AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ
Narendra Modi
TV9 Web
| Edited By: |

Updated on:Sep 30, 2022 | 2:40 PM

Share

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಚಲಿಸಿದರೆ ವಿಮಾನದಲ್ಲಿ ಹೋಗುವ ಮನಸ್ಸಾಗುವುದಿಲ್ಲ ಎಂದರು.

ಅಹಮದಾಬಾದ್ ಮಹಾನಗರ ಇಂದು ನನ್ನ ಹೃದಯ ಗೆದ್ದಿದೆ, ಅವಳಿ ನಗರವು ಹೇಗೆ ಅಭಿವೃದ್ಧಿಯಾಗುತ್ತದೆ ಎಂಬುದಕ್ಕೆ ಗಾಂಧಿನಗರ-ಅಹಮದಾಬಾದ್ ಉತ್ತಮ ಉದಾಹರಣೆಯಾಗಿದೆ. ಅದೇ ಮಾದರಿಯನ್ನು ಅನುಸರಿಸಿ ಗುಜರಾತ್‌ನಲ್ಲಿ ವಿವಿಧ ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಜನರು ಇಲ್ಲಿಯವರೆಗೆ ನ್ಯೂಯಾರ್ಕ್-ನ್ಯೂಜೆರ್ಸಿ ಬಗ್ಗೆ ಮಾತನಾಡುತ್ತಿದ್ದರು. ನನ್ನ ಭಾರತವನ್ನು ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಹೇಳಿದ್ದಾರೆ.

ವಿಮಾನಕ್ಕೆ ಹೋಲಿಸಿದರೆ ವಂದೇ ಭಾರತ್ ರೈಲಿನೊಳಗೆ 100 ಪಟ್ಟು ಕಡಿಮೆ ಶಬ್ದ ಮಾಡುತ್ತದೆ.. ವಿಮಾನದಲ್ಲಿ ಪ್ರಯಾಣಿಸುವ ಜನರು ಅದನ್ನು ಅನುಭವಿಸಿದ ನಂತರ ವಂದೇ ಭಾರತ್ ರೈಲಿಗೆ ಆದ್ಯತೆ ನೀಡುತ್ತಾರೆ ಎಂದು ಹೇಳಿದ್ದಾರೆ.

ತಾನು ಅಹಮದಾಬಾದ್‌ನಲ್ಲಿ ಬೆಳೆದಿದ್ದೇನೆ ಎಂದು ಹೇಳಿದ ಪ್ರಧಾನಿ ಮೋದಿ, ವಿಶೇಷವಾಗಿ ನವರಾತ್ರಿ ಸಮಯದಲ್ಲಿ ಇಂತಹ ಬೃಹತ್ ಸಭೆಯನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಅಹಮದಾಬಾದ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಹಮದಾಬಾದ್ ಮೆಟ್ರೋ ಮೂಲಕ ಪ್ರಯಾಣಿಸಿದ್ದೇನೆ ಎಂದು ಹೇಳಿದರು.

ಇದು ಕೆಲವು ನಿಮಿಷಗಳ ಪ್ರಯಾಣ ಆದರೆ ನನಗೆ ಇದು ಅತ್ಯಂತ ಹೆಮ್ಮೆಯ ಸಮಯ ಎಂದು ಅವರು ಹೇಳಿದರು, ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ತಲುಪಿದೆವು ಎಂದು ಹೇಳಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Fri, 30 September 22

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?