AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ

Medical Oxygen Shortage: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು; ಕೋರ್ಟ್

ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ
ದೆಹಲಿ ಹೈಕೋರ್ಟ್
guruganesh bhat
|

Updated on:May 03, 2021 | 10:02 PM

Share

ದೆಹಲಿ: ಕೊವಿಡ್ 19ರ ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್, ಜನರ ಜೀವ ಉಳಿಸುವುದು ಮುಖ್ಯ. ಯಾವುದೇ ಕಾರಣಕ್ಕೂ ಜನರು ಜೀವ ಕಳೆದುಕೊಳ್ಳಬಾರದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇತರ ದೇಶಗಳಿಂದ ಆಮದಾಗುತ್ತಿರುವ ಮೆಡಿಕಲ್ ಆಕ್ಸಿಜನ್​ ಭಾತವನ್ನು ತಲುಪಿದೆಯೇ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೊವಿಡ್​ಗೆ ಸಂಬಂಧಿಸಿದ ಸ್ವಯಂ ಪ್ರೇರಿತ ದೂರಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು. ಇತರ ದೇಶಗಳಿಂದ ಆಮದಾಗುವ ಆಕ್ಸಿಜನ್​ನ್ನು ಯುದ್ಧೋಪಾದಿಯಲ್ಲಿ ತರಿಸಿಕೊಂಡು ರಾಜ್ಯಗಳಿಗೆ ಹಂಚಿಕೆ ಮಾಡಿ ಎಂದು  ನಿರ್ದೇಶಿಸಿದೆ.

ಇದೇ ವೇಳೆ ಸುಪ್ರೀಂಕೋರ್ಟ್​ನಲ್ಲಿಯೂ ಕೊವಿಡ್ ಸಂಬಂಧಿತ ವಿಚಾರಣೆ  ನಡೆದಿದೆ.  ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರತಿದಿನ ಅಗತ್ಯವಿರುವ 700 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್​ನ್ನು ಪೂರೈಸುವ ಕುರಿತು ಇಂದು ರಾತ್ರಿಯ ಒಳಗೆ ಖಚಿತಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಂಭೀರ ಸೂಚನೆ ನೀಡಿದೆ. ಈ ಮುಂಚಿನ 490 ಮೆಟ್ರಿಕ್ ಟನ್ ಆಮ್ಲಜನಕದ ಬೇಡಿಕೆ ಬದಲಾದ ಪರಿಸ್ಥಿತಿಯಲ್ಲಿ ಶೇ 133ರಷ್ಟು ಏರಿಕೆಯಾಗಿದೆ. ಹೀಗಾಗಿ 700 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ಪೂರೈಸುವ ಕುರಿತು ಖಚಿತಪಡಿಸಲು ಕೋರ್ಟ್ ತಿಳಿಸಿದೆ.

ಲಾಕ್​ಡೌನ್ ಬಗ್ಗೆ ಗಮನಹರಿಸಲು ಸೂಚನೆ ನೀಡಿದೆ ಸುಪ್ರೀಂಕೋರ್ಟ್ ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಭಾನುವಾರ ರಾತ್ರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್​ಡೌನ್​ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್​ಡೌನ್​ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್​ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್​ ಹೇಳಿದೆ.

‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ.

ಇದನ್ನೂ ಓದಿ: ಮದ್ರಾಸ್​ ಹೈಕೋರ್ಟ್ ಅಭಿಪ್ರಾಯದ ವಿರುದ್ಧ ಸುಪ್ರೀಂ ಕೋರ್ಟ್​ ಮೊರೆಹೊಕ್ಕ ಚುನಾವಣಾ ಆಯೋಗ

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

(People should not lose leaves delhi high court to union govt)

Published On - 9:59 pm, Mon, 3 May 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ