AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪ್ರಮುಖ ನಗರಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್​ ಬೆಲೆ ಇನ್ನೂ ಏರುತ್ತಲೇ ಇದೆ; ಇಂಧನ ದರ ವಿವರ ಹೀಗಿದೆ

Petrol Diesel Rate Today: ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ.

Petrol Price Today: ಪ್ರಮುಖ ನಗರಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್​ ಬೆಲೆ ಇನ್ನೂ ಏರುತ್ತಲೇ ಇದೆ; ಇಂಧನ ದರ ವಿವರ ಹೀಗಿದೆ
ಏರುತ್ತಲೇ ಇದೆ ಇಂಧನದ ದರ (ಪಿಟಿಐ ಚಿತ್ರ)
TV9 Web
| Edited By: |

Updated on:Jul 01, 2021 | 9:26 AM

Share

Petrol Diesel Price Today | ದೆಹಲಿ: ಜನರಿಗೆ ಅಗತ್ಯವಿರುವಂತಹ ಪೆಟ್ರೋಲ್​, ಡೀಸೆಲ್ ದರ ಏರುತ್ತಲೇ ಇದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಇಂಧನ ದರ ಇನ್ನೂ ಹೆಚ್ಚಳವಾಗುತ್ತಲೇ ಇದೆ, ಇಳಿಕೆಯತ್ತ ಸಾಗುವುದು ಯಾವಾಗ? ಎಂಬುದು ಗ್ರಾಹಕರ ಪ್ರಶ್ನೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್​ ದರ ಮಾತ್ರ ಕುಸಿತ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದನ್ನು ಗಮನಿಸಿದ ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ತೈಲ ದರದಲ್ಲಿ ಯಾವುದೇ ಬದಲಾವಣೆಗಳನ್ನು ಕಂಡಿಲ್ಲದ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ. ಇಳಿಕೆಯತ್ತ ಸಾಗದಿದ್ದರೂ ಹೆಚ್ಚಳವಾಗಿಲ್ಲವಲ್ಲ! ಅಷ್ಟೇ ಸಾಕು, ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇಂದು ( ಜುಲೈ 1, ಗುರವಾರ) ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತರುವ ವಿಚಾರ.

ಏರುತ್ತಲೇ ಇರುವ ಪೆಟ್ರೋಲ್​, ಡೀಸೆಲ್​ ದರದಿಂದ ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ತಮಿಳುನಾಡು, ಬಿಹಾರ, ಒಡಿಶಾ, ಕರ್ನಾಟಕ, ಲಡಾಕ್​, ಪಾಟ್ನಾದಲ್ಲಿ ಈಗಾಗಲೇ ಪೆಟ್ರೋಲ್​ ದರ 100ರ ಗಡಿ ದಾಟಿದೆ. ಹಾಗೆಯೇ ಕರ್ನಾಟಕದ ಬಹುತೇಹ ಜಿಲ್ಲೆಗಳಲ್ಲಿ ಸಹ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಕಳೆದ ಮೇ ತಿಂಗಳಿನಿಂದ ತೈಲ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇಲ್ಲಿಯವರೆಗೂ ಕೂಡಾ ಏರುತ್ತಲೇ ಇದೆ. ಒಟ್ಟು 32 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಲೀಟರ್​​ ಪೆಟ್ರೋಲ್​ ದರ 98.81 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 89.18 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 102.11 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.54 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 99.80 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 93.72 ರೂಪಾಯಿ ಆಗಿದೆ. ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.64 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.03 ರೂಪಾಯಿ ಇದೆ. ಇನ್ನು, ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 100.81 ರೂಪಾಯಿ ಇದ್ದರೆ, ಲೀಟರ್ ಡೀಸೆಲ್​ ದರ 94.52 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:07 am, Thu, 1 July 21

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?