AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.99 ರೂಪಾಯಿ ಇದೆ. ಅದೇ ರೀತಿ ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 104.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.68 ರೂಪಾಯಿ ಇದೆ.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ
ಪಿಟಿಐ ಚಿತ್ರ
TV9 Web
| Edited By: |

Updated on: Jul 09, 2021 | 9:11 AM

Share

Petrol Diesel Price Today| ದೆಹಲಿ: ಪೆಟ್ರೋಲ್​ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು ( ಜುಲೈ 9, ಶುಕ್ರವಾರ) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜುಲೈ ತಿಂಗಳಿನಲ್ಲಿ ಒಟ್ಟು 6 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಏರಿಕೆ ಮಾಡಲಾಗಿದೆ. ಸದ್ಯ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಳಿಕೆ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಎರಡು ದಿನಗಳ ಹಿಂದೆ ಇಂಧನ ದರ ಏರಿಕೆಯ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಇಂದು ಪೆಟ್ರೋಲ್​, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಮೇ 4 ರಿಂದ ಇಲ್ಲಿಯವರೆಗೆ ಒಟ್ಟು 38 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದವನ್ನು ಏರಿಕೆ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ 105.56 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.62 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 100.62 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.65 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 106.59 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್ ದರ 101.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.15 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.99 ರೂಪಾಯಿ ಇದ್ದು, ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 104.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.68 ರೂಪಾಯಿ ಇದೆ.

ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.88 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.40 ರೂಪಾಯಿ ಹಾಗೂ ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 102.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.14 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ