ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ. ‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ […]

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?
ಸಾಧು ಶ್ರೀನಾಥ್​

Updated on: Dec 08, 2019 | 8:07 AM

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ.

‘ಶರದ್ ಬೆಂಬಲ ಇದೆ ಎಂದಿದ್ದರು’
ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಅಂತ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಸ್ಪತ್ರೆ ಧ್ವಂಸ ಮಾಡಿದ ರೋಗಿ ಸಂಬಂಧಿಕರು
ಉತ್ತರಪ್ರದೇಶ ರಾಂಪುರ್‌ದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನ್ನ ರೋಗಿಯ ಸಂಬಂಧಿಕರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಇದ್ರಿಂದ ರೋಗಿಯೊಬ್ಬರನ್ನ ಬೇರೆ ಆಸ್ಪತ್ರೆ ದಾಖಲಿಸಿ, ನಂತ್ರ ಬಂದ ರೋಗಿಯ ಸಂಬಂಧಿಕರು ಆಸ್ಪತ್ರೆಯನ್ನ ಧ್ವಂಸ ಮಾಡಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us