AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

Petrol Rate Today, 23-12-2021: ನವೆಂಬರ್​ 4ರಂದು ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಅಂದಿನಿಂದಲೂ ದೇಶದ ಯಾವುದೇ ಮಹಾನಗರಗಳಲ್ಲಿ  ಇಂಧನ ದರ ಹಾಗೇ ಇದೆ

Petrol Price Today: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 23, 2021 | 8:28 AM

Share

Petrol Diesel Price Today | ಪೆಟ್ರೋಲ್​-ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯೂ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ನವೆಂಬರ್​ 4ರಂದು ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಅಂದಿನಿಂದಲೂ ದೇಶದ ಯಾವುದೇ ಮಹಾನಗರಗಳಲ್ಲಿ  ಇಂಧನ ದರ ಹಾಗೇ ಇದೆ. ಸದ್ಯ ರಾಷ್ಟ್ರದಲ್ಲಿ ಸುಮಾರು 27ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್​ ದರ 100 ರೂಪಾಯಿ ಮೇಲಿದೆ. ರಾಜ್ಯದಿಂದ ರಾಜ್ಯಕ್ಕೆ, ನಗರದಿಂದ ನಗರಕ್ಕೆ ಪೆಟ್ರೋಲ್​-ಡೀಸೆಲ್​ ಬೆಲೆ ಬೇರೆಯದ್ದೇ ಆಗಿರುತ್ತದೆ. ಅದು ಆಯಾ ರಾಜ್ಯಗಳ ವ್ಯಾಟ್ (VAT) ಮೇಲೆ ಅವಲಂಬಿತವಾಗಿರುತ್ತದೆ.  ಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:27 am, Thu, 23 December 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!