AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್ ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ. ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ […]

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್  ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2020 | 1:45 PM

Share

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ.

ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚಿಸಿದ ಚಿಕಿತ್ಸಾ ವಿಧಾನವೇ ಬೇಡ. ಸೋಂಕಿತರನ್ನು ಬೇರೆ ಇಡುವುದಾಗಲೀ, ಬೇರೆ ಬೇರೆ ಪರೀಕ್ಷೆ ಮಾಡುವುದಾಗಲಿ ಬೇಡ ಎಂಬ ವಿಡಿಯೋ ಹರಿದಾಡುತ್ತಿತ್ತು. ಈಗ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್​ ಮತ್ತು ಇನ್ನಿತರೆ ಸಂಸ್ಥೆಗಳು ಸುದ್ದಿ ಮೂಲ ಹುಡುಕಿ ಇದು ಸುಳ್ಳು ಎಂದು ಸಾರಿವೆ.

ಡಾ. ಮಾರಿಯಾ ಹೇಳಿದ್ದೇನು? ನಮ್ಮ ಬಳಿ ಇರುವ ದತ್ತಾಂಶದ (data) ಪ್ರಕಾರ, ರೋಗದ ಲಕ್ಷಣ ಇಲ್ಲದ (asymptomatic) ಕೊರೊನಾ ರೋಗಿಗಳು ರೋಗವನ್ನು ಹರಡುತ್ತಾರೆ ಎಂಬದು ಪ್ರಾಯಶಃ ಅಸಾಧ್ಯ ಎಂದು ಅವರು ಹೇಳಿದ್ದಾರೆ. ಆ ವಿಡಿಯೋ ಇಟ್ಟುಕೊಂಡು ಒಂದು ಮಾಹಿತಿಯನ್ನ ತಯಾರು ಮಾಡುತ್ತಾರೆ. ಆ ಪ್ರಕಾರ, ವಿ.ಸಂ. ಉಲ್ಟಾ ಹೊಡೀತು (WHO makes U-turn) ಎಂಬ ಸಂದೇಶ ಸಾಮಾಜಿಕ ಜಾಲತಾಣದ ಸಂದೇಶ ಹರಿದಾಡಿತು. ಆದರೆ, ವಿ.ಸಂ. (WHO) ವೆಬ್ ಸೈಟ್ ನಲ್ಲಿ ಇದುವರೆಗೂ ಈ ಕುರಿತು ಯಾವ ಮಾಹಿತಿಯೂ ಇಲ್ಲ. ಅಂದರೆ, ಈ ಮೊದಲೇ ಹೇಳಿದಂತೆ, ಉಸಿರು ಮತ್ತು ಎಂಜಲು ಮುಂತಾದವುಗಳ ಮೂಲಕ ಈ ವೈರಸ್ ಇನ್ನೊಬ್ಬರಿಗೆ ಹೇಗೆ ಹರಡುತ್ತೆ ಎಂಬ ಅಂಶವಾಗಲೀ ಹಾಗೂ ಕೊರೊನಾ ಚಿಕಿತ್ಸಾ ವಿಧಾನ ಪದ್ಧತಿಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಇದನ್ನು ಜನ ಗಮನಿಸಬೇಕು ಮತ್ತು ಸುಳ್ಳು ಸುದ್ದಿಗೆ ಕಿವಿಗೊಡಬಾರದು.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ