AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ರಾಜಸ್ಥಾನದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ.. ಸಿಲಿಕಾನ್ ಸಿಟಿಯೂ ಶತಕದ ಹಾದಿಯತ್ತ!

Petrol Diesel Rate: ಕಳೆದ ಕೆಲವು ದಿನಗಳಿಂದ ಸತತವಾಗಿ ಇಂಧನದ ಬೆಲೆ ಏರಿಕೆಯತ್ತ ಸಾಗುತ್ತಲೇ ಇದೆ. ಇದೀಗ ಇಂದು (ಗುರವಾರ) ರಾಜಸ್ಥಾನದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿ ಗರಿಷ್ಠ ಮಟ್ಟ ತಲುಪಿದೆ. ಇದೇ ರೀತಿ ದರ ಹೆಚ್ಚಳವಾಗುತ್ತಿದ್ದರೆ ಬೆಂಗಳೂರಿನಲ್ಲೂ ಸಹ ಶತಕ ಬಾರಿಸುವ ಯಾವುದೇ ಸಂದೇಹವಿಲ್ಲ.

Petrol Price: ರಾಜಸ್ಥಾನದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ.. ಸಿಲಿಕಾನ್ ಸಿಟಿಯೂ ಶತಕದ ಹಾದಿಯತ್ತ!
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Feb 18, 2021 | 10:52 AM

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಂಧನದ ಬೆಲೆ ಏರಿಕೆಯತ್ತ ಸಾಗುತ್ತಲೇ ಇದೆ. ಇದೀಗ ಇಂದು (ಗುರವಾರ) ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ಪ್ರತಿ ಲೀ. ಪೆಟ್ರೋಲ್​ ಬೆಲೆ 25 ಪೈಸೆ ಹೆಚ್ಚಳದೊಂದಿಗೆ ದರ ₹100.13 ಆಗಿದೆ. ಡೀಸೆಲ್ ದರ ₹ 92.13 ಆಗಿದ್ದು, ಡೀಸೆಲ್ ಕೂಡಾ ಶತಕ ಭಾರಿಸುವ ಹಾದಿಯಲ್ಲಿ ಸಾಗುತ್ತಿದೆ.

ಕಳೆದ ತಿಂಗಳು ರಾಜ್ಯ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಇಂಧನಗಳಲ್ಲಿ ಶೇ.2ರಷ್ಟು ಕಡಿತಗೊಳಿಸಿದ್ದರೂ ಕೂಡಾ ರಾಜಸ್ಥಾನ ಅತಿ ಹೆಚ್ಚು ವ್ಯಾಟ್​ ದರವನ್ನು ಹೊಂದಿದೆ. ಉತ್ತರ ರಾಜಸ್ಥಾನದಲ್ಲಿರುವ ಶ್ರೀಗಂಗನಗರಕ್ಕೆ ಜೋದ್​ಪುರ್ ಮತ್ತು ಜೈಪುರ ಡಿಪೋಗಳಿಂದ ಇಂಧನವನ್ನು ಪೂರೈಸಲಾಗುತ್ತಿದ್ದು, ಇಂದು ರಾಜಸ್ಥಾನ ಪೆಟ್ರೋಲ್​ ದರದಲ್ಲಿ ಶತಕ ಭಾರಿಸಿ ಗರಿಷ್ಠ ಮಟ್ಟ ತಲುಪಿದೆ.

ಇದನ್ನೂ ಓದಿ: Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!

ಭಾರತದಲ್ಲಿ ಗುರವಾರವೂ ಕೂಡಾ ಇಂಧನದ ದರ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 34 ಪೈಸೆ ಹೆಚ್ಚಳವಾಗಿದೆ. ಇದೀಗ ಪ್ರತಿ ಲೀ.ಗೆ ₹89.88 ಹಾಗೂ ಡೀಸೆಲ್ ದರದಲ್ಲಿ 32 ಪೈಸೆ ಹೆಚ್ಚಳವಾಗಿದ್ದು ಇದೀಗ ₹80.27 ಆಗಿದೆ. ಬೆಂಗಳೂರಿನಲ್ಲೂ ಕೂಡಾ ಅದೆಷ್ಟೋ ಪ್ರತಿಭಟನೆ, ಧರಣಿ ನಡೆದಿದ್ದರೂ ಕೂಡಾ ಯಾವುದಕ್ಕೂ ಕ್ಯಾರೇ ಅನ್ನದೇ ದರ ಏರಿಕೆಯತ್ತ ಓಡುತ್ತಿದೆ. ಇದೀಗ ಪೆಟ್ರೋಲ್ ಬೆಲೆ ಪ್ರತಿ ಲೀ.ಗೆ ₹92.54 ಹಾಗೂ ಡೀಸೆಲ್ ₹85.07 ಇದೆ.

Published On - 9:39 am, Thu, 18 February 21

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್