AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ

Medical Oxygen Shortage: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು; ಕೋರ್ಟ್

ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ
ದೆಹಲಿ ಹೈಕೋರ್ಟ್
Follow us
guruganesh bhat
|

Updated on:May 03, 2021 | 10:02 PM

ದೆಹಲಿ: ಕೊವಿಡ್ 19ರ ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್, ಜನರ ಜೀವ ಉಳಿಸುವುದು ಮುಖ್ಯ. ಯಾವುದೇ ಕಾರಣಕ್ಕೂ ಜನರು ಜೀವ ಕಳೆದುಕೊಳ್ಳಬಾರದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇತರ ದೇಶಗಳಿಂದ ಆಮದಾಗುತ್ತಿರುವ ಮೆಡಿಕಲ್ ಆಕ್ಸಿಜನ್​ ಭಾತವನ್ನು ತಲುಪಿದೆಯೇ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೊವಿಡ್​ಗೆ ಸಂಬಂಧಿಸಿದ ಸ್ವಯಂ ಪ್ರೇರಿತ ದೂರಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು. ಇತರ ದೇಶಗಳಿಂದ ಆಮದಾಗುವ ಆಕ್ಸಿಜನ್​ನ್ನು ಯುದ್ಧೋಪಾದಿಯಲ್ಲಿ ತರಿಸಿಕೊಂಡು ರಾಜ್ಯಗಳಿಗೆ ಹಂಚಿಕೆ ಮಾಡಿ ಎಂದು  ನಿರ್ದೇಶಿಸಿದೆ.

ಇದೇ ವೇಳೆ ಸುಪ್ರೀಂಕೋರ್ಟ್​ನಲ್ಲಿಯೂ ಕೊವಿಡ್ ಸಂಬಂಧಿತ ವಿಚಾರಣೆ  ನಡೆದಿದೆ.  ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರತಿದಿನ ಅಗತ್ಯವಿರುವ 700 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್​ನ್ನು ಪೂರೈಸುವ ಕುರಿತು ಇಂದು ರಾತ್ರಿಯ ಒಳಗೆ ಖಚಿತಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಂಭೀರ ಸೂಚನೆ ನೀಡಿದೆ. ಈ ಮುಂಚಿನ 490 ಮೆಟ್ರಿಕ್ ಟನ್ ಆಮ್ಲಜನಕದ ಬೇಡಿಕೆ ಬದಲಾದ ಪರಿಸ್ಥಿತಿಯಲ್ಲಿ ಶೇ 133ರಷ್ಟು ಏರಿಕೆಯಾಗಿದೆ. ಹೀಗಾಗಿ 700 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ಪೂರೈಸುವ ಕುರಿತು ಖಚಿತಪಡಿಸಲು ಕೋರ್ಟ್ ತಿಳಿಸಿದೆ.

ಲಾಕ್​ಡೌನ್ ಬಗ್ಗೆ ಗಮನಹರಿಸಲು ಸೂಚನೆ ನೀಡಿದೆ ಸುಪ್ರೀಂಕೋರ್ಟ್ ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಭಾನುವಾರ ರಾತ್ರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್​ಡೌನ್​ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್​ಡೌನ್​ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್​ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್​ ಹೇಳಿದೆ.

‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ.

ಇದನ್ನೂ ಓದಿ: ಮದ್ರಾಸ್​ ಹೈಕೋರ್ಟ್ ಅಭಿಪ್ರಾಯದ ವಿರುದ್ಧ ಸುಪ್ರೀಂ ಕೋರ್ಟ್​ ಮೊರೆಹೊಕ್ಕ ಚುನಾವಣಾ ಆಯೋಗ

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

(People should not lose leaves delhi high court to union govt)

Published On - 9:59 pm, Mon, 3 May 21

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ