Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

Fuel Rate Today, 09-12-2021: ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬಳಿಕ ಪಂಜಾಬ್​ ಕಾಂಗ್ರೆಸ್​ ಸರ್ಕಾರ ಸ್ಥಳೀಯ ವ್ಯಾಟ್​ ಅಥವಾ ಸ್ಥಳೀಯ ಮಾರಾಟ ತೆರಿಗೆಯನ್ನು ಕಡಿತ ಮಾಡಿದೆ. ಅದರ ಬೆನ್ನಲ್ಲೇ ಅಲ್ಲಿ ಪೆಟ್ರೋಲ್​ ಪ್ರತಿ ಲೀಟರ್​ಗೆ 16.02 ರೂಪಾಯಿ ಮತ್ತು ಡೀಸೆಲ್​ ಪ್ರತಿ ಲೀಟರ್​ಗೆ 19.61 ರೂ.ಕಡಿತಗೊಂಡಿದೆ.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Dec 09, 2021 | 7:54 AM

Petrol Diesel Price Today | ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿ ಒಂದು ತಿಂಗಳ ಮೇಲಾಯಿತು. ಹಾಗೇ, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿ ವಾರವಾಯಿತು. ಈ ಮಧ್ಯೆ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗದೆ ಸ್ಥಿರವಾಗಿಯೇ ಇದೆ. ನವೆಂಬರ್​ನಲ್ಲಿ ದೀಪಾವಳಿಯವರೆಗೆ ಪ್ರತಿದಿನವೆಂಬರಂತೆ ಪೆಟ್ರೋಲ್​-ಡೀಸೆಲ್​ ದರ ಏರಿಕೆಯಾಗುತ್ತಿತ್ತು. ರಾಷ್ಟ್ರದ ಬಹುತೇಕ ನಗರಗಳಲ್ಲಿ ಪೆಟ್ರೋಲ್​ ಬೆಲೆಯಂತೂ 100 ರೂ.ಮೇಲೆ ಇತ್ತು.  ದೀಪಾವಳಿ ಹಬ್ಬದ ಮುನ್ನಾದಿನ ಕೇಂದ್ರ ಸರ್ಕಾರ ಇಂಧನ ಬೆಲೆಗಳ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತು. ಅದಾದ ಮೇಲೆ ಬಿಜೆಪಿ ಸರ್ಕಾರವಿರುವ ಎಲ್ಲ ರಾಜ್ಯಗಳಲ್ಲೂ ತತ್​ಕ್ಷಣಕ್ಕೇ ಇಂಧನದ ಮೇಲಿನ ವ್ಯಾಟ್​ ಕಡಿತಗೊಳಿಸಲಾಯಿತು.ಹಾಗೇ, ನವೆಂಬರ್​ 30ರಂದು ದೆಹಲಿಯ ಆಮ್​ ಆದ್ಮಿ ಪಕ್ಷದ ಸರ್ಕಾರ ಕೂಡ ಪೆಟ್ರೋಲ್​ ಮೇಲಿನ ಅಬಕಾರಿ ಸುಂಕವನ್ನು ಶೇ.19.40ಕ್ಕೆ ಇಳಿಸುವ ಮೂಲಕ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂಪಾಯಿ ಕಡಿತಗೊಳಿಸಿದೆ. 

ಪಂಜಾಬ್​​ನಲ್ಲಿ ಅತ್ಯಂತ ಹೆಚ್ಚು ಕಡಿತ ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬಳಿಕ ಪಂಜಾಬ್​ ಕಾಂಗ್ರೆಸ್​ ಸರ್ಕಾರ ಸ್ಥಳೀಯ ವ್ಯಾಟ್​ ಅಥವಾ ಸ್ಥಳೀಯ ಮಾರಾಟ ತೆರಿಗೆಯನ್ನು ಕಡಿತ ಮಾಡಿದೆ. ಅದರ ಬೆನ್ನಲ್ಲೇ ಅಲ್ಲಿ ಪೆಟ್ರೋಲ್​ ಪ್ರತಿ ಲೀಟರ್​ಗೆ 16.02 ರೂಪಾಯಿ ಮತ್ತು ಡೀಸೆಲ್​ ಪ್ರತಿ ಲೀಟರ್​ಗೆ 19.61 ರೂ.ಕಡಿತಗೊಂಡಿದೆ. ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಅತ್ಯಂತ ಹೆಚ್ಚು ಪ್ರಮಾಣದಲ್ಲಿ ಪೆಟ್ರೋಲ್​-ಡೀಸೆಲ್​ ರೇಟ್​ ಕಡಿಮೆ ಮಾಡಿದ ರಾಜ್ಯ ಪಂಜಾಬ್​ ಆಗಿದೆ. ಅದಾಗಿ ಎರಡನೇ ಸ್ಥಾನದಲ್ಲಿ ಲಡಾಖ್​ ಇದೆ. ಪೆಟ್ರೋಲ್​ಗೆ 9.52 ರೂ. ಕಡಿತಗೊಂಡಿದೆ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ. ರಾಷ್ಟ್ರದ ಸುಮಾರು 27 ಮಹಾನಗರಗಳಲ್ಲಿ ಪೆಟ್ರೋಲ್​ ದರ 100 ರೂ.ಗಡಿ ದಾಟಿದೆ.

ಪೆಟ್ರೋಲ್​-ಡೀಸೆಲ್​ ದರದಲ್ಲಿ ಇಳಿಕೆ? ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದ ಬೆನ್ನಲ್ಲೇ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​-ಡೀಸೆಲ್​ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.  ಹೀಗಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇದೇ ವೇಳೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿದೆ. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ.ಕಡಿಮೆಯಾಗಿದೆ.

ಇದನ್ನೂ ಓದಿ: 

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:54 am, Thu, 9 December 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ