AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಮಾರ್ಚ್​ ತಿಂಗಳ ಕೊನೆಯ ವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯ!

Petrol Diesel Rate in Bangalore: ಮಾರ್ಚ್​ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್​, ಡೀಸೆಲ್ ದರ ಸ್ಥಿರವಾಗಿಯೇ ಉಳಿದಿದೆ. ಇಂದುಸೋಮವಾರವೂ ದರ ವ್ಯತ್ಯಾಸವಿಲ್ಲ.

Petrol Diesel Price: ಮಾರ್ಚ್​ ತಿಂಗಳ ಕೊನೆಯ ವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Mar 25, 2021 | 11:30 AM

Share

ಬೆಂಗಳೂರು: ಇಂದು ಸೋಮವಾರ ಪೆಟ್ರೋಲ್​, ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಪೆಟ್ರೋಲ್​, ಡೀಸೆಲ್​ ಮಾರಾಟವಾಗುತ್ತಿದೆ. ಮಾರ್ಚ್​ ತಿಂಗಳ ಪ್ರಾರಂಭದಿಂದ ಪೆಟ್ರೋಲ್​, ಡೀಸೆಲ್​ ದರ ವ್ಯತ್ಯಾಸವಾಗಿಲ್ಲ. ಕಳೆದ ಫೆಬ್ರವರಿ ತಿಂಗಳ 27ನೇ ತಾರೀಕಿನಂದು ಪೆಟ್ರೋಲ್​ ಪ್ರತಿ ಲೀಟರಿಗೆ 24 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 15 ಪೈಸೆ ಹೆಚ್ಚಳವಾಗಿತ್ತು. ಇಂದು ಸೋಮವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 94.22ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ 86.37 ರೂಪಾಯಿಗೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 91.17 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 81.47 ರೂಪಾಯಿಗೆ ಮಾರಾಟವಾಗುತ್ತಿದೆ. ಈ ವರ್ಷದ ಮೊದಲ 2 ತಿಂಗಳಿನಲ್ಲಿ ಪೆಟ್ರೋಲ್​ 4.87 ರೂಪಾಯಿ ಏರಿಕೆಯಾಗಿದೆ. ಮತ್ತು ಡೀಸೆಲ್​ 4.99 ರೂಪಾಯಿ ಏರಿಕೆ ಕಂಡಿದೆ. ಇಂಧನ ದರ ರಾಜ್ಯದಿಂದ ರಾಜ್ಯಕ್ಕೆ ಬದಲಾಗಿರುತ್ತದೆ. ಸರಕು ಸಾಗಣೆ ಶುಲ್ಕಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಆಧಾರದ ಮೇಲೆ ಇಂಧನ ದರ ಭಿನ್ನವಾಗಿರುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ತೆರಿಗೆಗಳು ಪೆಟ್ರೋಲ್ಗೆ​ ಶೇ.60 ಹಾಗೂ ಡೀಸೆಲ್​ಗೆ ಶೇ.54ಕ್ಕಿಂತ ಹೆಚ್ಚಿದೆ. ಅಂತರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ದರವನ್ನು ಸಾಮಾನ್ಯವಾಗಿ ಪ್ರತಿ ದಿನವೂ ಪರಿಷ್ಕರಿಸಲಾಗುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶುಕ್ರವಾರ ಏರಿಕೆಯಾಗಿದೆ. ಕಚ್ಚಾ ತೈಲದ ದರ ಏರಿಕೆ ಕಂಡು ಬರುತ್ತಿದ್ದರೂ. ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಪೆಟ್ರೋಲ್​, ಡೀಸೆಲ್​ ದರ ಏರಿಕೆಯಿಂದಾಗಿ ಇಂಧನ ಬೇಡಿಕೆ ಕಡಿಮೆ ಆಗಿತ್ತು. ಜೊತೆಗೆ, ಕೊರೊನಾ ಎರಡನೇ ಅಲೆ ಎಲ್ಲೆಡೆ ವ್ಯಾಪಿಸುತ್ತಿರುವುದರಿಂದ ಬೇಡಿಕೆ ಇನ್ನೂ ಕಡಿಮೆ ಆಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 101.84 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಡೀಸೆಲ್ಅನ್ನು​ ಪ್ರತಿ ಲೀಟರಿಗೆ 93.77 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಅನುಪ್ಪುರಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 101.59 ರೂಪಾಯಿಗೆ ಮಾರಾಟವಾಗುತ್ತಿದೆ. ಮತ್ತು ಡೀಸೆಲ್ ಪ್ರತಿ ಲೀಟರಿಗೆ 91.97 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್, 97.57 ರೂಪಾಯಿ ಇದೆ. ಹಾಗೂ ಡೀಸೆಲ್ ಪ್ರತಿ ಲೀಟರಿಗೆ 88.60 ರೂಪಾಯಿಗೆ ಮಾರಾಟವಾಗುತ್ತಿದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 91.35ರೂಪಾಯಿ ಹಾಗೂ ಪ್ರತಿ ಲೀಟರ್​ಡೀಸೆಲ್​ ದರ 84.35 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್ ದರ 93.11 ರೂಪಾಯಿ ಹಾಗೂ ಡೀಸೆಲ್ ದರ 86.45 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 94.79 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ 88.86 ಇದೆ.

ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.48 ರೂಪಾಯಿ ಹಾಗೂ ಪ್ರತಿ ಲೀಟರ್​ ಪೆಟ್ರೋಲ್​ ದರ 86.73 ರೂಪಾಯಿ ಇದೆ. ಜೈಪುರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 97.72 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 89.98 ರೂಪಾಯಿ ಇದೆ. ಇನ್ನು, ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 89.31 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.85 ರೂಪಾಯಿ ಇದೆ. ತಿವನಂತಪುರಂನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.05 ಹಾಗೂ ಪ್ರತಿ ಲೀಟರ್​ ಡೀಸೆಲ್​ 87.53 ರೂಪಾಯಿ ಇದೆ.

ಇದನ್ನೂ ಓದಿ: Petrol Diesel Price: ಇಂದಿನ ಪೆಟ್ರೋಲ್​, ಡೀಸೆಲ್ ದರ ಹೀಗಿದೆ!

ಇಂದಿಗೆ ಪೆಟ್ರೋಲ್​ ಬೆಲೆ ಶತಕ ಬಾರಿಸಬೇಕಿತ್ತು! ಆದ್ರೆ ನಿಶ್ಚಲವಾಗಿ ನಿಂತುಬಿಟ್ಟಿದೆ. ಏನಿದರ ರಾಜಕೀಯ? ಇಲ್ಲಿದೆ ವಿವರ

Published On - 9:35 am, Mon, 22 March 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ