AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆ ಕಂಡ ಇಂಧನ ಬೆಲೆ; ದೆಹಲಿ, ಕೋಲ್ಕತ್ತಾದಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ!

Petrol Diesel Rate Today: ಇಂದು ಮತ್ತೆ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಕಂಡಿದೆ. ಆ ಮೂಲಕ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ವಿವಿಧ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ ಪರಿಶೀಲಿಸಿ.

Petrol Price Today: ಇಂದು ಸಹ ಏರಿಕೆ ಕಂಡ ಇಂಧನ ಬೆಲೆ; ದೆಹಲಿ, ಕೋಲ್ಕತ್ತಾದಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 07, 2021 | 9:09 AM

Share

Petrol Diesel Price Today| ದೆಹಲಿ: ಇಂದು ತೈಲ ಮಾರುಕಟ್ಟೆ ಕಂಪನಿಗಳು ಮತ್ತೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಹೆಚ್ಚಿಸಿವೆ. ಈ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇಂದು ( ಬುಧವಾರ, ಜುಲೈ 7) ಬೆಲೆ ಹೆಚ್ಚಳದ ಬಳಿಕ ಲೀಟರ್​ ಪೆಟ್ರೋಲ್​ ದರ 100.21 ರೂಪಾಯಿ ಆಗಿದೆ. ಇಂದು 17 ಪೈಸೆ ಹೆಚ್ಚಳದ ಬಳಿಕ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 89.53 ರೂಪಾಯಿ ನಿಗದಿಯಾಗಿದೆ.

ಮೇ 4ರಿಂದ ಇಂಧನ ದರ ಏರಿಕೆಯತ್ತ ಸಾಗುತ್ತಿದ್ದು ಇಲ್ಲಿರವರೆಗೆ ಒಟ್ಟು 36 ಬಾರಿ ಹೆಚ್ಚಳ ಮಾಡಲಾಗಿದೆ. ಜುಲೈ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 4 ಬಾರಿ ಹೆಚ್ಚಳ ಮಾಡಲಾಗಿದೆ. ದರ ಏರಿಕೆ ಕಾಣಲು ಆರಂಭವಾದಾಗಿನಿಂದ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 9.52 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರದಲ್ಲಿ 9.65ರೂಪಾಯಿ ಏರಿಕೆ ಆಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿ ಮುಂಬೈ ಗರಿಷ್ಟ ಮಟ್ಟದಲ್ಲಿದೆ. ಲೀಟರ್​ ಪೆಟ್ರೋಲ್​ ದರ 106.25 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 97.09 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್ ದರ 101.06 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 94.06 ರೂಪಾಯಿಗೆ ಏರಿಕೆ ಆಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 100.23 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.50 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.56 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.89 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 103.78 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 97.40 ರೂಪಾಯಿ ಆಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ