AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೊರಗೆ ಕೊವಿಡ್ ಲಸಿಕೆ ಪಡೆದವರಿಗೆ ಶೀಘ್ರದಲ್ಲೇ ಪ್ರಮಾಣಪತ್ರ ನೀಡಲಿದೆ ಕೇಂದ್ರ ಸರ್ಕಾರ

Covid Vaccine: ಈ ಕ್ರಮ ಜಾರಿಗೆ ಬರುವವರೆಗೆ ಈಗಾಗಲೇ ಲಸಿಕೆ ಹಾಕಿಸಿಕೊಂಡವರು ಪ್ರಮಾಣಪತ್ರವನ್ನು ಪಡೆಯಲು ದೇಶದಲ್ಲಿ ಮತ್ತೆ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಅರೋರಾ ಸ್ಪಷ್ಟಪಡಿಸಿದ್ದಾರೆ.

ಭಾರತದ ಹೊರಗೆ ಕೊವಿಡ್ ಲಸಿಕೆ ಪಡೆದವರಿಗೆ ಶೀಘ್ರದಲ್ಲೇ ಪ್ರಮಾಣಪತ್ರ ನೀಡಲಿದೆ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 11, 2021 | 12:38 PM

Share

ದೆಹಲಿ: ಕೊರೊನಾವೈರಸ್ (Coronavirus) ವಿರುದ್ಧ ಲಸಿಕೆಯನ್ನು ದೇಶದ ಹೊರಗಡೆ ಪಡೆದಿದ್ದರೆ, ಶೀಘ್ರದಲ್ಲೇ ಅವರಿಗೆ ಲಸಿಕೆ ಪ್ರಮಾಣಪತ್ರವನ್ನು ಕೊವಿನ್  (CoWin) ಮೂಲಕ ಡೌನ್‌ಲೋಡ್ ಮಾಡಬಹುದು ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ಹೇಳಿರುವುದಾಗಿ ಲೈವ್ ಮಿಂಟ್ ವರದಿ ಮಾಡಿದೆ. ವರದಿಯ ಪ್ರಕಾರ ಪ್ರಒಂದು ಡೋಸ್ ಲಸಿಕೆ ಪಡೆದವರಿಗೆ ಅಥವಾ ಸಂಪೂರ್ಣವಾಗಿ ಲಸಿಕೆ ಪಡೆದವರಿಗೆ ಲಸಿಕೆ ಪ್ರಮಾಣಪತ್ರ ನೀಡಲಾಗುತ್ತದೆ. ದೇಶದ ಔಷಧ ನಿಯಂತ್ರಣ ಪ್ರಾಧಿಕಾರದಿಂದ ಇನ್ನೂ ಅನುಮೋದನೆ ಪಡೆಯದ ವಿದೇಶಿ ಲಸಿಕೆಗಳಿಗೂ ಇದನ್ನು ತೆರೆಯಲಾಗುವುದು ಎಂದು ಲೈವ್‌ಮಿಂಟ್ ಹೇಳಿದೆ. ಪ್ರಸ್ತುತ, ಭಾರತಕ್ಕೆ ಪ್ರವೇಶಿಸುವ ಜನರು ದೇಶದ ಹೊರಗೆ ಲಸಿಕೆ ಪಡೆದಿದ್ದರೆ ಭಾರತದಲ್ಲಿ ಲಸಿಕೆ ಪ್ರಮಾಣಪತ್ರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

ಇತರ ದೇಶಗಳಲ್ಲಿ ಫೈಜರ್ ಅಥವಾ ಸಿನೋಫಾರ್ಮ್‌ನಂತಹ ಒಂದು ಅಥವಾ ಎರಡು ಡೋಸ್ ಲಸಿಕೆಗಳನ್ನು ಪಡೆದಿರುವ ಭಾರತೀಯರು ಅಥವಾ ವಿದೇಶಿಯರು ಇದ್ದಾರೆ. ಅವರು ಭಾರತದಲ್ಲಿ ಬಂದು ಉಳಿಯಲು ಯೋಚಿಸುತ್ತಿದ್ದಾರೆ. ಅಂತಹ ಜನರಿಗೆ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಡಾ. ಎನ್. ಕೆ ಅರೋರಾ ಹೇಳಿರುವುದಾಗಿ ಲೈವ್ ಮಿಂಟ್ ವರದಿ ಮಾಡಿದೆ. ಅರೋರಾ ಭಾರತದ  ಕೊವಿಡ್ -19 ವರ್ಕಿಂಗ್ ಗ್ರೂಪ್‌ನ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಪ್ರತಿರಕ್ಷಣೆಯ (NTAGI) ಅಧ್ಯಕ್ಷರಾಗಿದ್ದಾರೆ.

ಈ ಕ್ರಮ ಜಾರಿಗೆ ಬರುವವರೆಗೆ ಈಗಾಗಲೇ ಲಸಿಕೆ ಹಾಕಿಸಿಕೊಂಡವರು ಪ್ರಮಾಣಪತ್ರವನ್ನು ಪಡೆಯಲು ದೇಶದಲ್ಲಿ ಮತ್ತೆ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಅರೋರಾ ಸ್ಪಷ್ಟಪಡಿಸಿದ್ದಾರೆ. “ಅಂತಹ ಜನರು ಕೊ-ವಿನ್ ಪ್ಲಾಟ್‌ಫಾರ್ಮ್ ಮೂಲಕ ಲಸಿಕೆ ಪ್ರಮಾಣಪತ್ರಗಳನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ. ನಮ್ಮ ರಾಷ್ಟ್ರವ್ಯಾಪಿ ಕೊವಿಡ್ -19 ಲಸಿಕೆ ಕಾರ್ಯಕ್ರಮದಲ್ಲಿ ನಾವು ಶೀಘ್ರದಲ್ಲೇ ಈ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಗಡಿ ದಾಟುವುದು ಸೇರಿದಂತೆ ವಿವಿಧ ಉದ್ದೇಶಗಳಿಗೆ ಇದು ಕಡ್ಡಾಯವಾಗಿರುವುದರಿಂದ ಈ ಕ್ರಮವು ಮಹತ್ವವನ್ನು ಹೊಂದಿದೆ.

ಇದನ್ನೂ ಓದಿ: ಕೊವಿಶೀಲ್ಡ್​-ಕೊವ್ಯಾಕ್ಸಿನ್​ ಲಸಿಕೆಗಳ ಮಿಶ್ರಣ ಕ್ಲಿನಿಕಲ್​ ಪ್ರಯೋಗ, ಅಧ್ಯಯನಕ್ಕೆ ಡಿಸಿಜಿಐ ಅನುಮೋದನೆ..

ಇದನ್ನೂ ಓದಿ: ‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

(People who received Covid jabs outside India Will soon be able to download vaccination certificate through the CoWin)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!