
ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
ಹಲವಾರು ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿ ವಾಸವಿರುವ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತದೆ. ಹೀಗೆ, ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, ಇಷ್ಟು ದಿನ ಕೆರೆಯಲ್ಲೇ ನೈವೇದ್ಯ ಪಡೆಯುತ್ತಿದ್ದ ಬಬಿಯಾ ಇದೀಗ ಕಲ್ಯಾಣಿಯಿಂದ ಹೊರಬಂದು ದೇವಾಲಯದಲ್ಲಿ ಕಾಣಿಸಿಕೊಂಡಿರೋದು ಎಲ್ಲರಿಗೂ ಆಶ್ಚರ್ಯ ತಂದಿದೆ.
Published On - 1:41 pm, Wed, 21 October 20