AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಇಂದೂ 25 ಪೈಸೆ ಹೆಚ್ಚಳ

Petrol Diesel Rate: ಇಂದು ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಪೆಟ್ರೋಲ್​ ದರ ₹90.93ಕ್ಕೆ ಜಿಗಿದಿದೆ. ಹಾಗೆಯೇ ಡೀಸೆಲ್​ 38 ಪೈಸೆ ಹೆಚ್ಚಳದಿಂದ ₹81.32ಕ್ಕೆ ಮಾರಾಟವಾಗುತ್ತಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ ಇಳಿಕೆಯತ್ತ ಸಾಗಿದ್ದು. ಜನರು ಕೊಂಚ ನಿರಾಳರಾಗಿದ್ದಾರೆ.

Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಇಂದೂ 25 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Feb 23, 2021 | 10:31 AM

Share

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಕೂಡಾ ಮಂಗಳವಾರವೂ ಮತ್ತೆ ಏರಿಕೆಯತ್ತ ಸಾಗಿದೆ. ದೆಹಲಿಯಲ್ಲಿ ದೈನಂದಿನ ಇಂಧನ ದರದ ಪರಿಷ್ಕರಣೆಯ ನಂತರ ಪೆಟ್ರೋಲ್​ ದರ 25 ಪೈಸೆ ಹಾಗೂ ಡೀಸೆಲ್​ 35 ಪೈಸೆ ಹೆಚ್ಚಾಗಿದೆ.

ನಿನ್ನೆ ಪೆಟ್ರೋಲ್​ ದರ ₹90.58 ಇತ್ತು. ಇದೀಗ ಪ್ರತಿ ಲೀಟರ್​ ₹90.93ಕ್ಕೆ ಜಿಗಿದಿದೆ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ ₹81.32 ಇದ್ದು, ಇದೀಗ  ₹81.32ಕ್ಕೆ ಮಾರಾಟವಾಗುತ್ತಿದೆ. ಈ ತಿಂಗಳಲ್ಲಿ ಪೆಟ್ರೋಲ್​ ದರ ಒಟ್ಟು ಪ್ರತಿ ಲೀಟರ್​ಗೆ ₹4.63ರಷ್ಟು ಏರಿಕೆ ಕಂಡಿದೆ ಹಾಗೂ ಡೀಸೆಲ್​₹4.84ರಷ್ಟು ಹೆಚ್ಚಳವಾಗಿದೆ.

ಇಂದು 34 ಪೈಸೆ ಹೆಚ್ಚಳದ ನಂತರ ಮುಂಬೈನಲ್ಲಿ ಇದೀಗ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹97.34 ಹಾಗೂ 38ಪೈಸೆ ಹೆಚ್ಚಳದಿಂದ ಡೀಸೆಲ್​ ದರ ₹ 88.44ಕ್ಕೆ ಗ್ರಾಹಕರು ಕೊಂಡುಕೊಳ್ಳುತ್ತಿದ್ದಾರೆ. ಹಾಗೆಯೇ ಚೆನ್ನೈನಲ್ಲಿ ಪೆಟ್ರೋಲ್​ ದರದಲ್ಲಿ 31 ಪೈಸೆ ಏಋಇಕೆ ಮಾಡಲಾಗಿದ್ದು, ಪ್ರತಿ ಲೀಟರ್​ ಬೆಲೆ ₹92.90 ಆಗಿದೆ. ಹಾಗೂ ಡೀಸೆಲ್​ ದರ 33 ಪೈಸೆ ಹೆಚ್ಚಳವಾಗಿದ್ದು, ₹86.06ಕ್ಕೆ ಮಾರಾಟವಾಗುತ್ತಿದೆ.

ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ 66ಪೈಸೆ ಇಳಿಕೆ ಕಂಡಿದ್ದು ₹91.78 ಇದ್ದ ಪೆಟ್ರೋಲ್​ ದರ ಇದೀಗ ₹91.12ಕ್ಕೆ ಲಭ್ಯವಾಗುತ್ತಿದೆ. ಹಾಗೂ ಡೀಸೆಲ್​ ದರವೂ ಕೂಡಾ 36 ಪೈಸೆ ಕಡಿಮೆಯಾಗಿದ್ದು, ಇದೀಗ ಪ್ರತಿ ಲೀಟರ್​ ಡೀಸೆಲ್​ ದರ ₹84.20ಕ್ಕೆ ಲಭ್ಯವಾಗುತ್ತಿದೆ. ಇಷ್ಟು ದಿನ ಏರುತ್ತಲೇ ಇದ್ದ ಇಂಧನ ದರವನ್ನು ನೋಡುತ್ತಿದ್ದ ಕೊಲ್ಕತ್ತ ನಾಗರಿಕರಿಗೆ ಕೊಂಚ ಖುಷಿಯುಂಟಾಗಿದೆ.

ಇದನ್ನೂ ಓದಿ: Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಬೆಲೆ ಏರಿಕೆ ಕಾರಣ ಬಿಚ್ಚಿಟ್ಟ ಸಚಿವ ಧರ್ಮೇಂದ್ರ ಪ್ರಧಾನ್

ಇದನ್ನೂ ಓದಿ: Petrol/Diesel Price: ಸತತ 13ನೇ ದಿನವೂ ಪೆಟ್ರೋಲ್ ದರ 39 ಪೈಸೆ ಹೆಚ್ಚಳ.. ಜನಸಾಮಾನ್ಯರ ಕೆಂಗಣ್ಣು

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ