Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ

Petrol Diesel Rate Today: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ
ಪಿಟಿಐ ಚಿತ್ರ
Follow us
shruti hegde
|

Updated on: May 26, 2021 | 8:49 AM

ದೆಹಲಿ: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಂಧನ ದರ ಏರಿಕೆಯಿಂದಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಮೇ ತಿಂಗಳಿನಲ್ಲಿ ಒಟ್ಟು 13 ಬಾರಿ ಏರಿಕೆ ಮಾಡಲಾಗಿದೆ. ಈ ಮೂಲಕ ಕೆಲವು ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿವೆ. ಇನ್ನು ಕೆಲವು ನಗರಗಳು ಗಡಿಯ ಅಂಚಿನಲ್ಲಿವೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಭೂಪಾಲ್​ನಲ್ಲಿಯೂ ಲೀಟರ್​ ಪೆಟ್ರೋಲ್​ 100ರ ಗಡಿ ದಾಟಿದ್ದು, 101.52 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್​ ದರ 92.77 ರೂಪಾಯಿ ಇದೆ.

ಇನ್ನೇನು ಕೆಲ ಪೈಸೆಗಳಷ್ಟು ಏರಿಕೆ ಕಂಡರೆ ಮುಂಬೈ ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ. ಲೀಟರ್​ ಪೆಟ್ರೋಲ್​ ದರ 99.71 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 91.57 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​87.91 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.06 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 89.11 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 96.55 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ಅನ್ನು 89.39 ರೂಪಾಯಿ ಇದೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ