Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಧ್ವಂಸ ಮಾಡಿದ್ದಾರೆ ಎಂದು ಎಡ ನೇತೃತ್ವದ ಜೆಎನ್‌ಯು ವಿದ್ಯಾರ್ಥಿ ಸಂಘ ಆರೋಪಿಸಿದೆ.

ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ
ಜೆಎನ್​ಯು
Follow us
ನಯನಾ ರಾಜೀವ್
|

Updated on:Feb 21, 2023 | 9:49 AM

ಜೆಎನ್​ಯುನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಧ್ವಂಸ ಮಾಡಿದ್ದಾರೆ ಎಂದು ಎಡ ನೇತೃತ್ವದ ಜೆಎನ್‌ಯು ವಿದ್ಯಾರ್ಥಿ ಸಂಘ ಆರೋಪಿಸಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಹಲವಾರು ಗಣ್ಯರ ಭಾವಚಿತ್ರಗಳನ್ನು ಇರಿಸಲಾಗಿದೆ.

ಎಬಿವಿಪಿಯು ಪೆರಿಯಾರ್, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್, ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಮತ್ತು ಇತರ ಹಲವಾರು ಪ್ರಸಿದ್ಧ ನಾಯಕರ ಭಾವಚಿತ್ರಗಳನ್ನು ಧ್ವಂಸಗೊಳಿಸಿದೆ. ಎಸ್‌ಯು ಕಚೇರಿಯ ಒಳಗಿನ ಗೋಡೆಗಳನ್ನೂ ಎಬಿವಿಪಿ ಧ್ವಂಸಗೊಳಿಸಿದೆ ಎಂದು ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್ ಟ್ವೀಟ್ ಮಾಡಿದ್ದಾರೆ.

ಕ್ಯಾಂಪಸ್‌ನಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಎಬಿವಿಪಿ ಪ್ರಯತ್ನಿಸುತ್ತಿದೆ ಎಂದು ಘೋಷ್ ಆರೋಪಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಎಬಿವಿಪಿ ಸದಸ್ಯರು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ಉಪಕುಲಪತಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ

ತಮಿಳು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ನಡೆಸಿದ ಹೇಡಿತನದ ದಾಳಿ ಮತ್ತು JNU ನಲ್ಲಿ ಪೆರಿಯಾರ್, ಕಾರ್ಲ್ ಮಾರ್ಕ್ಸ್ ಅವರಂತಹ ನಾಯಕರ ಭಾವಚಿತ್ರಗಳನ್ನು ಧ್ವಂಸಗೊಳಿಸಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನದಂದು ಅವರ ಭಾವಚಿತ್ರವನ್ನು ಅಪವಿತ್ರಗೊಳಿಸುವುದರ ಹಿಂದೆ ಎಡ ಬೆಂಬಲಿತ ಅಂಗಸಂಸ್ಥೆಗಳ ವಿದ್ಯಾರ್ಥಿಗಳ ಕೈವಾಡವಿದೆ ಎಂದು ಬಿಜೆಪಿಯ ವಿದ್ಯಾರ್ಥಿ ಘಟಕ, ಎಬಿವಿಪಿ ಸದಸ್ಯರು ಆರೋಪಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿಗಳ ಸಂಸ್ಥೆಯ ಕಚೇರಿಯಲ್ಲಿ ನಡೆದ ವಿಧ್ವಂಸಕ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿತ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಈ ಹಿಂದೆ ಆರೋಪಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Tue, 21 February 23

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ