AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 25 ರೂ.ಕಡಿತ ಘೋಷಿಸಿದ ಸಿಎಂ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​ !

ಜಾರ್ಖಂಡ್​ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್​ ಮುಕ್ತಿ ಮೋರ್ಚಾ (JMM)​ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ.

ಜಾರ್ಖಂಡ್​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 25 ರೂ.ಕಡಿತ ಘೋಷಿಸಿದ ಸಿಎಂ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​ !
ಪೆಟ್ರೋಲ್​ ಬೆಲೆ ಕಡಿತಗೊಳಿಸಿದ ಜಾರ್ಖಂಡ ಸಿಎಂ
TV9 Web
| Edited By: |

Updated on: Dec 29, 2021 | 4:47 PM

Share

ಸದ್ಯ ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಅಧಿಕವಾಗಿದೆ. 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 100 ರೂಪಾಯಿ ಇದೆ. ದೀಪಾವಳಿ ಹಬ್ಬದ ಮುನ್ನಾದಿನ ಅಂದರೆ ನವೆಂಬರ್​ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​​ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದ ಮೇಲೆ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಹಲವು ರಾಜ್ಯಗಳೂ ಸಹ ವ್ಯಾಟ್​ ಕಡಿತಗೊಳಿಸಿದ್ದವು. ಆದರೆ ಇದೀಗ ಜಾರ್ಖಂಡ ಸರ್ಕಾರ ಒಂದು ಮಹತ್ವದ ಘೋಷಣೆ ಮಾಡಿದೆ. ಪೆಟ್ರೋಲ್​ ಬೆಲೆಯಲ್ಲಿ 25 ರೂಪಾಯಿ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಇಂದು ಘೋಷಿಸಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. 

ಇಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಾರ್ಯಾಲಯ,  ಪೆಟ್ರೋಲ್​-ಡೀಸೆಲ್​ ನಿರಂತರವಾಗಿ ಏರಿದ ಹಿನ್ನೆಲೆಯಲ್ಲಿ ಬಡವರಿಗೆ-ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿದೆ. ಹಾಗಾಗಿ 2022ರ ಜನವರಿ 26ರಿಂದ ದ್ವಿಚಕ್ರವಾಹನ ಸವಾರರಿಗೆ ಮಾತ್ರ ಅನ್ವಯ ಆಗುವಂತೆ ಪೆಟ್ರೋಲ್​ ಬೆಲೆಯಲ್ಲಿ ಪ್ರತಿ ಲೀಟರ್​ಗೆ 25 ರೂ.ಕಡಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್​ ಘೋಷಿಸಿದ್ದಾರೆ ಎಂದು ತಿಳಿಸಿದೆ. ಬಡವರು-ಮಧ್ಯಮದವರು ಹೇಗೋ ಕಷ್ಟಪಟ್ಟು ದ್ವಿಚಕ್ರವಾಹನ ಖರೀದಿ ಮಾಡುತ್ತಾರೆ. ಆದರೆ ಅವರಿಗೆ ಪೆಟ್ರೋಲ್​ ಹೊರೆಯಾಗುತ್ತಿದೆ. ವಾಹನವಿದ್ದರೂ ಅದನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಂಥವರಿಗೆ ಸಹಾಯವಾಗಲಿ ಎಂದು ಪೆಟ್ರೋಲ್​ ದರವನ್ನು ಕಡಿಮೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ ಎನ್ನಲಾಗಿದೆ.

ಜಾರ್ಖಂಡ್​ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್​ ಮುಕ್ತಿ ಮೋರ್ಚಾ (JMM)​ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. 2019ರ ಚುನಾವಣೆಯಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ 30 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ನಂತರ ಕಾಂಗ್ರೆಸ್​ ಮತ್ತು ಲಾಲೂ ಪ್ರಸಾದ್​ ಯಾದವ್​ರ ಆರ್​ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಎಂಎಂ ಸರ್ಕಾರ ರಚನೆ ಮಾಡಿದೆ. ಇನ್ನು ಜಾರ್ಖಂಡ್​​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 98.48 ರೂಪಾಯಿ ಇತ್ತು. ಇದೀಗ 25 ರೂಪಾಯಿ ಕಡಿತಗೊಳ್ಳುವ ಮೂಲಕ ಪ್ರತಿ ಲೀಟರ್​ಗೆ 73 ರೂ.ಆಗಲಿದೆ.

ಇದನ್ನೂ ಓದಿ: ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದಿಂದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಬಿಗ್​ ಗಿಫ್ಟ್​

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು