AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 25 ರೂ.ಕಡಿತ ಘೋಷಿಸಿದ ಸಿಎಂ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​ !

ಜಾರ್ಖಂಡ್​ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್​ ಮುಕ್ತಿ ಮೋರ್ಚಾ (JMM)​ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ.

ಜಾರ್ಖಂಡ್​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 25 ರೂ.ಕಡಿತ ಘೋಷಿಸಿದ ಸಿಎಂ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​ !
ಪೆಟ್ರೋಲ್​ ಬೆಲೆ ಕಡಿತಗೊಳಿಸಿದ ಜಾರ್ಖಂಡ ಸಿಎಂ
TV9 Web
| Edited By: |

Updated on: Dec 29, 2021 | 4:47 PM

Share

ಸದ್ಯ ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಅಧಿಕವಾಗಿದೆ. 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 100 ರೂಪಾಯಿ ಇದೆ. ದೀಪಾವಳಿ ಹಬ್ಬದ ಮುನ್ನಾದಿನ ಅಂದರೆ ನವೆಂಬರ್​ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​​ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದ ಮೇಲೆ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಹಲವು ರಾಜ್ಯಗಳೂ ಸಹ ವ್ಯಾಟ್​ ಕಡಿತಗೊಳಿಸಿದ್ದವು. ಆದರೆ ಇದೀಗ ಜಾರ್ಖಂಡ ಸರ್ಕಾರ ಒಂದು ಮಹತ್ವದ ಘೋಷಣೆ ಮಾಡಿದೆ. ಪೆಟ್ರೋಲ್​ ಬೆಲೆಯಲ್ಲಿ 25 ರೂಪಾಯಿ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಇಂದು ಘೋಷಿಸಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. 

ಇಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಾರ್ಯಾಲಯ,  ಪೆಟ್ರೋಲ್​-ಡೀಸೆಲ್​ ನಿರಂತರವಾಗಿ ಏರಿದ ಹಿನ್ನೆಲೆಯಲ್ಲಿ ಬಡವರಿಗೆ-ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿದೆ. ಹಾಗಾಗಿ 2022ರ ಜನವರಿ 26ರಿಂದ ದ್ವಿಚಕ್ರವಾಹನ ಸವಾರರಿಗೆ ಮಾತ್ರ ಅನ್ವಯ ಆಗುವಂತೆ ಪೆಟ್ರೋಲ್​ ಬೆಲೆಯಲ್ಲಿ ಪ್ರತಿ ಲೀಟರ್​ಗೆ 25 ರೂ.ಕಡಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್​ ಘೋಷಿಸಿದ್ದಾರೆ ಎಂದು ತಿಳಿಸಿದೆ. ಬಡವರು-ಮಧ್ಯಮದವರು ಹೇಗೋ ಕಷ್ಟಪಟ್ಟು ದ್ವಿಚಕ್ರವಾಹನ ಖರೀದಿ ಮಾಡುತ್ತಾರೆ. ಆದರೆ ಅವರಿಗೆ ಪೆಟ್ರೋಲ್​ ಹೊರೆಯಾಗುತ್ತಿದೆ. ವಾಹನವಿದ್ದರೂ ಅದನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಂಥವರಿಗೆ ಸಹಾಯವಾಗಲಿ ಎಂದು ಪೆಟ್ರೋಲ್​ ದರವನ್ನು ಕಡಿಮೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ ಎನ್ನಲಾಗಿದೆ.

ಜಾರ್ಖಂಡ್​ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್​ ಮುಕ್ತಿ ಮೋರ್ಚಾ (JMM)​ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. 2019ರ ಚುನಾವಣೆಯಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ 30 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ನಂತರ ಕಾಂಗ್ರೆಸ್​ ಮತ್ತು ಲಾಲೂ ಪ್ರಸಾದ್​ ಯಾದವ್​ರ ಆರ್​ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಎಂಎಂ ಸರ್ಕಾರ ರಚನೆ ಮಾಡಿದೆ. ಇನ್ನು ಜಾರ್ಖಂಡ್​​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 98.48 ರೂಪಾಯಿ ಇತ್ತು. ಇದೀಗ 25 ರೂಪಾಯಿ ಕಡಿತಗೊಳ್ಳುವ ಮೂಲಕ ಪ್ರತಿ ಲೀಟರ್​ಗೆ 73 ರೂ.ಆಗಲಿದೆ.

ಇದನ್ನೂ ಓದಿ: ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದಿಂದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಬಿಗ್​ ಗಿಫ್ಟ್​

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!