AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆ; 227 ಮಂದಿ ಅಸ್ವಸ್ಥ

ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡಿದ್ದು 227 ಮಂದಿ ಅಸ್ವಸ್ಥರಾಗಿದ್ದಾರೆ.

ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆ; 227 ಮಂದಿ ಅಸ್ವಸ್ಥ
ಏಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 06, 2020 | 6:27 PM

Share

ಏಲೂರು (ಆಂಧ್ರ ಪ್ರದೇಶ): ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡಿದ್ದು 227 ಮಂದಿ ಅಸ್ವಸ್ಥರಾಗಿದ್ದಾರೆ. ಜನರು ಅಸ್ವಸ್ಥರಾಗಲು ಕಲುಷಿತ ನೀರು ಸೇವನೆ ಅಥವಾ ವೈರಲ್ ಮೆದುಳು ಜ್ವರವೂ ಆಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏಲೂರು ಪಟ್ಟಣದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆವರೆಗೆ 140 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದಾರೆ. ವಾಕರಿಕೆ ಮತ್ತು ಪ್ರಜ್ಞೆ ತಪ್ಪುವುದು ರೋಗ ಲಕ್ಷಣಗಳಾಗಿವೆ. ಆದರೆ ಇದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಎಲೂರು ಸರ್ಕಾರಿ ಆಸ್ಪತ್ರೆ ಸುಪರಿಟೆಂಡೆಂಟ್ ಡಾ. ಮೋಹನ್ ಅವರು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೋಗ ಪತ್ತೆ ಹಚ್ಚುವುದಕ್ಕಾಗಿ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಮುತ್ಯಾಲ ರಾಜು ಹೇಳಿದ್ದಾರೆ.

10 ದಿನಗಳ ಹಿಂದೆ ಏಲೂರು ಪಟ್ಟಣದ ಅಶೋಕ್ ನಗರ್ ಮತ್ತು ಆರುಂಧತ್​​ಪೇಟ್​ನಲ್ಲಿರುವ ನಾಲ್ಕು ವಸತಿ ಸಮುಚ್ಛಯಗಳ ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದರು. ಏಲೂರು ಪಟ್ಟಣದಲ್ಲಿರುವ ವೈದ್ಯರಿಗೆ ಸಹಾಯ ಮಾಡಲು ಮತ್ತು ರೋಗದ ಮೂಲ ಪತ್ತೆ ಹಚ್ಚಲು ವೈದ್ಯರ ತಂಡವೊಂದು ವಿಜಯವಾಡದಿಂದ ಹೊರಟಿದೆ ಎಂದು ಆರೋಗ್ಯ ಸಚಿವ ಎ. ಕಾಳಿ ಕೃಷ್ಣ ಶ್ರೀನಿವಾಸ್ ಹೇಳಿದ್ದಾರೆ.

ಮಕ್ಕಳು ಹೆಚ್ಚಾಗಿ ಅಸ್ವಸ್ಥರಾಗುತ್ತಿದ್ದಾರೆ. ದಿಢೀರನೆ ವಾಂತಿಯಾಗಿ ಕಣ್ಣು ಉರಿ ಕಾಣಿಸಿಕೊಳ್ಳುತ್ತದೆ. ಕೆಲವೊಬ್ಬರು ಪ್ರಜ್ಞೆ ತಪ್ಪಿ ಬೀಳುತ್ತಾರೆ. ಶನಿವಾರ ಕೆಲವರು ಆಸ್ಪತ್ರೆಗೆ ದಾಖಲಾದಾಗ ಚಿಂತಾಜನಕ ಸ್ಥಿತಿಯಲ್ಲಿದ್ದರು. ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಏಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹೇಳಿದ್ದಾರೆ. ಈಗಾಗಲೇ ಆಸ್ಪತ್ರೆಯಲ್ಲಿ ಹೆಚ್ಚುವರಿ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ