AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಇಂದು ಪೆಟ್ರೋಲ್​, ಡೀಸೆಲ್​ ದರ ಹೀಗಿದೆ! ಮುಂಬೈನಲ್ಲಿ 99 ರೂ. ತಲುಪಲಿರುವ ಪೆಟ್ರೋಲ್​ ಬೆಲೆ

Petrol Diesel Price Today: ದೇಶಾದ್ಯಂತ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಗರಿಷ್ಠ ಮಟ್ಟ ತಲುಪಿದೆ. ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ಮುಂಬೈನಲ್ಲಿ ಪೆಟ್ರೋಲ್​, ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ಕಂಡಿದ್ದು, ಪ್ರತಿ ಲೀಟರ್​ ಪೆಟ್ರೋಲ್​ ದರ 98.88 ರೂಪಾಯಿಗೆ ಏರಿಕೆಯಾಗಿದೆ. ಇನ್ನೇನು 99 ರೂಪಾಯಿ ತಲುಪುವ ಅಂಚಿನಲ್ಲಿದೆ.

Petrol Diesel Rate Today: ಇಂದು ಪೆಟ್ರೋಲ್​, ಡೀಸೆಲ್​ ದರ ಹೀಗಿದೆ! ಮುಂಬೈನಲ್ಲಿ 99 ರೂ. ತಲುಪಲಿರುವ ಪೆಟ್ರೋಲ್​ ಬೆಲೆ
ಪಿಟಿಐ ಚಿತ್ರ
shruti hegde
|

Updated on:May 17, 2021 | 8:57 AM

Share

ದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ನಿನ್ನೆ (ಭಾನುವಾರ) ತೈಲ ಬೆಲೆಯನ್ನು ಏರಿಸಿದ ನಂತರ ಇಂದು ( ಸೋಮವಾರ) ಪೆಟ್ರೋಲ್​ ಮತ್ತು ಡೀಸೆಲ್​ ದರ ಸ್ಥಿರವಾಗಿದೆ. ಭಾನುವಾರ ಪೆಟ್ರೋಲ್​ ದರವನ್ನು ಲೀಟರ್​ಗೆ 24 ಪೈಸೆ ಹಾಗೂ ಡೀಸೆಲ್​ಅನ್ನು 27 ಪೈಸೆ ಏರಿಕೆ ಮಾಡಲಾಗಿತ್ತು. ಈ ಮೂಲಕ ದೇಶಾದ್ಯಂತ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಗರಿಷ್ಠ ಮಟ್ಟ ತಲುಪಿದೆ. ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ಮುಂಬೈನಲ್ಲಿ ಪೆಟ್ರೋಲ್​, ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ಕಂಡಿದ್ದು, ಪ್ರತಿ ಲೀಟರ್​ ಪೆಟ್ರೋಲ್​ ದರ 98.88 ರೂಪಾಯಿಗೆ ಏರಿಕೆಯಾಗಿದೆ. ಇನ್ನೇನು 99 ರೂಪಾಯಿ ತಲುಪುವ ಅಂಚಿನಲ್ಲಿದೆ.

ಭಾನುವಾರದ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪೆಟ್ರೋಲ್​ ದರ ಲೀಟರ್​ಗೆ 92.58 ರೂಪಾಯಿ ಆಗಿದೆ. ಹಾಗೆಯೇ ಡೀಸೆಲ್​ ಬೆಲೆ 83.22 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಪೆಟ್ರೋಲ್​ ದರ ಲೀಟರ್​ಗೆ 94.31 ರೂಪಾಯಿ ಆಗಿದ್ದರೆ, ಡೀಸೆಲ್​ ಪ್ರತಿ ಲೀಟರ್​ಗೆ 88.07 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.67 ರೂಪಾಯಿ ಇದೆ. ಹಾಗೆಯೇ ಡೀಸೆಲ್ ದರ 86.06 ರೂಪಾಯಿ ಇದೆ. ಈ ನಗರಗಳಿಗೆ ಹೋಲಿಸಿದರೆ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್​ ದರ ಹೆಚ್ಚಿದ್ದು, ಲೀಟರ್​ ಪೆಟ್ರೋಲ್​ ದ 98.88 ರೂಪಾಯಿ ಹಾಗೂ ಡೀಸೆಲ್​ 90.40 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 95.33 ರೂಪಾಯಿ ಇದೆ. ಹಾಗೂ ಡೀಸೆಲ್​ ದರ 87.92 ರೂಪಾಯಿ ಆಗಿದೆ.

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವು ನಗರಗಳು ಈಗಾಗಲೇ ಪೆಟ್ರೋಲ್​ ಬೆಲೆಯಲ್ಲಿ 100 ರೂಪಾಯಿ ಗಡಿ ದಾಟಿವೆ. ಹಾಗೆಯೇ ವಾಣಿಜ್ಯ ನಗರಿ ಮುಂಬೈ ಕೂಡಾ ಪೆಟ್ರೋಲ್​ ದರದಲ್ಲಿ ಶತಕ ಬಾರಿಸುತಂತೆ ಕಾಣಿಸುತ್ತಿದೆ. ಇದೇ ರೀತಿ ತೈಲ ದರ ಏರಿಕೆ ಕಂಡು ಬರುತ್ತಿದ್ದರೆ, ಮುಂಬೈ ಕೂಡಾ ಶತಕ ಬಾರಿಸುವಲ್ಲಿ ಯಾವುದೇ ಅನುಮಾನವಿಲ್ಲ.

ಸ್ಥಳೀಯ ತೆರಿಗೆಗಳಾದ ವ್ಯಾಟ್​ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ (ವ್ಯಾಟ್​) ವಿಧಿಸುತ್ತದೆ. ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರವಿದೆ.

ರಾಜಸ್ಥಾನ ಶ್ರೀಗಂಗನಗರದಲ್ಲಿ ಅತಿ ಹೆಚ್ಚು ಇಂಧನ ದರವಿದ್ದು, ಲೀಟರ್​ ಪೆಟ್ರೋಲ್​ ದರ 103.52 ರೂಪಾಯಿ ಇದೆ. ಹಾಗೆಯೇ ಡೀಸೆಲ್​ ಬೆಲೆ 95.99 ರೂಪಾಯಿಗೆ ತಲುಪಿದೆ. ಮೇ ತಿಂಗಳಳಿನಲ್ಲಿ ಒಟ್ಟು ಒಂಭತ್ತು ದಿನಗಳ ಕಾಲ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯಾಗಿದೆ. ಆ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 2.19 ರೂಪಾಯಿ ಹಾಗೂ ಡೀಸೆಲ್​ 2.49 ರೂಪಾಯಿ ಏರಿಕೆ ಮಾಡಲಾಗಿದೆ.

ಕಳೆದ ವರ್ಷದ ಮಾರ್ಚ್​ ತಿಂಗಳಿನಲ್ಲಿ ಸರ್ಕಾರವು ಇಂಧನದ ಮೇಲಿನ ಅವಕಾರಿ ಸುಂಕವನ್ನು ಏರಿಕೆ ಮಾಡಿದಾಗ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಪೆಟ್ರೋಲ್​ ದರ ಲೀಟರ್​ಗೆ 22.99 ರೂ.ಗಳಷ್ಟು ಹೆಚ್ಚಾಗಿತ್ತು. ಮತ್ತು ಡೀಸೆಲ್​ ದರದಲ್ಲಿ 20.93 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:49 am, Mon, 17 May 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ