AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

Fuel Rate Today, 09-12-2021: ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬಳಿಕ ಪಂಜಾಬ್​ ಕಾಂಗ್ರೆಸ್​ ಸರ್ಕಾರ ಸ್ಥಳೀಯ ವ್ಯಾಟ್​ ಅಥವಾ ಸ್ಥಳೀಯ ಮಾರಾಟ ತೆರಿಗೆಯನ್ನು ಕಡಿತ ಮಾಡಿದೆ. ಅದರ ಬೆನ್ನಲ್ಲೇ ಅಲ್ಲಿ ಪೆಟ್ರೋಲ್​ ಪ್ರತಿ ಲೀಟರ್​ಗೆ 16.02 ರೂಪಾಯಿ ಮತ್ತು ಡೀಸೆಲ್​ ಪ್ರತಿ ಲೀಟರ್​ಗೆ 19.61 ರೂ.ಕಡಿತಗೊಂಡಿದೆ.

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 09, 2021 | 7:54 AM

Share

Petrol Diesel Price Today | ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿ ಒಂದು ತಿಂಗಳ ಮೇಲಾಯಿತು. ಹಾಗೇ, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿ ವಾರವಾಯಿತು. ಈ ಮಧ್ಯೆ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗದೆ ಸ್ಥಿರವಾಗಿಯೇ ಇದೆ. ನವೆಂಬರ್​ನಲ್ಲಿ ದೀಪಾವಳಿಯವರೆಗೆ ಪ್ರತಿದಿನವೆಂಬರಂತೆ ಪೆಟ್ರೋಲ್​-ಡೀಸೆಲ್​ ದರ ಏರಿಕೆಯಾಗುತ್ತಿತ್ತು. ರಾಷ್ಟ್ರದ ಬಹುತೇಕ ನಗರಗಳಲ್ಲಿ ಪೆಟ್ರೋಲ್​ ಬೆಲೆಯಂತೂ 100 ರೂ.ಮೇಲೆ ಇತ್ತು.  ದೀಪಾವಳಿ ಹಬ್ಬದ ಮುನ್ನಾದಿನ ಕೇಂದ್ರ ಸರ್ಕಾರ ಇಂಧನ ಬೆಲೆಗಳ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತು. ಅದಾದ ಮೇಲೆ ಬಿಜೆಪಿ ಸರ್ಕಾರವಿರುವ ಎಲ್ಲ ರಾಜ್ಯಗಳಲ್ಲೂ ತತ್​ಕ್ಷಣಕ್ಕೇ ಇಂಧನದ ಮೇಲಿನ ವ್ಯಾಟ್​ ಕಡಿತಗೊಳಿಸಲಾಯಿತು.ಹಾಗೇ, ನವೆಂಬರ್​ 30ರಂದು ದೆಹಲಿಯ ಆಮ್​ ಆದ್ಮಿ ಪಕ್ಷದ ಸರ್ಕಾರ ಕೂಡ ಪೆಟ್ರೋಲ್​ ಮೇಲಿನ ಅಬಕಾರಿ ಸುಂಕವನ್ನು ಶೇ.19.40ಕ್ಕೆ ಇಳಿಸುವ ಮೂಲಕ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂಪಾಯಿ ಕಡಿತಗೊಳಿಸಿದೆ. 

ಪಂಜಾಬ್​​ನಲ್ಲಿ ಅತ್ಯಂತ ಹೆಚ್ಚು ಕಡಿತ ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬಳಿಕ ಪಂಜಾಬ್​ ಕಾಂಗ್ರೆಸ್​ ಸರ್ಕಾರ ಸ್ಥಳೀಯ ವ್ಯಾಟ್​ ಅಥವಾ ಸ್ಥಳೀಯ ಮಾರಾಟ ತೆರಿಗೆಯನ್ನು ಕಡಿತ ಮಾಡಿದೆ. ಅದರ ಬೆನ್ನಲ್ಲೇ ಅಲ್ಲಿ ಪೆಟ್ರೋಲ್​ ಪ್ರತಿ ಲೀಟರ್​ಗೆ 16.02 ರೂಪಾಯಿ ಮತ್ತು ಡೀಸೆಲ್​ ಪ್ರತಿ ಲೀಟರ್​ಗೆ 19.61 ರೂ.ಕಡಿತಗೊಂಡಿದೆ. ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಅತ್ಯಂತ ಹೆಚ್ಚು ಪ್ರಮಾಣದಲ್ಲಿ ಪೆಟ್ರೋಲ್​-ಡೀಸೆಲ್​ ರೇಟ್​ ಕಡಿಮೆ ಮಾಡಿದ ರಾಜ್ಯ ಪಂಜಾಬ್​ ಆಗಿದೆ. ಅದಾಗಿ ಎರಡನೇ ಸ್ಥಾನದಲ್ಲಿ ಲಡಾಖ್​ ಇದೆ. ಪೆಟ್ರೋಲ್​ಗೆ 9.52 ರೂ. ಕಡಿತಗೊಂಡಿದೆ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ. ರಾಷ್ಟ್ರದ ಸುಮಾರು 27 ಮಹಾನಗರಗಳಲ್ಲಿ ಪೆಟ್ರೋಲ್​ ದರ 100 ರೂ.ಗಡಿ ದಾಟಿದೆ.

ಪೆಟ್ರೋಲ್​-ಡೀಸೆಲ್​ ದರದಲ್ಲಿ ಇಳಿಕೆ? ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದ ಬೆನ್ನಲ್ಲೇ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​-ಡೀಸೆಲ್​ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.  ಹೀಗಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇದೇ ವೇಳೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿದೆ. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ.ಕಡಿಮೆಯಾಗಿದೆ.

ಇದನ್ನೂ ಓದಿ: 

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:54 am, Thu, 9 December 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್