AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ
Narendra Modi
TV9 Web
| Updated By: ನಯನಾ ರಾಜೀವ್|

Updated on:Sep 30, 2022 | 2:40 PM

Share

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಚಲಿಸಿದರೆ ವಿಮಾನದಲ್ಲಿ ಹೋಗುವ ಮನಸ್ಸಾಗುವುದಿಲ್ಲ ಎಂದರು.

ಅಹಮದಾಬಾದ್ ಮಹಾನಗರ ಇಂದು ನನ್ನ ಹೃದಯ ಗೆದ್ದಿದೆ, ಅವಳಿ ನಗರವು ಹೇಗೆ ಅಭಿವೃದ್ಧಿಯಾಗುತ್ತದೆ ಎಂಬುದಕ್ಕೆ ಗಾಂಧಿನಗರ-ಅಹಮದಾಬಾದ್ ಉತ್ತಮ ಉದಾಹರಣೆಯಾಗಿದೆ. ಅದೇ ಮಾದರಿಯನ್ನು ಅನುಸರಿಸಿ ಗುಜರಾತ್‌ನಲ್ಲಿ ವಿವಿಧ ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಜನರು ಇಲ್ಲಿಯವರೆಗೆ ನ್ಯೂಯಾರ್ಕ್-ನ್ಯೂಜೆರ್ಸಿ ಬಗ್ಗೆ ಮಾತನಾಡುತ್ತಿದ್ದರು. ನನ್ನ ಭಾರತವನ್ನು ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಹೇಳಿದ್ದಾರೆ.

ವಿಮಾನಕ್ಕೆ ಹೋಲಿಸಿದರೆ ವಂದೇ ಭಾರತ್ ರೈಲಿನೊಳಗೆ 100 ಪಟ್ಟು ಕಡಿಮೆ ಶಬ್ದ ಮಾಡುತ್ತದೆ.. ವಿಮಾನದಲ್ಲಿ ಪ್ರಯಾಣಿಸುವ ಜನರು ಅದನ್ನು ಅನುಭವಿಸಿದ ನಂತರ ವಂದೇ ಭಾರತ್ ರೈಲಿಗೆ ಆದ್ಯತೆ ನೀಡುತ್ತಾರೆ ಎಂದು ಹೇಳಿದ್ದಾರೆ.

ತಾನು ಅಹಮದಾಬಾದ್‌ನಲ್ಲಿ ಬೆಳೆದಿದ್ದೇನೆ ಎಂದು ಹೇಳಿದ ಪ್ರಧಾನಿ ಮೋದಿ, ವಿಶೇಷವಾಗಿ ನವರಾತ್ರಿ ಸಮಯದಲ್ಲಿ ಇಂತಹ ಬೃಹತ್ ಸಭೆಯನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಅಹಮದಾಬಾದ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಹಮದಾಬಾದ್ ಮೆಟ್ರೋ ಮೂಲಕ ಪ್ರಯಾಣಿಸಿದ್ದೇನೆ ಎಂದು ಹೇಳಿದರು.

ಇದು ಕೆಲವು ನಿಮಿಷಗಳ ಪ್ರಯಾಣ ಆದರೆ ನನಗೆ ಇದು ಅತ್ಯಂತ ಹೆಮ್ಮೆಯ ಸಮಯ ಎಂದು ಅವರು ಹೇಳಿದರು, ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ತಲುಪಿದೆವು ಎಂದು ಹೇಳಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Fri, 30 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?