AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!

ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!
ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆ ಆಯ್ತು 11 ಸಾವಿರ ಲೀಟರ್​ ಹಾಲು-ತುಪ್ಪ!
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 29, 2020 | 6:19 PM

Share

ಕೋಟಾ: ಅಲ್ಲಿ ದೇವಸ್ಥಾನದ ಅಡಿಗಲ್ಲು ಸಮಾರಂಭ ನೆರವೇರುತ್ತಿತ್ತು. ಸಮಾರಂಭದಲ್ಲಿ ನೆರೆದಿದ್ದ ಬಹುತೇಕರ ಕೈಯಲ್ಲಿ ದೊಡ್ಡ ದೊಡ್ಡ ಬಿಂದಿಗೆ ಹಾಗೂ ಬಾಟಲಿಗಳಿದ್ದವು. ಅದರ ತುಂಬ ಹಾಲು, ಮೊಸರು, ತುಪ್ಪ ಇತ್ತು. ಇದನ್ನು ಎಲ್ಲರೂ ತಂದು ತಂದು ಅಡಿಗಲ್ಲು ಸಮಾರಂಭಕ್ಕೆ ತೋಡಿದ್ದ ಗುಂಡಿಗೆ ಸುರಿಯುತ್ತಿದ್ದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ದೃಶ್ಯ ಕಂಡು ಬಂದಿದ್ದು ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ. ಇಲ್ಲಿ ದೇವನಾರಾಯಣ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

11 ಸಾವಿರ ಲೀಟರ್​ನಲ್ಲಿ 1,500 ಲೀಟರ್​ ಮೊಸರು, 1 ಕ್ಷಿಂಟಾಲ್​ ದೇಸಿ ತುಪ್ಪ ಹಾಗೂ ಉಳಿದವು ಹಾಲು. ಇದಕ್ಕೆ ತಗುಲಿದ ವೆಚ್ಛ ಬರೋಬ್ಬರಿ 1.50 ಲಕ್ಷ ರೂಪಾಯಿ.

ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ.. ಈ ಬಗ್ಗೆ ಗುಜ್ಜರ್​ ಸಮುದಾಯದವರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಈ ಮೊದಲು ಕೂಡ ಈ ರೀತಿ ಸಾಕಷ್ಟು ಬಾರಿ ಮಾಡಿದ್ದೇವೆ. ದೇವರು ನಮಗೆ ನೀಡಿದ್ದಕ್ಕೆ ಹೋಲಿಕೆ ಮಾಡಿದರೆ ನಾವು ದೇವರಿಗೆ ನೀಡುತ್ತಿರುವುದು ಏನು ಅಲ್ಲ. ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ. ದೇವರು ನಮಗೆ ಅದನ್ನು ಹಿಂದಿರುಗಿಸುತ್ತಾರೆ ಎನ್ನುವ ಅಭಿಪ್ರಾಯ ಗುಜ್ಜರ್​ ಸಮುದಾಯದವರದ್ದು.

ದೇವನಾರಾಯಣ ದೇವಸ್ಥಾನಕ್ಕೆ ಒಂದು ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಎರಡು ವರ್ಷಗಳಲ್ಲಿ ಈ ದೇವಸ್ಥಾನ ತಲೆ ಎತ್ತಲಿದೆ.

ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ