AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್ ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ. ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ […]

ಹಾಗಾದ್ರೆ ಕೊರೊನಾಗೆ ಯಾವ ಟೆಸ್ಟ್  ಬೇಡವಾ? ಏನಿದು ಸಾಮಾಜಿಕ ಜಾಲತಾಣದ ಸುಳ್​ ಸುದ್ದಿ ಹಕೀಕತ್ತು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Oct 23, 2020 | 1:45 PM

Share

ಕಳೆದ ಎರಡು ದಿನದಿಂದ ವಿಶ್ವ ಆರೋಗ್ಯ ಸಂಸ್ಥೆಯ ತಂತ್ರಜ್ಞರನ್ನು ಉಲ್ಲೇಖಿಸಿ ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಟೆಸ್ಟ್ ಗಳೂ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ.

ಸುಳ್ಳು ಸುದ್ದಿ ಹೇಗೆ ಹರಡಿತು? ವಿಶ್ವ ಆರೋಗ್ಯ ಸಂಸ್ಥೆಯ (WHO) ತಾಂತ್ರಿಕ ವಿಭಾಗದ ಡಾ. ಮಾರಿಯಾ ವಾನ್ ಕೆರ್ಖೊವಾ ಅವರು ಒಂದು ವಿಡಿಯೋದಲ್ಲಿ ಮಾತನಾಡಿದ್ದನ್ನು ತಿರುಚಿ ಈ ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯ ಪ್ರಕಾರ, ಕೊರೋನಾಕ್ಕೆ ಇಲ್ಲೀವರೆಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚಿಸಿದ ಚಿಕಿತ್ಸಾ ವಿಧಾನವೇ ಬೇಡ. ಸೋಂಕಿತರನ್ನು ಬೇರೆ ಇಡುವುದಾಗಲೀ, ಬೇರೆ ಬೇರೆ ಪರೀಕ್ಷೆ ಮಾಡುವುದಾಗಲಿ ಬೇಡ ಎಂಬ ವಿಡಿಯೋ ಹರಿದಾಡುತ್ತಿತ್ತು. ಈಗ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್​ ಮತ್ತು ಇನ್ನಿತರೆ ಸಂಸ್ಥೆಗಳು ಸುದ್ದಿ ಮೂಲ ಹುಡುಕಿ ಇದು ಸುಳ್ಳು ಎಂದು ಸಾರಿವೆ.

ಡಾ. ಮಾರಿಯಾ ಹೇಳಿದ್ದೇನು? ನಮ್ಮ ಬಳಿ ಇರುವ ದತ್ತಾಂಶದ (data) ಪ್ರಕಾರ, ರೋಗದ ಲಕ್ಷಣ ಇಲ್ಲದ (asymptomatic) ಕೊರೊನಾ ರೋಗಿಗಳು ರೋಗವನ್ನು ಹರಡುತ್ತಾರೆ ಎಂಬದು ಪ್ರಾಯಶಃ ಅಸಾಧ್ಯ ಎಂದು ಅವರು ಹೇಳಿದ್ದಾರೆ. ಆ ವಿಡಿಯೋ ಇಟ್ಟುಕೊಂಡು ಒಂದು ಮಾಹಿತಿಯನ್ನ ತಯಾರು ಮಾಡುತ್ತಾರೆ. ಆ ಪ್ರಕಾರ, ವಿ.ಸಂ. ಉಲ್ಟಾ ಹೊಡೀತು (WHO makes U-turn) ಎಂಬ ಸಂದೇಶ ಸಾಮಾಜಿಕ ಜಾಲತಾಣದ ಸಂದೇಶ ಹರಿದಾಡಿತು. ಆದರೆ, ವಿ.ಸಂ. (WHO) ವೆಬ್ ಸೈಟ್ ನಲ್ಲಿ ಇದುವರೆಗೂ ಈ ಕುರಿತು ಯಾವ ಮಾಹಿತಿಯೂ ಇಲ್ಲ. ಅಂದರೆ, ಈ ಮೊದಲೇ ಹೇಳಿದಂತೆ, ಉಸಿರು ಮತ್ತು ಎಂಜಲು ಮುಂತಾದವುಗಳ ಮೂಲಕ ಈ ವೈರಸ್ ಇನ್ನೊಬ್ಬರಿಗೆ ಹೇಗೆ ಹರಡುತ್ತೆ ಎಂಬ ಅಂಶವಾಗಲೀ ಹಾಗೂ ಕೊರೊನಾ ಚಿಕಿತ್ಸಾ ವಿಧಾನ ಪದ್ಧತಿಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಇದನ್ನು ಜನ ಗಮನಿಸಬೇಕು ಮತ್ತು ಸುಳ್ಳು ಸುದ್ದಿಗೆ ಕಿವಿಗೊಡಬಾರದು.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು