AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!

ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!
ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆ ಆಯ್ತು 11 ಸಾವಿರ ಲೀಟರ್​ ಹಾಲು-ತುಪ್ಪ!
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 6:19 PM

Share

ಕೋಟಾ: ಅಲ್ಲಿ ದೇವಸ್ಥಾನದ ಅಡಿಗಲ್ಲು ಸಮಾರಂಭ ನೆರವೇರುತ್ತಿತ್ತು. ಸಮಾರಂಭದಲ್ಲಿ ನೆರೆದಿದ್ದ ಬಹುತೇಕರ ಕೈಯಲ್ಲಿ ದೊಡ್ಡ ದೊಡ್ಡ ಬಿಂದಿಗೆ ಹಾಗೂ ಬಾಟಲಿಗಳಿದ್ದವು. ಅದರ ತುಂಬ ಹಾಲು, ಮೊಸರು, ತುಪ್ಪ ಇತ್ತು. ಇದನ್ನು ಎಲ್ಲರೂ ತಂದು ತಂದು ಅಡಿಗಲ್ಲು ಸಮಾರಂಭಕ್ಕೆ ತೋಡಿದ್ದ ಗುಂಡಿಗೆ ಸುರಿಯುತ್ತಿದ್ದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ದೃಶ್ಯ ಕಂಡು ಬಂದಿದ್ದು ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ. ಇಲ್ಲಿ ದೇವನಾರಾಯಣ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

11 ಸಾವಿರ ಲೀಟರ್​ನಲ್ಲಿ 1,500 ಲೀಟರ್​ ಮೊಸರು, 1 ಕ್ಷಿಂಟಾಲ್​ ದೇಸಿ ತುಪ್ಪ ಹಾಗೂ ಉಳಿದವು ಹಾಲು. ಇದಕ್ಕೆ ತಗುಲಿದ ವೆಚ್ಛ ಬರೋಬ್ಬರಿ 1.50 ಲಕ್ಷ ರೂಪಾಯಿ.

ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ.. ಈ ಬಗ್ಗೆ ಗುಜ್ಜರ್​ ಸಮುದಾಯದವರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಈ ಮೊದಲು ಕೂಡ ಈ ರೀತಿ ಸಾಕಷ್ಟು ಬಾರಿ ಮಾಡಿದ್ದೇವೆ. ದೇವರು ನಮಗೆ ನೀಡಿದ್ದಕ್ಕೆ ಹೋಲಿಕೆ ಮಾಡಿದರೆ ನಾವು ದೇವರಿಗೆ ನೀಡುತ್ತಿರುವುದು ಏನು ಅಲ್ಲ. ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ. ದೇವರು ನಮಗೆ ಅದನ್ನು ಹಿಂದಿರುಗಿಸುತ್ತಾರೆ ಎನ್ನುವ ಅಭಿಪ್ರಾಯ ಗುಜ್ಜರ್​ ಸಮುದಾಯದವರದ್ದು.

ದೇವನಾರಾಯಣ ದೇವಸ್ಥಾನಕ್ಕೆ ಒಂದು ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಎರಡು ವರ್ಷಗಳಲ್ಲಿ ಈ ದೇವಸ್ಥಾನ ತಲೆ ಎತ್ತಲಿದೆ.

ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ