AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಮತ್ತೆ ಏರಿಕೆಯತ್ತ ಸಾಗಿದ ಪೆಟ್ರೋಲ್​, ಡೀಸೆಲ್​ ಬೆಲೆ! ಎಲ್ಲೆಲ್ಲಿ ಎಷ್ಟೆಷ್ಟು? ವಿವರ ಇಲ್ಲಿದೆ

Petrol Diesel Rate Today: ಇಂದು ಲೀಟರ್​ ಪೆಟ್ರೋಲ್​ ದರದಲ್ಲಿ 34 ರಿಂದ 35 ಪೈಸೆ ಹೆಚ್ಚಳವಾಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ರದಲ್ಲಿಯೂ 15 ರಿಂದ 16 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.54 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.87 ರೂಪಾಯಿ ಆಗಿದೆ.

Petrol Price Today: ಮತ್ತೆ ಏರಿಕೆಯತ್ತ ಸಾಗಿದ ಪೆಟ್ರೋಲ್​, ಡೀಸೆಲ್​ ಬೆಲೆ! ಎಲ್ಲೆಲ್ಲಿ ಎಷ್ಟೆಷ್ಟು? ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Jul 15, 2021 | 10:03 AM

Petrol Diesel Price Today | ದೆಹಲಿ: ಪೆಟ್ರೊಲ್​ ಮತ್ತು ಡೀಸೆಲ್​ ಬೆಲೆ ಇಂದು( ಜುಲೈ 15, ಗುರವಾರ) ಮತ್ತೆ ಏರಿಕೆಯಾಗಿದೆ. ಎರಡು ದಿನಗಳ ಕಾಲ ಸ್ಥಿರತೆಯಲ್ಲಿತ್ತು. ಎರಡು ದಿನಗಳ ಹಿಂದೆ ಡೀಸೆಲ್​ ದರವನ್ನು(Diesel Price) ಕೊಂಚ ಇಳಿಕೆಯೂ ಮಾಡಲಾಗಿತ್ತು. ಹಾಗಾಗಿ ಇನ್ನಾದರೂ ಇಂಧನ ದರ(Fuel Price) ಕಡಿಮೆ ಆಗಬಹುದು ಎಂಬ ನಿರೀಕ್ಷೆ ವಾಹನ ಸವಾರರಿಗಿತ್ತು. ಆದರೆ ಇಂದು ಮತ್ತೆ ಪೆಟ್ರೋಲ್​ (Petrol Price) ಮತ್ತು ಡೀಸೆಲ್​ ಬೆಲೆಗಳೆರಡೂ ಸಹ ಹೆಚ್ಚಳವಾಗಿದೆ. ಮೇ 4ರಿಂದ ಏರಿಕೆ ಕಾಣುತ್ತಿರುವ ಪೆಟ್ರೊಲ್​ ಮತ್ತು ಡೀಸೆಲ್​ ದರ ಇಲ್ಲಿಯವರೆಗೆ 40 ಬಾರಿ ಹೆಚ್ಚಳ ಮಾಡಲಾಗಿದೆ. ಎಲ್ಲಾ ಪ್ರಮುಖ ಮೆಟ್ರೋ ನಗರಗಳು ಲೀಟರ್​ ಪೆಟ್ರೋಲ್​ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಹಾಗೆಯೇ ಡೀಸೆಲ್​ ದರವೂ ಸಹ ಸಾರ್ವಕಾಲಿಕ ಗರಿಷ್ಟ ಮಟ್ಟ ತಲುಪಿದೆ.

ಇಂದು ಲೀಟರ್​ ಪೆಟ್ರೋಲ್​ ದರದಲ್ಲಿ 34 ರಿಂದ 35 ಪೈಸೆ ಹೆಚ್ಚಳವಾಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ರದಲ್ಲಿಯೂ 15 ರಿಂದ 16 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.54 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.87 ರೂಪಾಯಿ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.54 ರೂಪಾಯಿ ಇದ್ದರೆ ಲೀಟರ್​ ಡೀಸೆಲ್​ ದರ 97.45 ರೂಪಾಯಿಗೆ ಏರಿಕೆಯಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ ದರ 102.23 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 94.39 ರೂಪಾಯಿ ಆಗಿದೆ. ಇನ್ನು ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ಗೆ 101.74 ರೂಪಾಯಿ ನಿಗದಿಯಾಗಿದ್ದರೆ, ಲೀಟರ್​ ಡೀಸೆಲ್​ ದರದಲ್ಲಿ 93.02 ರೂಪಾಯಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.94 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ ಲೀಟರ್ ಡೀಸೆಲ್​ ದರ 95.26 ರೂಪಾಯಿಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್​ ದರ 105.52 ರೂಪಾಯಿ ಆಗಿದೆ ಹಾಗೆಯೇ ಲೀಟರ್​ ಡೀಸೆಲ್​ ದರ 97.96 ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:51 am, Thu, 15 July 21

ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ