AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಸತತ 10 ದಿನಗಳಿಂದ ಸ್ಥಿರತೆ ಕಾಪಾಡಿಕೊಂಡ ಪೆಟ್ರೋಲ್​, ಡೀಸೆಲ್ ದರ; ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ!

Petrol Diesel Rate Today in Bangalore: ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್ ದರದಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 14 ಪೈಸೆ ಕಡಿತಗೊಳಿಸಿದ್ದವು. ಅದಾದ ನಂತರದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 40 ಪೈಸೆ ಆಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್ ದರ 80 ರೂಪಾಯಿ 73 ಪೈಸೆ ಆಗಿದೆ.

Petrol Diesel Price: ಸತತ 10 ದಿನಗಳಿಂದ ಸ್ಥಿರತೆ ಕಾಪಾಡಿಕೊಂಡ ಪೆಟ್ರೋಲ್​, ಡೀಸೆಲ್ ದರ; ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Apr 25, 2021 | 9:09 AM

Share

ಬೆಂಗಳೂರು: ಸತತವಾಗಿ 10 ನೇ ದಿನವೂ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಪೆಟ್ರೋಲ್​, ಡೀಸೆಲ್​ ದರ ಸ್ಥಿರವಾಗಿದೆ. ಹಿಂದಿನ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್ ದರದಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 14 ಪೈಸೆ ಕಡಿತಗೊಳಿಸಿದ್ದವು. ಅದಾದ ನಂತರದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 40 ಪೈಸೆ ಆಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್ ದರ 80 ರೂಪಾಯಿ 73 ಪೈಸೆ ಆಗಿದೆ.

ಮುಂಬೈ ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96 ರೂಪಾಯಿ 83 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87 ರೂಪಾಯಿ 81 ಪೈಸೆಯಷ್ಟಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92 ರೂಪಾಯಿ 43 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85 ರೂಪಾಯಿ 75 ಪೈಸೆ ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರವನ್ನು ಗಮನಿಸಿದಾಗ 90 ರೂಪಾಯಿ 20 ಪೈಸೆಯಷ್ಟಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 83 ರೂಪಾಯಿ 61 ಪೈಸೆ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88 ರೂಪಾಯಿ 79 ಪೈಸೆ ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81 ರೂಪಾಯಿ 19 ಪೈಸೆ ಇದೆ.

ಭೂಪಾಲ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್ ದರ 98 ರೂಪಾಯಿ 41 ಪೈಸೆ ಇದೆ. ಪ್ರತಿ ಲೀಟರ್​ ಡೀಸೆಲ್​ ದರ 88 ರೂಪಾಯಿ 98 ಪೈಸೆಯಷ್ಟಿದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು 93 ರೂಪಾಯಿ 43 ಪೈಸೆ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 85 ರೂಪಾಯಿ 60 ಪೈಸೆ ಇದೆ. ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು ಗ್ರಾಹಕರು 88 ರೂಪಾಯಿ 72 ಪೈಸೆ ಕೊಟ್ಟು ಕೊಳ್ಳುತ್ತಿದ್ದಾರೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ಅನ್ನು 81 ರೂಪಾಯಿ 13 ಪೈಸೆ ಕೊಟ್ಟು ಗ್ರಾಹಕರು ಖರೀದಿಸುತ್ತಿದ್ದಾರೆ.

ಏಪ್ರಿಲ್​ ತಿಂಗಳ ಮೊದಲು 15 ದಿನಗಳ ಕಾಲ ಪೆಟ್ರೋಲ್, ಡೀಸೆಲ್​ ದರವನ್ನು ಬದಲಾವಣೆ ಮಾಡಿರಲಿಲ್ಲ. 15 ದಿನಗಳ ನಂತರ ಗುರುವಾರ ಮೊದಲಬಾರಿಗೆ ಕಡಿತ ಕಂಡಿತು. ಅದಕ್ಕೂ ಮೊದಲು ಮಾರ್ಚ್​ ತಿಂಗಳ ಕೊನೆಯ 30ನೇ ತಾರೀಕಿನಂದು ಕಡಿತಗೊಳಿಸಲಾಗಿತ್ತು. ಕಾರಣವೆಂದರೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿರುವುದು. ಮೊದಲು ಸತತವಾಗಿ ಏರುತ್ತಲೇ ಇದ್ದ ಇಂಧನ ದರವನ್ನು ನೋಡುತ್ತಿದ್ದ ಗ್ರಾಹಕರು ಬೇಸತ್ತಿದ್ದರು. ಇದೀಗ ನಿಧಾನವಾಗಿ ಇಂಧನ ದರ ಇಳಿಕೆಯತ್ತ ಮುಖ ಮಾಡುವಂತೆ ಅನಿಸಿತ್ತು. ಆದರೀಗ ಏಪ್ರಿಲ್​ ತಿಂಗಳಿನಲ್ಲಿ ಕೊಂಚ ದರ ಇಳಿಕೆಯಾಗಿದ್ದರೂ ನಂತರದಲ್ಲಿ ಸತತ 10 ದಿನಗಳಾದರೂ ದರ ಕುಸಿತ ಕಂಡಿಲ್ಲ.

ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್​, ಡೀಸೆಲ್​ ದರ 16 ಬಾರಿ ಏರಿಕೆ ಕಂಡಿತ್ತು. ನಂತರ ಕಳೆದ ಮಾರ್ಚ್​ ತಿಂಗಳಿನಲ್ಲಿ ಪೆಟ್ರೋಲ್​, ಡೀಸೆಲ್ ದರ ಗಮನಿಸಿದಾಗ ಮೂರು ಬಾರಿ ದರವನ್ನು ಕಡಿತಗೊಳಿಸಲಾಗಿತ್ತು. ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿದರೆ ದಿನೇ ದಿನೇ ಏರುತ್ತದೆ, ಆದರೆ ಇಳಿಕೆ ಕಂಡುಬರುವಾಗ ಮಾತ್ರ ನಿಧಾನ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೂ ಪೆಟ್ರೋಲ್​, ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿಯೇ ಇದೆ.

ವಿವಿಧ ನಗರದ ಪೆಟ್ರೋಲ್​ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:08 am, Sun, 25 April 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ