ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ

ತಿರುಚಿರಾಪಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ
ಜೆಪಿ ನಡ್ಡಾ

Updated on: Apr 07, 2024 | 2:53 PM

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ, ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ಬಿಜೆಪಿ ಮೈತ್ರಿಕೂಟ ಹಾಗೂ ನಾಮ್ ತಮಿಳರ್ ಪಕ್ಷದ ನಡುವೆ ಚತುಚ್ಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸಿ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದರು.

2024ರ ಲೋಕಸಭೆ ಚುನಾವಣೆಗಾಗಿ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ಪಡೆಯುವುದಾಗಿ ಜೆಪಿ ನಡ್ಡಾ ಹೇಳಿದ್ದಾರೆ.
ಇದಕ್ಕೂ ಮುನ್ನ ತಮಿಳುನಾಡಿನ ಅರಿಯಲೂರಿನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ನಡ್ಡಾ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ದೀರ್ಘ ಪ್ರಗತಿ ಸಾಧಿಸಿದೆ ಎಂದರು.

ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ತಮಿಳುನಾಡು ಜನರಿಗೆ ನಡ್ಡಾ ಕರೆ ನೀಡಿದರು.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮತ್ತಷ್ಟು ಓದಿ: JP Nadda in Belagavi: ಪಾಕ್ ಪರ ಘೋಷಣೆ ಕೂಗಿದವರ ಬಗ್ಗೆ ಖರ್ಗೆ, ರಾಹುಲ್ ಯಾಕೆ ಮೌನವಾಗಿದ್ದಾರೆ, ಜೆಪಿ ನಡ್ಡಾ ಪ್ರಶ್ನೆ

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us