AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಶತಕ ಬಾರಿಸುವ ಅಂಚಿನಲ್ಲಿದೆ ಮುಂಬೈ ನಗರ!

Petrol Diesel Price Today: ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರ 23 ರಿಂದ 27 ಪೈಸೆ ಏರಿಕೆಯಾಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 27 ರಿಂದ 31 ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​ ದರ 99 ರೂಪಾಯಿ ಗಡಿ ದಾಟಿ ಗರಿಷ್ಠ ಮಟ್ಟದಲ್ಲಿದೆ.

Petrol Diesel Rate Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಶತಕ ಬಾರಿಸುವ ಅಂಚಿನಲ್ಲಿದೆ ಮುಂಬೈ ನಗರ!
ಸಾಂದರ್ಭಿಕ ಚಿತ್ರ
shruti hegde
|

Updated on: May 18, 2021 | 8:48 AM

Share

ದೆಹಲಿ: ಮೇ ತಿಂಗಳ 14ನೇ ತಾರೀಕಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಂದಿನ ಒಟ್ಟು 10 ಬಾರಿ ಏರಿಕೆ ಕಂಡಿದೆ. ಬೆಲೆ ಏರಿಕೆಯ ಬಳಿಕ ತೈಲ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಇಂದು (ಮಂಗಳವಾರ) ಪ್ರತಿ ಲೀಟರ್​ ಪೆಟ್ರೋಲ್​ ದರ 23 ರಿಂದ 27 ಪೈಸೆ ಏರಿಕೆಯಾಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 27 ರಿಂದ 31 ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​ ದರ 99 ರೂಪಾಯಿ ಗಡಿ ದಾಟಿ ಗರಿಷ್ಠ ಮಟ್ಟದಲ್ಲಿದೆ.

ಇನ್ನು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ ಕಳೆದ ಸೋಮವಾರ 92.58 ರೂಪಾಯಿ ಇತ್ತು. ಇಂದು ದರ ಏರಿಕೆಯ ಬಳಿಕ 92.85 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ ಕೂಡಾ ಸೋಮವಾರ 83.22 ರೂಪಾಯಿ ಇತ್ತು. ಇಂದು ಮಂಗಳವಾರ 83.51 ರೂಪಾಯಿಗೆ ಏರಿಕೆಯಾಗಿದೆ.

ಮುಂಬೈನಗರದಲ್ಲಿ ಇನ್ನೇನು ಶತಕ ಬಾರಿಸುವ ಅಂಚಿನಲ್ಲಿ ಪೆಟ್ರೋಲ್​ ದರವಿದೆ. ಸೋಮವಾದರ ದರಕ್ಕಿಂತ 26 ಪೈಸೆ ಜಿಗಿತ ಕಂಡಿದ್ದು, ಲೀಟರ್​ ಪೆಟ್ರೋಲ್​ ಬೆಲೆ 99.14 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ದಲ್ಲಿ 31 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್​ ಪ್ರತಿ ಲೀಟರ್​ಗೆ 90.71 ರೂಪಾಯಿ ಆಗಿದೆ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ರಾಜಸ್ಥಾನ, ಮಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಸಾರ್ವಕಾಲಿಕ ಗರಿಷ್ಠ ದಾಖಲೆ ಸೃಷ್ಟಿಸಿದೆ.

ಸೋಮವಾರದ ದರಕ್ಕಿಂತ 25 ಪೈಸೆ ಏರಿಕೆಯ ಬಳಿಕ ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 92.92 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್​ ದರದಲ್ಲಿ 29 ಪೈಸೆ ಏರಿಕೆಯಾಗಿದ್ದು, ಲೀಟರ್​ ಡೀಸೆಲ್​ ದರ 86.35 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ ನಿನ್ನೆ 94.31 ರೂಪಾಯಿ ಇತ್ತು. ಇಂದು ದರ ಹೆಚ್ಚಳದ ಬಳಿಕ 94.54 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರದಲ್ಲಿ ಪೈಸೆ ಏರಿಕೆಯ ಬಳಿಕ 88.34 ರೂಪಾಯಿಗೆ ಹೆಚ್ಚಳವಾಗಿದೆ.

ರಾಜಸ್ಥಾನದ ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 103.80 ರೂಪಾಯಿ ತಲುಪಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 96.30 ರೂಪಾಯಿ ಆಗಿದೆ. ಸ್ಥಳೀಯ ತೆರಿಗೆಗಳು ಮತ್ತು ವಿಧಿಸಿದ ವ್ಯಾಟ್​ಗಳಿಗೆ ಅನುಸಾರವಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಪ್ರಸ್ತುತದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್​ ಬೆಲೆಯಲ್ಲಿ ಶೇ. 61ಕ್ಕಿಂತ ಹೆಚ್ಚಿದೆ. ಹಾಗೆಯೇ ಡೀಸೆಲ್​ ದರದಲ್ಲಿ ಶೇ.56ಕ್ಕಿಂತ ಹೆಚ್ಚಿದೆ. ಕೇಂದ್ರವು ವಿಧಿಸುವ ಅಬಕಾರಿ ಸುಂಕ ಲೀಟರ್​ ಪೆಟ್ರೋಲ್​ 32.90 ರೂಪಾಯಿ ಮತ್ತು ಡೀಸೆಲ್​ಗೆ 31.80 ರೂಪಾಯಿ ಇದೆ.

ನಗರ                 ಪೆಟ್ರೋಲ್ ದರ (ಲೀ.)   ಡೀಸೆಲ್ ದರ (ಲೀ) ದೆಹಲಿ                 92.85                            83.51 ಕೋಲ್ಕತಾ          92.92                            86.35 ಮುಂಬೈ             99.14                             90.71 ಚೆನ್ನೈ                 94.54                            88.34 ಬೆಂಗಳೂರು        95.94                           88.53 ಹೈದರಾಬಾದ್    96.50                          91.04 ಶ್ರೀ ಗಂಗನಗರ     103.80                       96.30 ಜೈಪುರ                 99.30                         92.18 ಪಾಟ್ನಾ                95.05                         88.75 ಲಕ್ನೋ                 90.57                        83.89

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
shruti hegde
shruti hegde
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ