AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಇದು ಪ್ರಜಾಪ್ರಭುತ್ವ ವಿರೋಧಿ; ಸುಪ್ರೀಂಕೋರ್ಟ್​ನಲ್ಲಿ ನಿಷೇಧ ಪ್ರಶ್ನಿಸಲು ಪಿಎಫ್​ಐ ನಾಯಕರ ನಿರ್ಧಾರ

ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

PFI Ban: ಇದು ಪ್ರಜಾಪ್ರಭುತ್ವ ವಿರೋಧಿ; ಸುಪ್ರೀಂಕೋರ್ಟ್​ನಲ್ಲಿ ನಿಷೇಧ ಪ್ರಶ್ನಿಸಲು ಪಿಎಫ್​ಐ ನಾಯಕರ ನಿರ್ಧಾರ
ಪಿಎಫ್ಐ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 29, 2022 | 11:59 AM

Share

ದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India – PFI) ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುತ್ತೇವೆ ಎಂದು ಪಿಎಫ್​ಐನ ಅಂಗಸಂಸ್ಥೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (Campus Front of India – CFI) ಘೋಷಿಸಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

ಹತ್ತಾರು ವರ್ಷಗಳಿಂದ ನಾವು ವಿದ್ಯಾರ್ಥಿಗಳ ಜೊತೆಗೆ ಕೆಲಸ ಮಾಡುತ್ತಿದ್ದೆವು. ಪ್ರಜಾಸತ್ತಾತ್ಮಕ ಆಶಯ ಎತ್ತಿಹಿಡಿಯುವ, ಸಾಮಾಜಿಕ ಬದ್ಧತೆ, ಕಾಳಜಿ ಇರುವ ಯುವಜನರನ್ನು ರೂಪಿಸಲು ಯತ್ನಿಸುತ್ತಿದ್ದೆವು. ಪಿಎಫ್​ಐ ಮತ್ತು ಸಿಎಫ್​ಐ ವಿರುದ್ಧ ಕೇಂದ್ರ ಸರ್ಕಾರವು ಮಾಡಿರುವ ಎಲ್ಲ ಆರೋಪಗಳನ್ನು ನಿರಾಕರಿಸುತ್ತೇವೆ. ನೆಲದ ಕಾನೂನಿನ ವಿರುದ್ಧ ಯಾವುದೇ ಕೆಲಸ ನಾವು ಮಾಡಿಲ್ಲ ಎಂದು ಸಿಎಫ್​ಐ ತಿಳಿಸಿದೆ. ಸಂಘಟನೆಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಬೇಡಿ. ಅಕಸ್ಮಾತ್ ಬೇರೆ ಯಾರಾದರೂ ಸಂಘಟನೆಯ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದರೆ ಅಂಥವರಿಂದ ನೀವು ದೂರ ಇರಿ ಎಂದು ಸಿಎಫ್​ಐ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.

ಈ ನಡುವೆ ಕೇರಳದ ಪಿಎಫ್​ಐ ಘಟಕವನ್ನು ವಿಸರ್ಸಿಸಲಾಗಿದೆ. ಪಿಎಫ್​ಐ ಹೆಸರಿನಲ್ಲಿ ನಡೆಯುತ್ತಿದ್ದ ಎಲ್ಲ ರಾಜಕೀಯ ಮತ್ತು ಸಂಘಟನಾತ್ಮಕ ಚಟುವಟಿಕೆ ನಿಲ್ಲಿಸುವಂತೆ ಪಿಎಫ್​ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ಅಬ್ದುಲ್ ಸತ್ತಾರ್ ಕರೆ ನೀಡಿದ್ದಾರೆ ಎನ್ನುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆದರೆ ಪಿಎಫ್​ಐನ ಯಾವುದೇ ಪದಾಧಿಕಾರಿ ಈ ಪತ್ರವನ್ನು ನಿರಾಕರಿಸಿಲ್ಲ. ಪಿಎಫ್​ಐ ವಿಸರ್ಜನೆಯಾಗಿದೆ ಎಂದು ಪ್ರಶ್ನಾರ್ಥಕ ಚಿಹ್ನೆಯ ಶೀರ್ಷಿಕೆಯೊಂದಿಗೆ ‘ದಿ ಹಿಂದೂ’ ಜಾಲತಾಣವು ವರದಿ ಮಾಡಿದೆ.

ಪಿಎಫ್​ಐ ನಿಷೇಧ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿದೆ. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿದೆ.

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ