ರಸ್ತೆ ನಿರ್ಮಾಣಕ್ಕೆಂದು ತಂದ ಸಿಮೆಂಟ್, ಮರಳು ಮಿಶ್ರಣ ಕದ್ದ ಜನ, ವಿಡಿಯೋ ವೈರಲ್

ಪಾದಚಾರಿಗಳ ಬಳಕೆಗಾಗಿ ನಿರ್ಮಾಣ ಹಂತದಲ್ಲಿದ್ದ ರಸ್ತೆಯನ್ನು ಚಿತ್ರ-ವಿಚಿತ್ರ ಮಾಡಿದ್ದಾರೆ. ಜತೆಗೆ ರಸ್ತೆ ಕಾಂಕ್ರೀಟ್​ಗೆಂದು ಹಾಕಲಾಗಿದ್ದ ಸಿಮೆಂಟ್ ಜಲ್ಲಿ ಮತ್ತು ಮರಳು ಮಿಶ್ರಣವನ್ನು ಕದ್ದುಕೊಂಡು ಹೋಗಿದ್ದಾರೆ. ಈ ಘಟನೆ ಮಖ್ದೂಂಪುರ ಬ್ಲಾಕ್‌ನ ಔದನ್ ಬಿಘಾ ಗ್ರಾಮದಲ್ಲಿ ನಡೆದಿದೆ.

ರಸ್ತೆ ನಿರ್ಮಾಣಕ್ಕೆಂದು ತಂದ ಸಿಮೆಂಟ್, ಮರಳು ಮಿಶ್ರಣ ಕದ್ದ ಜನ, ವಿಡಿಯೋ ವೈರಲ್
ವೈರಲ್​​​ ವಿಡಿಯೋ
Follow us
|

Updated on:Nov 06, 2023 | 3:27 PM

ಈ ಜನರೇ ಹೀಗೆ, ರಸ್ತೆ ಇಲ್ಲವೆಂದರೆ ಸರ್ಕಾರವನ್ನು ದೂರುತ್ತಾರೆ. ಇನ್ನು ರಸ್ತೆ ಮಾಡಿದ್ರೆ ಈ ಗತಿ ನೋಡಿ. ಜನಸಾಮಾನ್ಯರ ಓಡಾಟಕ್ಕೆಂದು ರಸ್ತೆಯನ್ನು ಮಾಡಿದ್ರೆ, ಅದನ್ನೇ ಜನ ಕಿತ್ತುಕೊಂಡು ಹೋಗಿದ್ದಾರೆ. ಈ ಘಟನೆ ಬಿಹಾರದ ಜೆಹಾನಾಬಾದ್‌ನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಕೂಡ ಎಕ್ಸ್​​​ನಲ್ಲಿ ವೈರಲ್​​ ಆಗಿದೆ. ಪಾದಚಾರಿಗಳ ಬಳಕೆಗಾಗಿ ನಿರ್ಮಾಣ ಹಂತದಲ್ಲಿದ್ದ ರಸ್ತೆಯನ್ನು ಚಿತ್ರ-ವಿಚಿತ್ರ ಮಾಡಿದ್ದಾರೆ. ಜತೆಗೆ ರಸ್ತೆ ಕಾಂಕ್ರೀಟ್​ಗೆಂದು ಹಾಕಲಾಗಿದ್ದ ಸಿಮೆಂಟ್ ಜಲ್ಲಿ ಮತ್ತು ಮರಳು ಮಿಶ್ರಣವನ್ನು ಕದ್ದುಕೊಂಡು ಹೋಗಿದ್ದಾರೆ. ಈ ಘಟನೆ ಮಖ್ದೂಂಪುರ ಬ್ಲಾಕ್‌ನ ಔದನ್ ಬಿಘಾ ಗ್ರಾಮದಲ್ಲಿ ನಡೆದಿದೆ.

ಇನ್ನು ಈ ರಸ್ತೆ ನಿರ್ಮಾಣ ಮುಖ್ಯಮಂತ್ರಿ ಸಡಕ್ ಗ್ರಾಮ ಯೋಜನೆಯಡಿಯಲ್ಲಿ ನಡೆಯುತ್ತಿದೆ ಎಂದು ಹೇಳಲಾಗಿದೆ. ಯೋಜನೆ ಪ್ರಕಾರ ಈ ಗ್ರಾಮಕ್ಕೆ ಮೂರು ಕಿಲೋಮೀಟರ್ ರಸ್ತೆ ನಿರ್ಮಾಣ ಯೋಜನೆ ನಿಗದಿಯಾಗಿದ್ದು, ಇದನ್ನು ಮೂರು ತಿಂಗಳ ಹಿಂದೆ ಆರ್ ಜೆಡಿ ಶಾಸಕ ಸತೀಶ್ ಕುಮಾರ್ ದಾಸ್ ಚಾಲನೆ ನೀಡಿದ್ದರು. ಈ ಹಿಂದೆಯೇ ಯೋಜನೆಗೆ ಅನುದಾನವನ್ನು ನೀಡಲಾಗಿತ್ತು. ಇದೀಗ ಈ ರಸ್ತೆಗೆ ತರಲಾಗಿದ್ದ ವಸ್ತುಗಳನ್ನು ಜನರೇ ಕದ್ದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ : ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ

ವೈರಲ್​​ ವಿಡಿಯೋ ಇಲ್ಲಿದೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಬಳಕೆದಾರರೊಬ್ಬರು, ಇದು ಸಾರ್ವಜನಿಕ ಹಣ, ಇನ್ನು ಲೂಟಿ ಮಾಡಬಾರದು, ಇನ್ನು ನಮ್ಮ ರಾಜಕೀಯ ನಾಯಕರು ಎಷ್ಟು ಲೂಟಿ ಮಾಡುತ್ತಾರೆ, ಅದನ್ನು ಯಾರು ತೋರಿಸುವುದಿಲ್ಲ. ಇದರ ಜವಾಬ್ದಾರಿ ಗುತ್ತಿಗೆದಾರರದ್ದು ಎಂದು ಹೇಳಿದ್ದಾರೆ. ಸಾರ್ವಜನಿಕ ಮತ್ತು ಸರ್ಕಾರ ಹೀಗೆ ಮಾಡುತ್ತಲೇ ಇರಿ, ಮಾಧ್ಯಮಗಳು ಸುದ್ದಿ ಮಾಡುತ್ತಾರೆ. ಸಮಸ್ಯೆ ಪರಿಹಾರ ಹೇಗೆ ಎಂಬ ಬಗ್ಗೆ ಯೋಚನೆ ಮಾಡುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Mon, 6 November 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ