AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಧ್ವಂಸ ಮಾಡಿದ್ದಾರೆ ಎಂದು ಎಡ ನೇತೃತ್ವದ ಜೆಎನ್‌ಯು ವಿದ್ಯಾರ್ಥಿ ಸಂಘ ಆರೋಪಿಸಿದೆ.

ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ
ಜೆಎನ್​ಯು
ನಯನಾ ರಾಜೀವ್
|

Updated on:Feb 21, 2023 | 9:49 AM

Share

ಜೆಎನ್​ಯುನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಧ್ವಂಸ ಮಾಡಿದ್ದಾರೆ ಎಂದು ಎಡ ನೇತೃತ್ವದ ಜೆಎನ್‌ಯು ವಿದ್ಯಾರ್ಥಿ ಸಂಘ ಆರೋಪಿಸಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಹಲವಾರು ಗಣ್ಯರ ಭಾವಚಿತ್ರಗಳನ್ನು ಇರಿಸಲಾಗಿದೆ.

ಎಬಿವಿಪಿಯು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಮತ್ತು ಇತರ ಹಲವಾರು ಪ್ರಸಿದ್ಧ ನಾಯಕರ ಭಾವಚಿತ್ರಗಳನ್ನು ಧ್ವಂಸಗೊಳಿಸಿದೆ. ಎಸ್‌ಯು ಕಚೇರಿಯ ಒಳಗಿನ ಗೋಡೆಗಳನ್ನೂ ಎಬಿವಿಪಿ ಧ್ವಂಸಗೊಳಿಸಿದೆ ಎಂದು ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್ ಟ್ವೀಟ್ ಮಾಡಿದ್ದಾರೆ.

ಕ್ಯಾಂಪಸ್‌ನಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಎಬಿವಿಪಿ ಪ್ರಯತ್ನಿಸುತ್ತಿದೆ ಎಂದು ಘೋಷ್ ಆರೋಪಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಎಬಿವಿಪಿ ಸದಸ್ಯರು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ಉಪಕುಲಪತಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ

ತಮಿಳು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ನಡೆಸಿದ ಹೇಡಿತನದ ದಾಳಿ ಮತ್ತು JNU ನಲ್ಲಿ ಪೆರಿಯಾರ್, ಕಾರ್ಲ್ ಮಾರ್ಕ್ಸ್ ಅವರಂತಹ ನಾಯಕರ ಭಾವಚಿತ್ರಗಳನ್ನು ಧ್ವಂಸಗೊಳಿಸಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನದಂದು ಅವರ ಭಾವಚಿತ್ರವನ್ನು ಅಪವಿತ್ರಗೊಳಿಸುವುದರ ಹಿಂದೆ ಎಡ ಬೆಂಬಲಿತ ಅಂಗಸಂಸ್ಥೆಗಳ ವಿದ್ಯಾರ್ಥಿಗಳ ಕೈವಾಡವಿದೆ ಎಂದು ಬಿಜೆಪಿಯ ವಿದ್ಯಾರ್ಥಿ ಘಟಕ, ಎಬಿವಿಪಿ ಸದಸ್ಯರು ಆರೋಪಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿಗಳ ಸಂಸ್ಥೆಯ ಕಚೇರಿಯಲ್ಲಿ ನಡೆದ ವಿಧ್ವಂಸಕ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿತ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಈ ಹಿಂದೆ ಆರೋಪಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Tue, 21 February 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!