AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆಟ್ರೋಲ್​-ಡೀಸೆಲ್​ ಬೆಲೆ ಹೆಚ್ಚಾಗಲು ಕೊವಿಡ್ 19 ಲಸಿಕೆಯೇ ಕಾರಣ’ ಎಂದ ಕೇಂದ್ರ ಸಚಿವ

ಪೆಟ್ರೋಲ್​ ಬೆಲೆ 40 ರೂಪಾಯಿಯಷ್ಟೇ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದರ ಮೇಲೆ ತೆರಿಗೆ ವಿಧಿಸಿವೆ. ಅದರಲ್ಲೂ ಅತ್ಯಂತ ಕಡಿಮೆ ವ್ಯಾಟ್​ ಹೇರಿದ್ದು ಆಸ್ಸಾಂ ರಾಜ್ಯ ಎಂದೂ ರಾಮೇಶ್ವರ್​ ತೇಲಿ ಹೇಳಿದ್ದಾರೆ.

‘ಪೆಟ್ರೋಲ್​-ಡೀಸೆಲ್​ ಬೆಲೆ ಹೆಚ್ಚಾಗಲು ಕೊವಿಡ್ 19 ಲಸಿಕೆಯೇ ಕಾರಣ’ ಎಂದ ಕೇಂದ್ರ ಸಚಿವ
ರಾಮೇಶ್ವರ್​ ತೇಲಿ
TV9 Web
| Edited By: |

Updated on: Oct 11, 2021 | 6:46 PM

Share

ಸದ್ಯ ಪೆಟ್ರೋಲ್​, ಡೀಸೆಲ್​ ದರ (Petrol – Diesel Prices)ಗಳು ದಾಖಲೆಯ ಮಟ್ಟದಲ್ಲಿ ಏರಿಕೆಯಾಗುತ್ತಿವೆ. ದೇಶದ ಬಹುತೇಕ ಮಹಾನಗರಗಳಲ್ಲಿ 100 ರೂಪಾಯಿ ಗಡಿ ದಾಟಿವೆ. ಅದನ್ನು ವಿರೋಧ ಪಕ್ಷಗಳು ಸೇರಿ, ಜನಸಾಮಾನ್ಯರು ತೀವ್ರವಾಗಿ ಟೀಕಿಸುತ್ತಿದ್ದಾರೆ. ಆದರೆ ಹೀಗೆ ಪೆಟ್ರೋಲ್​-ಡೀಸೆಲ್​ ದರ ಹೆಚ್ಚಾಗಲು ಕೊವಿಡ್​ 19 ಲಸಿಕೆ (Covid 19 Vaccine)ಯನ್ನು ಉಚಿತವಾಗಿ ಕೊಟ್ಟಿದ್ದೇ ಕಾರಣ ಎನ್ನುತ್ತಿದ್ದಾರೆ ಬಿಜೆಪಿ (BJP)ಯ ಈ ಕೇಂದ್ರ ಸಚಿವರು. ಅಷ್ಟೇ ಅಲ್ಲ, ಒಂದು ಲೀಟರ್​ ಹಿಮಾಲಯನ್​ ವಾಟರ್​ ಬೆಲೆ ಒಂದು ಲೀಟರ್​ ಪೆಟ್ರೋಲ್​​ಗಿಂತಲೂ ಹೆಚ್ಚು ಎಂಬುದು ನೆನಪಿರಲಿ ಎಂಬ ಮಾತುಗಳನ್ನೂ ಅವರು ಆಡಿದ್ದಾರೆ. 

ಅಂದ ಹಾಗೆ ಹೀಗೊಂದು ವಿಚಾರಧಾರೆಯನ್ನು ಜನರ ಎದುರು ಇಟ್ಟಿದ್ದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ರಾಜ್ಯ ಸಚಿವ ರಾಮೇಶ್ವರ ತೇಲಿ. ಇಂದು ಆಸ್ಸಾಂನ ಗುವಾಹಟಿಯಲ್ಲಿ ಮಾತನಾಡಿದ ಅವರು, ನಿಜ ಹೇಳಬೇಕೆಂದರೆ ಪೆಟ್ರೋಲ್​ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ಪೆಟ್ರೋಲ್​ ಮೇಲೆ ತೆರಿಗೆ ವಿಧಿಸುತ್ತಿವೆ. ದೇಶದ ಜನರು ಇಂದು ಕೊವಿಡ್​ 19 ಲಸಿಕೆಯನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಅದಕ್ಕೆ ಹಣ ಬಂದಿದ್ದು ಎಲ್ಲಿಂದ ಎಂದು ಗೊತ್ತಾ? ಹೀಗೆ ಪೆಟ್ರೋಲ್​-ಡೀಸೆಲ್​ ಮೇಲೆ ಹೇರಲಾದ ಟ್ಯಾಕ್ಸ್​ನ ಹಣದಿಂದಲೇ ಕೊವಿಡ್​ 19 ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ರಾಮೇಶ್ವರ್​ ತೇಲಿ ತಿಳಿಸಿದ್ದಾರೆ.

ದಿಬ್ರುಗಡ್​ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಮೇಶ್ವರ್​ ತೇಲಿ, ದೇಶದ 130 ಕೋಟಿ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಗುರಿಯನ್ನು ನಮ್ಮ ಕೇಂದ್ರ ಸರ್ಕಾರ ಹೊಂದಿದೆ. ಪ್ರತಿ ಲಸಿಕೆಯ ಬೆಲೆ 1200 ರೂಪಾಯಿ. ಪ್ರತಿಯೊಬ್ಬರೂ ಎರಡು ಡೋಸ್​ ಪಡೆಯಬೇಕು. ಅಂದರೆ ಅಲ್ಲಿಗೆ ಒಬ್ಬರಿಗೆ ನೀಡಲಾಗುವ ಲಸಿಕೆಯ ಬೆಲೆ 2400 ರೂ. ಆ ಹಣ ಭರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿದ್ದು, ಇದೇ ಪೆಟ್ರೋಲ್​-ಡೀಸೆಲ್​​ಗೆ ವಿಧಿಸಲಾದ ಟ್ಯಾಕ್ಸ್​​ನಿಂದ ಎಂದು ಹೇಳಿದ್ದಾರೆ.  ಪೆಟ್ರೋಲ್​ ಬೆಲೆ 40 ರೂಪಾಯಿಯಷ್ಟೇ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದರ ಮೇಲೆ ತೆರಿಗೆ ವಿಧಿಸಿವೆ. ಅದರಲ್ಲೂ ಅತ್ಯಂತ ಕಡಿಮೆ ವ್ಯಾಟ್​ (Value Added tax) ಹೇರಿದ್ದು ಆಸ್ಸಾಂ ರಾಜ್ಯ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕಲ್ಲಿದ್ದಲು ಕೊರತೆ ಆಗದು, ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆಯಿಲ್ಲ: ಸುನಿಲ್ ಕುಮಾರ್

Maharashtra Bandh ಮಹಾರಾಷ್ಟ್ರ ಬಂದ್ ಯಶಸ್ವಿಯಾಗಿದೆ ಎಂದ ಶಿವಸೇನಾ ಸಂಸದ; 8 ಬೆಸ್ಟ್ ಬಸ್ ಧ್ವಂಸ, ಎಂವಿಎ ವಿರುದ್ಧ ಫಡ್ನವಿಸ್ ವಾಗ್ದಾಳಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!