AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್

Dattatreya Hosabale ಧಾರವಾಡದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು  “ಮತಾಂತರಗೊಳ್ಳುವ ಜನರಿದ್ದಾರೆ ಮತ್ತು ಅವರು ಮತಾಂತರಗೊಂಡಿದ್ದಾರೆಂದು ಬಹಿರಂಗಪಡಿಸುವುದಿಲ್ಲ. ಅವರು ದುಪ್ಪಟ್ಟು ಲಾಭ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್
ದತ್ತಾತ್ರೇಯ ಹೊಸಬಾಳೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 31, 2021 | 1:04 PM

Share

ಧಾರವಾಡ: ದೇಶದಲ್ಲಿ ಧಾರ್ಮಿಕ ಮತಾಂತರಗಳನ್ನು ನಿಲ್ಲಿಸಬೇಕು ಮತ್ತು ತಮ್ಮ ನಂಬಿಕೆಯನ್ನು ಬದಲಾಯಿಸುವ ವ್ಯಕ್ತಿಗಳು ಅದನ್ನೇ ಘೋಷಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ (Dattatreya Hosabale) ಅವರು  “ಮತಾಂತರಗೊಳ್ಳುವ ಜನರಿದ್ದಾರೆ ಮತ್ತು ಅವರು ಮತಾಂತರಗೊಂಡಿದ್ದಾರೆಂದು ಬಹಿರಂಗಪಡಿಸುವುದಿಲ್ಲ. ಅವರು ದುಪ್ಪಟ್ಟು ಲಾಭ ಪಡೆಯುತ್ತಾರೆ ಎಂದು ಹೇಳಿದ್ದಾರೆ.  ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಮತಾಂತರ ವಿರೋಧಿ ಕಾನೂನುಗಳನ್ನು ವಿರೋಧಿಸುವುದು “ತೆರೆದ ರಹಸ್ಯ” ಎಂದು ಹೊಸಬಾಳೆ ಅವರು ಹೇಳಿದರು.

ದಕ್ಷಿಣ ರಾಜ್ಯದಲ್ಲಿ ಆರ್‌ಎಸ್‌ಎಸ್‌ನ ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕರ್ತರ ಮಂಡಲ (ಎಬಿಕೆಎಂ) ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, “ಯಾವುದೇ ವಿಧಾನಗಳಿಂದ ಸಂಖ್ಯೆಯನ್ನು ಹೆಚ್ಚಿಸುವುದು, ಮೋಸದ ಅಥವಾ ಇತರ ವಿಧಾನಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಅವರು ಹೇಳಿದರು.

ಭಾರತದ 10 ಕ್ಕೂ ಹೆಚ್ಚು ರಾಜ್ಯಗಳು ಭಾರತದಲ್ಲಿ ಮತಾಂತರ ವಿರೋಧಿ ಮಸೂದೆಗಳನ್ನು ಅಂಗೀಕರಿಸಿವೆ. ಪ್ರಸ್ತುತ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಮೊದಲು ಹಿಮಾಚಲ ಪ್ರದೇಶದಲ್ಲಿ ಪಕ್ಷವು ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ವಿದರ್ಭ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಸೂದೆಯನ್ನು ಅಂಗೀಕರಿಸಿದೆ ಎಂದು ಅವರು ಆರೋಪಿಸಿದರು. “ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದೆ. ಗೆಗಾಂಗ್ ಅಪಾಂಗ್ ಅವರು ಮುಖ್ಯಮಂತ್ರಿಯಾಗಿದ್ದರು,” ಎಂದು ಹೊಸಬಾಳೆ ಹೇಳಿದ್ದಾರೆ.

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಉಲ್ಲೇಖಿಸಿದ ಹೊಸಬಾಳೆ, ಧಾರ್ಮಿಕ ಮತಾಂತರದ ಬಗ್ಗೆ ರಾಷ್ಟ್ರೀಯ ಚರ್ಚೆಯನ್ನು ಪ್ರಾರಂಭಿಸಲು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ ಎಂದು ಹೇಳಿದರು. ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಧರ್ಮವನ್ನು ಬದಲಾಯಿಸುವ ಸ್ವಾತಂತ್ರ್ಯವಿದ್ದರೂ, ಇಂದು ನಡೆಯುತ್ತಿರುವುದು ಅದಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಬಿಜೆಪಿ ಆಡಳಿತವಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳು ಮತಾಂತರ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿವೆ. ಏತನ್ಮಧ್ಯೆ, ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯದಲ್ಲೂ ಇದೇ ರೀತಿಯ ಮಸೂದೆಯನ್ನು ಪರಿಚಯಿಸಲು ಮುಂದಾಗಿದೆ, ಇದು ಕ್ರಿಶ್ಚಿಯನ್ ಸಮುದಾಯದಿಂದ ಆಕ್ಷೇಪ ಎದುರಿಸಿದೆ. ಬೆಂಗಳೂರು ಆರ್ಚ್ ಬಿಷಪ್ ಅವರು ಇತ್ತೀಚೆಗೆ ಈ ಮಸೂದೆಯನ್ನು “ಅನಗತ್ಯ” ಎಂದು ಬಣ್ಣಿಸಿದ್ದಾರೆ ಮತ್ತು ಇದು ರಾಜ್ಯದಲ್ಲಿ ಧಾರ್ಮಿಕ ಸಾಮರಸ್ಯವನ್ನು ಹಾಳುಮಾಡುತ್ತದೆ ಎಂದು ಹೇಳಿದ್ದಾರೆ.

ಆದಾಗ್ಯೂ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ಈ ವರ್ಷದ ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಮತಾಂತರ ವಿರೋಧಿ ಕಾನೂನನ್ನು ಹೇರಲು ಯೋಜಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಎಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಭಾರತದಲ್ಲಿ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕಠಿಣ ಕಾನೂನನ್ನು ಕೋರುವ ಮನವಿಯನ್ನು ರದ್ದುಗೊಳಿಸಿತು. ಅಂತಹ ನಿರ್ದೇಶನವು “ಅತ್ಯಂತ ಹಾನಿಕಾರಕ” ಮತ್ತು ಪ್ರತಿಯೊಬ್ಬ ವಯಸ್ಕನು ತಮ್ಮ ಇಚ್ಛೆಯ ನಂಬಿಕೆಯನ್ನು ಆಯ್ಕೆ ಮಾಡಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿತ್ತು.

ಇದನ್ನೂ ಓದಿ: ಮಂತ್ರಾಲಯದಲ್ಲಿ ಪುನೀತ್ ಬಂದಾಗ ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಪೀಠಾಧಿಪತಿಗಳಿಂದ ಸ್ಪಷ್ಟನೆ

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ