Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಪೆಟ್ರೋಲ್, ಡೀಸೆಲ್​ ದರ ಏರಿಕೆ.. ಕಡಿಮೆಯಾದ ಇಂಧನ ಬೇಡಿಕೆ!

Petrol Diesel Rate in Bangalore: ಇಂಧನ ದರದಲ್ಲಿ ಇಳಿಕೆಯಾಗಬೇಕು ಎಂದಾದರೆ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗಬೇಕು. ಆಗ ಮಾತ್ರ ಇಂಧನ ದರದಲ್ಲಿ ನಿಜವಾಗಿಯೂ ಇಳಿಕೆ ಕಾಣಲು ಸಾಧ್ಯ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Petrol Diesel Price: ಪೆಟ್ರೋಲ್, ಡೀಸೆಲ್​ ದರ ಏರಿಕೆ.. ಕಡಿಮೆಯಾದ ಇಂಧನ ಬೇಡಿಕೆ!
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: Digi Tech Desk

Updated on:Mar 20, 2021 | 9:59 AM

ಬೆಂಗಳೂರು: ಇನ್ನೇನು ಪೆಟ್ರೋಲ್​ ದರ 100 ರೂಪಾಯಿಗೆ ತಲುಪಿ ಬಿಡುತ್ತದೆ. ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಾಹನ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಗ್ರಾಹಕರಿಗೆ ಸಮಾಧಾನಕರ ಸಂಗತಿ ಅಂದರೆ, ಸತತವಾಗಿ ಮಾರ್ಚ್​ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಫೆಬ್ರವರಿ ತಿಂಗಳ ಕೊನೆಯ ಶನಿವಾರ ದರ ಬದಲಾದ ನಂತರ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 94.22 ರೂಪಾಯಿಗೆ ಮಾರಾಟವಾಗುತ್ತಿದ್ದು, ಡೀಸೆಲ್​ ದರ 86.37 ರೂಪಾಯಿಗೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಇಂದು ಮಂಗಳವಾರ ಪೆಟ್ರೋಲ್​ ದರ ಪ್ರತಿ ಲೀಟರಿಗೆ 91.17 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.47 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ ಒಂದು ಲೀಟರ್​ ಪೆಟ್ರೋಲ್​ ದರ 97.57 ರೂಪಾಯಿ ಹಾಗೂ ಡೀಸೆಲ್​ ಪ್ರತಿ ಲೀಟರಿಗೆ 88.60 ರೂಪಾಯಿಗೆ ಮಾರಾಟವಾಗುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರಿಗೆ ಪೆಟ್ರೋಲ್​ 93.11 ರೂಪಾಯಿಗೆ ಮಾರಾಟವಾಗುತ್ತಿದ್ದು, ಡೀಸೆಲ್​ ಪ್ರತಿ ಲೀಟರಿಗೆ 86.45 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಕೋಲ್ಕತ್ತದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.35 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ 84.35 ರೂಪಾಯಿಗೆ ಮಾರಾಟವಾಗುತ್ತಿದೆ.

ಇನ್ನು, ತೆಲಂಗಾಣದ ರಾಜಧಾನಿ ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.79 ರೂಪಾಯಿ ಹಾಗೂ ಡೀಸೆಲ್​ ಪ್ರತಿ ಲೀಟರಿಗೆ 88.86 ರೂಪಾಯಿಗೆ ಮಾರಾಟವಾಗುತ್ತಿದೆ. ಜೊತೆಗೆ ತೆಲಂಗಾಣದ ಮತ್ತೊಂದು ಪ್ರಮುಖ ಪಟ್ಟಣವಾದ ಕರೀಂ ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.92 ರೂಪಾಯಿ ಹಾಗೂ ಡೀಸೆಲ್​ ಪ್ರತಿ ಲೀಟರಿಗೆ 88.97 ರೂಪಾಯಿಗೆ ಮಾರಾಟವಾಗುತ್ತಿದೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಪೆಟ್ರೋಲ್​ ದರ ಏರಿಕೆ ಕಂಡಿದ್ದು, ದರ ಏರಿಕೆಯಲ್ಲಿ ಇಂದು 97.39 ರೂಪಾಯಿಗೆ ಜಿಗಿದಿದೆ. ಹಾಗೂ ಡೀಸೆಲ್​ ದರ ಪ್ರತಿ ಲೀಟರಿಗೆ 90.79 ರೂಪಾಯಿಗೆ ಮಾರಾಟವಾಗಿದ್ದು, ದರ ಏರಿಕೆಯ ನಂತರ 90.91 ರೂಪಾಯಿಗೆ ಜಿಗಿದಿದೆ.ಕಳೆದ ತಿಂಗಳಿನಲ್ಲಿ ಇಂಧನದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 25 ಪೈಸೆ ಹೆಚ್ಚಳದೊಂದಿಗೆ ದರ 100.13 ರೂಪಾಯಿ ತಲುಪಿತ್ತು. ಡೀಸೆಲ್ ದರ 92.13 ರೂಪಾಯಿಗೆ ತಲುಪಿತ್ತು. ಡೀಸೆಲ್ ಕೂಡಾ ಶತಕ ಭಾರಿಸುವ ಹಾದಿಯಲ್ಲಿ ಸಾಗುತ್ತಿತ್ತು. ಆಗ, ಬೆಂಗಳೂರಿನಲ್ಲೂ ಇಂಧನ ದರ ಶತಕ ಬಾರಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜನರು ಕಂಗಾಲಾಗಿದ್ದರು. ನಂತರ ಮಾರ್ಚ್​ ತಿಂಗಳಿನಲ್ಲಿ ಯಾವುದೇ ದರ ಬದಲಾವಣೆ ಕಂಡು ಬಂದಿಲ್ಲದ ಕಾರಣ ಗ್ರಾಹಕರು ಸ್ವಲ್ಪ ನಿರಾಳರಾಗಿದ್ದಾರೆ.

ಇಂಧನ ದರದಲ್ಲಿ ಇಳಿಕೆಯಾಗಬೇಕು ಎಂದಾದರೆ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗಬೇಕು. ಆಗ ಮಾತ್ರ ಇಂಧನ ದರದಲ್ಲಿ ನಿಜವಾಗಿಯೂ ಇಳಿಕೆ ಕಾಣಲು ಸಾಧ್ಯ ಎಂದು ತಜ್ಞ ರು ಅಭಿಪ್ರಾಯ ಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಇಂಧನ ದರ ಇಳಿಕೆಯತ್ತ ಸಾಗುವುದು ಯಾವಾಗ ಎಂದು ಗ್ರಾಹಕರು ಪ್ರತಿನಿತ್ಯ ಕಾಯುತ್ತಿದ್ದಾರೆ. ಪೆಟ್ರೋಲ್​, ಡೀಸೆಲ್​ ದರ ಏರಿಕೆಯಿಂದಾಗಿ ಇಂಧನ ಬೇಡಿಕೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ

ಇದನ್ನೂ ಓದಿ: Petrol Price: ರಾಜಸ್ಥಾನದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ.. ಸಿಲಿಕಾನ್ ಸಿಟಿಯೂ ಶತಕದ ಹಾದಿಯತ್ತ!

Published On - 9:23 am, Tue, 16 March 21

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ