AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!

ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆಯಾಗಿದ್ದು 11 ಸಾವಿರ ಲೀಟರ್​ ಹಾಲು-ತುಪ್ಪ!
ಈ ದೇವಸ್ಥಾನದ ಅಡಿಗಲ್ಲು ಕಾರ್ಯಕ್ರಮಕ್ಕೆ ಬಳಕೆ ಆಯ್ತು 11 ಸಾವಿರ ಲೀಟರ್​ ಹಾಲು-ತುಪ್ಪ!
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 6:19 PM

Share

ಕೋಟಾ: ಅಲ್ಲಿ ದೇವಸ್ಥಾನದ ಅಡಿಗಲ್ಲು ಸಮಾರಂಭ ನೆರವೇರುತ್ತಿತ್ತು. ಸಮಾರಂಭದಲ್ಲಿ ನೆರೆದಿದ್ದ ಬಹುತೇಕರ ಕೈಯಲ್ಲಿ ದೊಡ್ಡ ದೊಡ್ಡ ಬಿಂದಿಗೆ ಹಾಗೂ ಬಾಟಲಿಗಳಿದ್ದವು. ಅದರ ತುಂಬ ಹಾಲು, ಮೊಸರು, ತುಪ್ಪ ಇತ್ತು. ಇದನ್ನು ಎಲ್ಲರೂ ತಂದು ತಂದು ಅಡಿಗಲ್ಲು ಸಮಾರಂಭಕ್ಕೆ ತೋಡಿದ್ದ ಗುಂಡಿಗೆ ಸುರಿಯುತ್ತಿದ್ದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ದೃಶ್ಯ ಕಂಡು ಬಂದಿದ್ದು ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ. ಇಲ್ಲಿ ದೇವನಾರಾಯಣ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಈ ದೇವಸ್ಥಾನದ ಅಡಿಗಲ್ಲು ಸಮಾರಂಭ ನಡೆದಿತ್ತು. ಮೊದಲ ಬಾರಿಗೆ ಭೂಮಿ ಪೊಜೆ ಮಾಡುವಾಗ ನೈವೇದ್ಯಕ್ಕಾಗಿ ಹಾಲು, ತುಪ್ಪ ಮೊಸರು ಇತ್ಯಾದಿ ಬಳಕೆ ಮಾಡುತ್ತಾರೆ. ಆದರೆ, ಇಲ್ಲಿ, ಒಂದಲ್ಲ ಎರಡಲ್ಲ ಬರೋಬ್ಬರಿ 11 ಸಾವಿರ ಲೀಟರ್​ ಹಾಲು, ತುಪ್ಪ, ಮೊಸರು ಬಳಕೆ ಆಗಿತ್ತು.

11 ಸಾವಿರ ಲೀಟರ್​ನಲ್ಲಿ 1,500 ಲೀಟರ್​ ಮೊಸರು, 1 ಕ್ಷಿಂಟಾಲ್​ ದೇಸಿ ತುಪ್ಪ ಹಾಗೂ ಉಳಿದವು ಹಾಲು. ಇದಕ್ಕೆ ತಗುಲಿದ ವೆಚ್ಛ ಬರೋಬ್ಬರಿ 1.50 ಲಕ್ಷ ರೂಪಾಯಿ.

ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ.. ಈ ಬಗ್ಗೆ ಗುಜ್ಜರ್​ ಸಮುದಾಯದವರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಈ ಮೊದಲು ಕೂಡ ಈ ರೀತಿ ಸಾಕಷ್ಟು ಬಾರಿ ಮಾಡಿದ್ದೇವೆ. ದೇವರು ನಮಗೆ ನೀಡಿದ್ದಕ್ಕೆ ಹೋಲಿಕೆ ಮಾಡಿದರೆ ನಾವು ದೇವರಿಗೆ ನೀಡುತ್ತಿರುವುದು ಏನು ಅಲ್ಲ. ನಾವು ದೇವರಿಗೆ ನೀಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ. ದೇವರು ನಮಗೆ ಅದನ್ನು ಹಿಂದಿರುಗಿಸುತ್ತಾರೆ ಎನ್ನುವ ಅಭಿಪ್ರಾಯ ಗುಜ್ಜರ್​ ಸಮುದಾಯದವರದ್ದು.

ದೇವನಾರಾಯಣ ದೇವಸ್ಥಾನಕ್ಕೆ ಒಂದು ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಎರಡು ವರ್ಷಗಳಲ್ಲಿ ಈ ದೇವಸ್ಥಾನ ತಲೆ ಎತ್ತಲಿದೆ.

ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ