರನ್ನು ಕರೆದು ಅವರಿಗೆ ಶರ್ಟ್​ ಬಿಚ್ಚಿ ಕೇವಲ ಬ್ಲೇಜರ್ ಧರಿಸುವಂತೆ ಹೇಳಲಾಯಿತು. ಅದೇ ಸ್ಥಿತಿಯಲ್ಲಿ ಮನೆಗೆ ಕಳುಹಿಸಲಾಯಿತು.

ಘಟನೆ ಬಗ್ಗೆ ಕಣ್ಣೀರು ಹಾಕುತ್ತಾ ಮನೆಯವರಿಗೆ ಮಕ್ಕಳು ವಿವರಿಸಿದ್ದಾರೆ. ಸಂಕಟಕ್ಕೊಳಗಾದ ವಿದ್ಯಾರ್ಥಿಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಹಲವರು ಈ ದಿನವನ್ನು ಆಘಾತಕಾರಿ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ:ಕಂಠಪೂರ್ತಿ ಕುಡಿದ ಪ್ರಿನ್ಸಿಪಾಲ್​ನಿಂದ ಶಿಕ್ಷಕಿಗೆ ಆಲ್ಕೋಹಾಲ್ ಸೇವಿಸಿ, ಸಿಗರೇಟ್ ಸೇದಲು ಒತ್ತಾಯ

ಘಟನೆ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಅನೇಕರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳೀಯ ಶಾಸಕಿ ರಾಗಿಣಿ ಸಿಂಗ್ ಕೂಡ ಪೋಷಕರ ಜೊತೆಗಿದ್ದು, ಘಟನೆ ದುರದೃಷ್ಟಕರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸಿದ್ದಾರೆ.

ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ಅವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ, ಪೋಷಕರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮಿಶ್ರಾ ಪೋಷಕರು ಮತ್ತು ಶಾಸಕರಿಗೆ ಭರವಸೆ ನೀಡಿದರು.

ಘಟನೆಯ ತನಿಖೆಗಾಗಿ ಸಮಿತಿಯನ್ನು ರಚಿಸುವುದಾಗಿ ಅವರು ಘೋಷಿಸಿದರು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಭರವಸೆ ನೀಡಿದರು. ಈ ಪ್ರಕರಣದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಬದ್ಧವಾಗಿದೆ ಎಂದು ರಾಗಿಣಿ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:55 am, Sun, 12 January 25

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ