AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadkari on Petrol Price: ಹೀಗಾದರೆ ಪ್ರತಿ ಲೀಟರ್ ಪೆಟ್ರೋಲ್ ₹15 ಕ್ಕೆ ಮಾರಾಟ ಮಾಡಬಹುದು; ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ಸರಾಸರಿ ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ತೆಗೆದುಕೊಂಡರೆ, ಪೆಟ್ರೋಲ್ ಪ್ರತಿ ಲೀಟರ್‌ಗೆ ₹ 15 ದರದಲ್ಲಿ ಲಭ್ಯವಿರುತ್ತದೆ. ಇದು ಜನರಿಗೆ ಪ್ರಯೋಜನವಾಗಲಿದೆ.

Gadkari on Petrol Price: ಹೀಗಾದರೆ ಪ್ರತಿ ಲೀಟರ್ ಪೆಟ್ರೋಲ್ ₹15 ಕ್ಕೆ ಮಾರಾಟ ಮಾಡಬಹುದು; ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?
ನಿತಿನ್ ಗಡ್ಕರಿ
ರಶ್ಮಿ ಕಲ್ಲಕಟ್ಟ
|

Updated on:Jul 06, 2023 | 12:53 PM

Share

ಒಂದು ಲೀಟರ್ ಪೆಟ್ರೋಲ್ (Petrol) ₹ 15 ಕ್ಕೆ ಸಿಗುವಂತೆ ಮಾಡಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ. ಮಂಗಳವಾರ ರಾಜಸ್ಥಾನದ (Rajasthan) ಪ್ರತಾಪಗಢದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿಗದ ಗಡ್ಕರಿ ದೇಶಾದ್ಯಂತ ರೈತರನ್ನು “ಉರ್ಜಾದಾತ” (ಶಕ್ತಿ ಪೂರೈಕೆದಾರರು) ಆಗಲು ಸಬಲೀಕರಣಗೊಳಿಸುವ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು. 60 ರಷ್ಟು ಎಥೆನಾಲ್ ಮತ್ತು 40 ರಷ್ಟು ವಿದ್ಯುತ್ ಮಿಶ್ರಣವನ್ನು ತೆಗೆದುಕೊಂಡರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತದೆ ಎಂದ ಗಡ್ಕರಿ, ಎಥೆನಾಲ್ ಮತ್ತು ವಿದ್ಯುತ್ ಮಿಶ್ರಣವನ್ನು ಬಳಸಿಕೊಳ್ಳುವ ಅನುಕೂಲಗಳ ಬಗ್ಗೆ ತಮ್ಮ ಭಾಷಣದಲ್ಲಿ ಒತ್ತಿ ಹೇಳಿದ್ದಾರೆ.

ರೈತರು ಅನ್ನದಾತರಷ್ಟೇ ಅಲ್ಲ, ಊರ್ಜದಾತರೂ ಆಗುತ್ತಾರೆ ಎಂಬ ಮನಸ್ಥಿತಿ ನಮ್ಮ ಸರ್ಕಾರದ್ದು. ಈಗ ಎಲ್ಲ ವಾಹನಗಳು ರೈತರು ಉತ್ಪಾದಿಸುವ ಎಥೆನಾಲ್‌ನಿಂದ ಓಡುತ್ತವೆ. ಸರಾಸರಿ ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ತೆಗೆದುಕೊಂಡರೆ, ಪೆಟ್ರೋಲ್ ಪ್ರತಿ ಲೀಟರ್‌ಗೆ ₹ 15 ದರದಲ್ಲಿ ಲಭ್ಯವಿರುತ್ತದೆ. ಇದು ಜನರಿಗೆ ಪ್ರಯೋಜನವಾಗಲಿದೆ. ಅಂತಹ ಮಿಶ್ರಣವು ಮಾಲಿನ್ಯ ಮತ್ತು ಆಮದುಗಳನ್ನು ಕಡಿಮೆ ಮಾಡುವುದಲ್ಲದೆ ₹ 16 ಲಕ್ಷ ಕೋಟಿಗಳ ಬೃಹತ್ ಆಮದು ವೆಚ್ಚವನ್ನು ರೈತರಿಗೆ ಸಿಗುವಂತೆ ಮಾಡುತ್ತದೆ ಎಂದು ಗಡ್ಕರಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಗಡ್ಕರಿ ಅವರು ಪ್ರತಾಪಗಢದಲ್ಲಿ ಒಟ್ಟು ₹ 5,600 ಕೋಟಿಗಳ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದ್ದು, ಒಟ್ಟು 219 ಕಿ.ಮೀ ಉದ್ದದ ₹ 3,775 ಕೋಟಿ ವೆಚ್ಚದ ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಅವುಗಳಲ್ಲಿ ಅಜ್ಮೀರ್ ಮತ್ತು ಭಿಲ್ವಾರಾ ಜಿಲ್ಲೆಗಳಿಗೆ ಸಂಪರ್ಕವನ್ನು ಸುಧಾರಿಸಲು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಿಶನ್‌ಗಡ್‌ನಿಂದ ಗುಲ್ಬಾಪುರದವರೆಗೆ ಆರು ಪಥಗಳ ವಿಭಾಗವಾಗಿದೆ.

ಇದನ್ನೂ ಓದಿ: Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ

ರಾಜಸ್ಥಾನದಲ್ಲಿ, ಕೇಂದ್ರ ರಸ್ತೆಗಳ ನಿಧಿಯಡಿ ₹ 2,250 ಕೋಟಿ ವೆಚ್ಚದಲ್ಲಿ 74 ಯೋಜನೆಗಳಿಗೆ ಅನುಮೋದನೆಯನ್ನು ಈ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Thu, 6 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ