AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಶತಕ ಬಾರಿಸುವ ಅಂಚಿನಲ್ಲಿದೆ ಮುಂಬೈ ನಗರ!

Petrol Diesel Price Today: ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರ 23 ರಿಂದ 27 ಪೈಸೆ ಏರಿಕೆಯಾಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 27 ರಿಂದ 31 ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​ ದರ 99 ರೂಪಾಯಿ ಗಡಿ ದಾಟಿ ಗರಿಷ್ಠ ಮಟ್ಟದಲ್ಲಿದೆ.

Petrol Diesel Rate Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಶತಕ ಬಾರಿಸುವ ಅಂಚಿನಲ್ಲಿದೆ ಮುಂಬೈ ನಗರ!
ಸಾಂದರ್ಭಿಕ ಚಿತ್ರ
shruti hegde
|

Updated on: May 18, 2021 | 8:48 AM

Share

ದೆಹಲಿ: ಮೇ ತಿಂಗಳ 14ನೇ ತಾರೀಕಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಂದಿನ ಒಟ್ಟು 10 ಬಾರಿ ಏರಿಕೆ ಕಂಡಿದೆ. ಬೆಲೆ ಏರಿಕೆಯ ಬಳಿಕ ತೈಲ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಇಂದು (ಮಂಗಳವಾರ) ಪ್ರತಿ ಲೀಟರ್​ ಪೆಟ್ರೋಲ್​ ದರ 23 ರಿಂದ 27 ಪೈಸೆ ಏರಿಕೆಯಾಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 27 ರಿಂದ 31 ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​ ದರ 99 ರೂಪಾಯಿ ಗಡಿ ದಾಟಿ ಗರಿಷ್ಠ ಮಟ್ಟದಲ್ಲಿದೆ.

ಇನ್ನು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ ಕಳೆದ ಸೋಮವಾರ 92.58 ರೂಪಾಯಿ ಇತ್ತು. ಇಂದು ದರ ಏರಿಕೆಯ ಬಳಿಕ 92.85 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ ಕೂಡಾ ಸೋಮವಾರ 83.22 ರೂಪಾಯಿ ಇತ್ತು. ಇಂದು ಮಂಗಳವಾರ 83.51 ರೂಪಾಯಿಗೆ ಏರಿಕೆಯಾಗಿದೆ.

ಮುಂಬೈನಗರದಲ್ಲಿ ಇನ್ನೇನು ಶತಕ ಬಾರಿಸುವ ಅಂಚಿನಲ್ಲಿ ಪೆಟ್ರೋಲ್​ ದರವಿದೆ. ಸೋಮವಾದರ ದರಕ್ಕಿಂತ 26 ಪೈಸೆ ಜಿಗಿತ ಕಂಡಿದ್ದು, ಲೀಟರ್​ ಪೆಟ್ರೋಲ್​ ಬೆಲೆ 99.14 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ದಲ್ಲಿ 31 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್​ ಪ್ರತಿ ಲೀಟರ್​ಗೆ 90.71 ರೂಪಾಯಿ ಆಗಿದೆ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ರಾಜಸ್ಥಾನ, ಮಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಸಾರ್ವಕಾಲಿಕ ಗರಿಷ್ಠ ದಾಖಲೆ ಸೃಷ್ಟಿಸಿದೆ.

ಸೋಮವಾರದ ದರಕ್ಕಿಂತ 25 ಪೈಸೆ ಏರಿಕೆಯ ಬಳಿಕ ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 92.92 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್​ ದರದಲ್ಲಿ 29 ಪೈಸೆ ಏರಿಕೆಯಾಗಿದ್ದು, ಲೀಟರ್​ ಡೀಸೆಲ್​ ದರ 86.35 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ ನಿನ್ನೆ 94.31 ರೂಪಾಯಿ ಇತ್ತು. ಇಂದು ದರ ಹೆಚ್ಚಳದ ಬಳಿಕ 94.54 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರದಲ್ಲಿ ಪೈಸೆ ಏರಿಕೆಯ ಬಳಿಕ 88.34 ರೂಪಾಯಿಗೆ ಹೆಚ್ಚಳವಾಗಿದೆ.

ರಾಜಸ್ಥಾನದ ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 103.80 ರೂಪಾಯಿ ತಲುಪಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 96.30 ರೂಪಾಯಿ ಆಗಿದೆ. ಸ್ಥಳೀಯ ತೆರಿಗೆಗಳು ಮತ್ತು ವಿಧಿಸಿದ ವ್ಯಾಟ್​ಗಳಿಗೆ ಅನುಸಾರವಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಪ್ರಸ್ತುತದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್​ ಬೆಲೆಯಲ್ಲಿ ಶೇ. 61ಕ್ಕಿಂತ ಹೆಚ್ಚಿದೆ. ಹಾಗೆಯೇ ಡೀಸೆಲ್​ ದರದಲ್ಲಿ ಶೇ.56ಕ್ಕಿಂತ ಹೆಚ್ಚಿದೆ. ಕೇಂದ್ರವು ವಿಧಿಸುವ ಅಬಕಾರಿ ಸುಂಕ ಲೀಟರ್​ ಪೆಟ್ರೋಲ್​ 32.90 ರೂಪಾಯಿ ಮತ್ತು ಡೀಸೆಲ್​ಗೆ 31.80 ರೂಪಾಯಿ ಇದೆ.

ನಗರ                 ಪೆಟ್ರೋಲ್ ದರ (ಲೀ.)   ಡೀಸೆಲ್ ದರ (ಲೀ) ದೆಹಲಿ                 92.85                            83.51 ಕೋಲ್ಕತಾ          92.92                            86.35 ಮುಂಬೈ             99.14                             90.71 ಚೆನ್ನೈ                 94.54                            88.34 ಬೆಂಗಳೂರು        95.94                           88.53 ಹೈದರಾಬಾದ್    96.50                          91.04 ಶ್ರೀ ಗಂಗನಗರ     103.80                       96.30 ಜೈಪುರ                 99.30                         92.18 ಪಾಟ್ನಾ                95.05                         88.75 ಲಕ್ನೋ                 90.57                        83.89

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?