AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ

ತಿರುಚಿರಾಪಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ
ಜೆಪಿ ನಡ್ಡಾ
ನಯನಾ ರಾಜೀವ್
|

Updated on: Apr 07, 2024 | 2:53 PM

Share

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ, ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ಬಿಜೆಪಿ ಮೈತ್ರಿಕೂಟ ಹಾಗೂ ನಾಮ್ ತಮಿಳರ್ ಪಕ್ಷದ ನಡುವೆ ಚತುಚ್ಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸಿ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದರು.

2024ರ ಲೋಕಸಭೆ ಚುನಾವಣೆಗಾಗಿ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ಪಡೆಯುವುದಾಗಿ ಜೆಪಿ ನಡ್ಡಾ ಹೇಳಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡಿನ ಅರಿಯಲೂರಿನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ನಡ್ಡಾ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ದೀರ್ಘ ಪ್ರಗತಿ ಸಾಧಿಸಿದೆ ಎಂದರು.

ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ತಮಿಳುನಾಡು ಜನರಿಗೆ ನಡ್ಡಾ ಕರೆ ನೀಡಿದರು.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮತ್ತಷ್ಟು ಓದಿ: JP Nadda in Belagavi: ಪಾಕ್ ಪರ ಘೋಷಣೆ ಕೂಗಿದವರ ಬಗ್ಗೆ ಖರ್ಗೆ, ರಾಹುಲ್ ಯಾಕೆ ಮೌನವಾಗಿದ್ದಾರೆ, ಜೆಪಿ ನಡ್ಡಾ ಪ್ರಶ್ನೆ

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು