AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್ ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ. ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ […]

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್  ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Oct 23, 2020 | 1:45 PM

Share

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ.

ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚಿಸಿದ ಚಿಕಿತ್ಸಾ ವಿಧಾನವೇ ಬೇಡ. ಸೋಂಕಿತರನ್ನು ಬೇರೆ ಇಡುವುದಾಗಲೀ, ಬೇರೆ ಬೇರೆ ಪರೀಕ್ಷೆ ಮಾಡುವುದಾಗಲಿ ಬೇಡ ಎಂಬ ವಿಡಿಯೋ ಹರಿದಾಡುತ್ತಿತ್ತು. ಈಗ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್​ ಮತ್ತು ಇನ್ನಿತರೆ ಸಂಸ್ಥೆಗಳು ಸುದ್ದಿ ಮೂಲ ಹುಡುಕಿ ಇದು ಸುಳ್ಳು ಎಂದು ಸಾರಿವೆ.

ಡಾ. ಮಾರಿಯಾ ಹೇಳಿದ್ದೇನು? ನಮ್ಮ ಬಳಿ ಇರುವ ದತ್ತಾಂಶದ (data) ಪ್ರಕಾರ, ರೋಗದ ಲಕ್ಷಣ ಇಲ್ಲದ (asymptomatic) ಕೊರೊನಾ ರೋಗಿಗಳು ರೋಗವನ್ನು ಹರಡುತ್ತಾರೆ ಎಂಬದು ಪ್ರಾಯಶಃ ಅಸಾಧ್ಯ ಎಂದು ಅವರು ಹೇಳಿದ್ದಾರೆ. ಆ ವಿಡಿಯೋ ಇಟ್ಟುಕೊಂಡು ಒಂದು ಮಾಹಿತಿಯನ್ನ ತಯಾರು ಮಾಡುತ್ತಾರೆ. ಆ ಪ್ರಕಾರ, ವಿ.ಸಂ. ಉಲ್ಟಾ ಹೊಡೀತು (WHO makes U-turn) ಎಂಬ ಸಂದೇಶ ಸಾಮಾಜಿಕ ಜಾಲತಾಣದ ಸಂದೇಶ ಹರಿದಾಡಿತು. ಆದರೆ, ವಿ.ಸಂ. (WHO) ವೆಬ್ ಸೈಟ್ ನಲ್ಲಿ ಇದುವರೆಗೂ ಈ ಕುರಿತು ಯಾವ ಮಾಹಿತಿಯೂ ಇಲ್ಲ. ಅಂದರೆ, ಈ ಮೊದಲೇ ಹೇಳಿದಂತೆ, ಉಸಿರು ಮತ್ತು ಎಂಜಲು ಮುಂತಾದವುಗಳ ಮೂಲಕ ಈ ವೈರಸ್ ಇನ್ನೊಬ್ಬರಿಗೆ ಹೇಗೆ ಹರಡುತ್ತೆ ಎಂಬ ಅಂಶವಾಗಲೀ ಹಾಗೂ ಕೊರೊನಾ ಚಿಕಿತ್ಸಾ ವಿಧಾನ ಪದ್ಧತಿಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಇದನ್ನು ಜನ ಗಮನಿಸಬೇಕು ಮತ್ತು ಸುಳ್ಳು ಸುದ್ದಿಗೆ ಕಿವಿಗೊಡಬಾರದು.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್