AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಚೆನ್ನೈನಲ್ಲಿಯೂ ಶತಕ ಬಾರಿಸಿದ ಪೆಟ್ರೋಲ್​ ಬೆಲೆ! ಇಂಧನ ದರ ವಿವರ ಗಮನಿಸಿ

Petrol Diesel Rate Today: ಕಳೆದ ಮೇ ತಿಂಗಳಿನಿಂದ ತೈಲ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇಲ್ಲಿಯವರೆಗೂ ಕೂಡಾ ಏರುತ್ತಲೇ ಇದೆ. ಒಟ್ಟು 33 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ.

Petrol Price Today: ಚೆನ್ನೈನಲ್ಲಿಯೂ ಶತಕ ಬಾರಿಸಿದ ಪೆಟ್ರೋಲ್​ ಬೆಲೆ! ಇಂಧನ ದರ ವಿವರ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 02, 2021 | 9:10 AM

Share

Petrol Diesel Price Today| ದೆಹಲಿ: ಎರಡು ದಿನದ ಬಳಿಕ ಮತ್ತೆ ಪೆಟ್ರೋಲ್​​ ದರ ಇಂದು (ಜುಲೈ 2, ಶುಕ್ರವಾರ) ಏರಿಕೆಯಾಗಿದೆ. ಆ ಮೂಲಕ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಚೆನ್ನೈ ಕೂಡಾ ಲೀಟರ್​ ಪೆಟ್ರೋಲ್​​ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗಿದೆ. ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಪೆಟ್ರೋಲ್​​ ದರ ಹೆಚ್ಚಳಗೊಂಡಿದೆ. ಎರಡು ದಿನಗಳಿಂದ ಇಂಧನ ದರ ಹೆಚ್ಚಳವಾಗದೇ ಇರುವುದನ್ನು ಕಂಡ ಗ್ರಾಹಕರು ಕೊಂಚ ಸಮಾಧಾನಗೊಂಡಿದ್ದರು. ಆದರೆ ಇಂದು ಮತ್ತೆ ಹೆಚ್ಚಳವಾಗಿರುವುದು ಬೇಸರಕ್ಕೆ ಕಾರಣವಾಗಿದೆ.

ಇಂದು ಪೆಟ್ರೋಲ್​ ದರ ಏರಿಕೆಯಾಗಿದೆ. ಆದರೆ ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪೆಟ್ರೋಲ್​ ದರದಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 99.16 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 89.18 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 105.24 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ಬೆಲೆ 96.72 ರೂಪಾಯಿ ಇದೆ.

ಇಂಧನ ದರ ಏರಿಕೆಯ ಬಳಿಕ ಚೆನ್ನೈ ಕೂಡಾ ಗರಿಷ್ಠ ಮಟ್ಟ ತಲುಪಿದ್ದು ಲೀಟರ್​ ಪೆಟ್ರೋಲ್​ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗಿದೆ. ಲೀಟರ್ ಪೆಟ್ರೋಲ್​ ದರ 100.13 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 93.72 ರೂಪಾಯಿ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.04 ರೂಪಾಯಿಗೆ ಹೆಚ್ಚಳವಾಗಿದೆ. ಲೀಟರ್​ ಡೀಸೆಲ್​ ದರ ಸ್ಥಿರವಾಗಿದ್ದು 92.03 ರೂಪಾಯಿ ಇದೆ.

ಕಳೆದ ಮೇ ತಿಂಗಳಿನಿಂದ ತೈಲ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇಲ್ಲಿಯವರೆಗೂ ಕೂಡಾ ಏರುತ್ತಲೇ ಇದೆ. ಒಟ್ಟು 33 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ಏರುತ್ತಲೇ ಇರುವ ಪೆಟ್ರೋಲ್​, ಡೀಸೆಲ್​ ದರದಿಂದ ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ತಮಿಳುನಾಡು, ಬಿಹಾರ, ಒಡಿಶಾ, ಕರ್ನಾಟಕ, ಲಡಾಕ್​, ಪಾಟ್ನಾದಲ್ಲಿ ಈಗಾಗಲೇ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:07 am, Fri, 2 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ