AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ರಾಜಸ್ಥಾನದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ.. ಸಿಲಿಕಾನ್ ಸಿಟಿಯೂ ಶತಕದ ಹಾದಿಯತ್ತ!

Petrol Diesel Rate: ಕಳೆದ ಕೆಲವು ದಿನಗಳಿಂದ ಸತತವಾಗಿ ಇಂಧನದ ಬೆಲೆ ಏರಿಕೆಯತ್ತ ಸಾಗುತ್ತಲೇ ಇದೆ. ಇದೀಗ ಇಂದು (ಗುರವಾರ) ರಾಜಸ್ಥಾನದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿ ಗರಿಷ್ಠ ಮಟ್ಟ ತಲುಪಿದೆ. ಇದೇ ರೀತಿ ದರ ಹೆಚ್ಚಳವಾಗುತ್ತಿದ್ದರೆ ಬೆಂಗಳೂರಿನಲ್ಲೂ ಸಹ ಶತಕ ಬಾರಿಸುವ ಯಾವುದೇ ಸಂದೇಹವಿಲ್ಲ.

Petrol Price: ರಾಜಸ್ಥಾನದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ.. ಸಿಲಿಕಾನ್ ಸಿಟಿಯೂ ಶತಕದ ಹಾದಿಯತ್ತ!
ಸಾಂದರ್ಭಿಕ ಚಿತ್ರ
shruti hegde
|

Updated on:Feb 18, 2021 | 10:52 AM

Share

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಂಧನದ ಬೆಲೆ ಏರಿಕೆಯತ್ತ ಸಾಗುತ್ತಲೇ ಇದೆ. ಇದೀಗ ಇಂದು (ಗುರವಾರ) ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ಪ್ರತಿ ಲೀ. ಪೆಟ್ರೋಲ್​ ಬೆಲೆ 25 ಪೈಸೆ ಹೆಚ್ಚಳದೊಂದಿಗೆ ದರ ₹100.13 ಆಗಿದೆ. ಡೀಸೆಲ್ ದರ ₹ 92.13 ಆಗಿದ್ದು, ಡೀಸೆಲ್ ಕೂಡಾ ಶತಕ ಭಾರಿಸುವ ಹಾದಿಯಲ್ಲಿ ಸಾಗುತ್ತಿದೆ.

ಕಳೆದ ತಿಂಗಳು ರಾಜ್ಯ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಇಂಧನಗಳಲ್ಲಿ ಶೇ.2ರಷ್ಟು ಕಡಿತಗೊಳಿಸಿದ್ದರೂ ಕೂಡಾ ರಾಜಸ್ಥಾನ ಅತಿ ಹೆಚ್ಚು ವ್ಯಾಟ್​ ದರವನ್ನು ಹೊಂದಿದೆ. ಉತ್ತರ ರಾಜಸ್ಥಾನದಲ್ಲಿರುವ ಶ್ರೀಗಂಗನಗರಕ್ಕೆ ಜೋದ್​ಪುರ್ ಮತ್ತು ಜೈಪುರ ಡಿಪೋಗಳಿಂದ ಇಂಧನವನ್ನು ಪೂರೈಸಲಾಗುತ್ತಿದ್ದು, ಇಂದು ರಾಜಸ್ಥಾನ ಪೆಟ್ರೋಲ್​ ದರದಲ್ಲಿ ಶತಕ ಭಾರಿಸಿ ಗರಿಷ್ಠ ಮಟ್ಟ ತಲುಪಿದೆ.

ಇದನ್ನೂ ಓದಿ: Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!

ಭಾರತದಲ್ಲಿ ಗುರವಾರವೂ ಕೂಡಾ ಇಂಧನದ ದರ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 34 ಪೈಸೆ ಹೆಚ್ಚಳವಾಗಿದೆ. ಇದೀಗ ಪ್ರತಿ ಲೀ.ಗೆ ₹89.88 ಹಾಗೂ ಡೀಸೆಲ್ ದರದಲ್ಲಿ 32 ಪೈಸೆ ಹೆಚ್ಚಳವಾಗಿದ್ದು ಇದೀಗ ₹80.27 ಆಗಿದೆ. ಬೆಂಗಳೂರಿನಲ್ಲೂ ಕೂಡಾ ಅದೆಷ್ಟೋ ಪ್ರತಿಭಟನೆ, ಧರಣಿ ನಡೆದಿದ್ದರೂ ಕೂಡಾ ಯಾವುದಕ್ಕೂ ಕ್ಯಾರೇ ಅನ್ನದೇ ದರ ಏರಿಕೆಯತ್ತ ಓಡುತ್ತಿದೆ. ಇದೀಗ ಪೆಟ್ರೋಲ್ ಬೆಲೆ ಪ್ರತಿ ಲೀ.ಗೆ ₹92.54 ಹಾಗೂ ಡೀಸೆಲ್ ₹85.07 ಇದೆ.

Published On - 9:39 am, Thu, 18 February 21

Follow Us
shruti hegde
shruti hegde
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ